ಬೆಂಗಳೂರು: ಒಂದನೇ ತರಗತಿ ದಾಖಲಾತಿಗೆ ಆರು ವರ್ಷ ತುಂಬಿರಬೇಕೆಂಬ ಕಡ್ಡಾಯ ನಿಯಮದಲ್ಲಿ ಸರ್ಕಾರ ಈ ವರ್ಷವೂ 60 ದಿನಗಳ ವಿನಾಯಿತಿ ನೀಡಿ ಮಹತ್ವದ ತೀರ್ಮಾನ ಕೈಗೊಂಡಿದೆ.
ವಿಧಾನಸಭೆಯಲ್ಲಿಂದು ಈ ಸಂಬಂಧ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ಘೋಷಣೆ ಮಾಡಿದರು. ಒಂದನೇ ತರಗತಿಗೆ ದಾಖಲಾಗಲು ಆರು ವರ್ಷ ತುಂಬಿರಬೇಕೆಂಬ ನಿಯಮದಲ್ಲಿ 2026-27 ನೇ ವರ್ಷದ ಶೈಕ್ಷಣಿಕ ವರ್ಷದಲ್ಲಿ 60 ದಿನಗಳ ಸಡಿಲಿಕೆ ಕೊಡುವ ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ:
ಈ ನಿರ್ಧಾರದಿಂದ 5 ವರ್ಷ 10 ತಿಂಗಳು ಅಥವಾ ಅದರ ಮೇಲೆ ವಯಸ್ಸಾಗಿರುವ ಮಕ್ಕಳೂ ಸಹ ಈ ವರ್ಷ ಒಂದನೇ ತರಗತಿಗೆ ದಾಖಲಾಗಬಹುದು. ಈ ಸಡಿಲಿಕೆ ಎಲ್ಕೆಜಿ, ಯುಕೆಜಿ, ಒಂದನೇ ತರಗತಿಗೆ ಅನ್ವಯವಾಗಲಿದೆ.
ಮಕ್ಕಳ ಪೋಷಕರು ವಯೋಮಿತಿ ಸಡಿಲಿಕೆಗೆ ಆಗ್ರಹಿಸಿ ಹೋರಾಟ ನಡೆಸುತ್ತಿದ್ದರು. ಸಿಎಂ, ಡಿಸಿಎಂ, ಶಿಕ್ಷಣ ಸಚಿವರ ಮನೆಗಳಿಗೆ ಪದೇಪದೇ ಹೋಗಿ ಒತ್ತಾಯ ಮಾಡುತ್ತಿದ್ದರು. ಈಗ ಸರ್ಕಾರದ ನಿರ್ಧಾರದಿಂದ ಈ ಮಕ್ಕಳ ಪೋಷಕರು ನಿಟ್ಟುಸಿರು ಬಿಡುವಂತಾಗಿದೆ.
ಪ್ರತೀ ಬಾರಿಯೂ ಈ ಸಮಸ್ಯೆ ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಹೊಸದಾಗಿ ಕಾನೂನು ತಂದು ಶಾಶ್ವತ ಪರಿಹಾರ ಕಂಡುಕೊಳ್ಳಲು ಸರ್ಕಾರ ನಿರ್ಧರಿಸಿದೆ. ಇದುವರೆಗೆ ಎಲ್ಕೆಜಿ, ಯುಕೆಜಿಗೆ ರೆಗ್ಯುಲೇಟರಿ ನಿಯಮ ಇರಲಿಲ್ಲ. ಇದಕ್ಕಾಗಿ ಹೊಸ ಕಾನೂನು ತಂದು ಎಲ್ಕೆಜಿ, ಯುಕೆಜಿಯಲ್ಲೇ ದಾಖಲಾತಿಗೆ ವಯೋಮಿತಿ ನಿಗದಿ ಮಾಡಿ ಸ್ಪಷ್ಟತೆ ಕೊಡಲಾಗುವುದು. ಮುಂದಿನ ಅಧಿವೇಶನದಲ್ಲಿ ಈ ಸಂಬಂಧ ಮಸೂದೆ ಮಂಡನೆ ಮಾಡಲಾಗುವುದು ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.
ಇದನ್ನೂ ಓದಿ:
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…