ಬೆಂಗಳೂರು: ಒಂದನೇ ತರಗತಿ ದಾಖಲಾತಿಗೆ ಆರು ವರ್ಷ ತುಂಬಿರಬೇಕೆಂಬ ಕಡ್ಡಾಯ ನಿಯಮದಲ್ಲಿ ಸರ್ಕಾರ ಈ ವರ್ಷವೂ 60 ದಿನಗಳ ವಿನಾಯಿತಿ ನೀಡಿ ಮಹತ್ವದ ತೀರ್ಮಾನ ಕೈಗೊಂಡಿದೆ.
ವಿಧಾನಸಭೆಯಲ್ಲಿಂದು ಈ ಸಂಬಂಧ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ಘೋಷಣೆ ಮಾಡಿದರು. ಒಂದನೇ ತರಗತಿಗೆ ದಾಖಲಾಗಲು ಆರು ವರ್ಷ ತುಂಬಿರಬೇಕೆಂಬ ನಿಯಮದಲ್ಲಿ 2026-27 ನೇ ವರ್ಷದ ಶೈಕ್ಷಣಿಕ ವರ್ಷದಲ್ಲಿ 60 ದಿನಗಳ ಸಡಿಲಿಕೆ ಕೊಡುವ ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ:
ಈ ನಿರ್ಧಾರದಿಂದ 5 ವರ್ಷ 10 ತಿಂಗಳು ಅಥವಾ ಅದರ ಮೇಲೆ ವಯಸ್ಸಾಗಿರುವ ಮಕ್ಕಳೂ ಸಹ ಈ ವರ್ಷ ಒಂದನೇ ತರಗತಿಗೆ ದಾಖಲಾಗಬಹುದು. ಈ ಸಡಿಲಿಕೆ ಎಲ್ಕೆಜಿ, ಯುಕೆಜಿ, ಒಂದನೇ ತರಗತಿಗೆ ಅನ್ವಯವಾಗಲಿದೆ.
ಮಕ್ಕಳ ಪೋಷಕರು ವಯೋಮಿತಿ ಸಡಿಲಿಕೆಗೆ ಆಗ್ರಹಿಸಿ ಹೋರಾಟ ನಡೆಸುತ್ತಿದ್ದರು. ಸಿಎಂ, ಡಿಸಿಎಂ, ಶಿಕ್ಷಣ ಸಚಿವರ ಮನೆಗಳಿಗೆ ಪದೇಪದೇ ಹೋಗಿ ಒತ್ತಾಯ ಮಾಡುತ್ತಿದ್ದರು. ಈಗ ಸರ್ಕಾರದ ನಿರ್ಧಾರದಿಂದ ಈ ಮಕ್ಕಳ ಪೋಷಕರು ನಿಟ್ಟುಸಿರು ಬಿಡುವಂತಾಗಿದೆ.
ಪ್ರತೀ ಬಾರಿಯೂ ಈ ಸಮಸ್ಯೆ ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಹೊಸದಾಗಿ ಕಾನೂನು ತಂದು ಶಾಶ್ವತ ಪರಿಹಾರ ಕಂಡುಕೊಳ್ಳಲು ಸರ್ಕಾರ ನಿರ್ಧರಿಸಿದೆ. ಇದುವರೆಗೆ ಎಲ್ಕೆಜಿ, ಯುಕೆಜಿಗೆ ರೆಗ್ಯುಲೇಟರಿ ನಿಯಮ ಇರಲಿಲ್ಲ. ಇದಕ್ಕಾಗಿ ಹೊಸ ಕಾನೂನು ತಂದು ಎಲ್ಕೆಜಿ, ಯುಕೆಜಿಯಲ್ಲೇ ದಾಖಲಾತಿಗೆ ವಯೋಮಿತಿ ನಿಗದಿ ಮಾಡಿ ಸ್ಪಷ್ಟತೆ ಕೊಡಲಾಗುವುದು. ಮುಂದಿನ ಅಧಿವೇಶನದಲ್ಲಿ ಈ ಸಂಬಂಧ ಮಸೂದೆ ಮಂಡನೆ ಮಾಡಲಾಗುವುದು ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.
ಇದನ್ನೂ ಓದಿ:
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…
ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…
50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಘೋಷಿಸಿದ ವಿಜಯ್ ಚೆನ್ನೈ: ರೈತರಿಗೆ ಭಾರಿ ನೆರವು ಘೋಷಿಸಿರುವ ತಮಿಳುನಾಡು…
ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ ನವದೆಹಲಿ: ದಿವಂಗತ ಬಾಲಿವುಡ್ ನಟ ಧರ್ಮೇಂದ್ರ ಅವರಿಗೆ…
ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು ಪುತ್ತೂರು : ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ವಿದ್ಯುತ್ ಶಾಕ್ ಹೊಡೆದು ನೆಲಕ್ಕೆ…
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…