Featured

1 ಮತ್ತು 2 ನೇ ತರಗತಿಯ ಶಾಲಾ ಮಕ್ಕಳಿಗೆ ಹೋಂ ವರ್ಕ್ ಕೊಡುವಂತಿಲ್ಲ ; ಕೇಂದ್ರ ಸರಕಾರದಿಂದ ಗುಡ್ ನ್ಯೂಸ್ !!

ಹೊಸದಿಲ್ಲಿ: ಕೇಂದ್ರ ಸರ್ಕಾರವು ಮಕ್ಕಳಿಗೆ ಹೋಂವರ್ಕ್ ಕೊಡುವ ಹಾಗೂ ಶಾಲಾ ಮಕ್ಕಳ ಬ್ಯಾಗಿನ ಹೊರೆ ಇಳಿಸುವ ವಿಚಾರದಲ್ಲಿ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ.

ಶಾಲಾ ಮಕ್ಕಳ ಬ್ಯಾಗಿನ ಹೊರೆ ಇಳಿಸುವ ಹಾಗೂ ಮಕ್ಕಳಿಗೆ ಹೋಂವರ್ಕ್ ಕೊಡುವ ವಿಚಾರದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ತಮ್ಮ ಮಾರ್ಗದರ್ಶಿ ಸೂತ್ರ ಪಾಲಿಸುವಂತೆ ನಿರ್ದೇಶನ ನೀಡಿದೆ.

ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು 1 ಮತ್ತು 2 ನೇ ತರಗತಿಯ ಮಕ್ಕಳ ಬ್ಯಾಗಿನ ತೂಕ ಒಂದೂವರೆ ಕೆಜಿಯಷ್ಟು ಮಾತ್ರ ಇರಬೇಕು ಎಂದು ನಿರ್ದೇಶಿಸಿದೆ.

ಇದೇ ರೀತಿ, 3 ಮತ್ತು 5 ನೇ ತರಗತಿಯ ಮಕ್ಕಳಿಗೆ 2 – 3 ಕೆ.ಜಿ, 6 ರಿಂದ 7 ನೇ ತರಗತಿಯ ಮಕ್ಕಳಿಗೆ 4 ಕೆಜಿ, 8 ಮತ್ತು 9 ನೇ ತರಗತಿಯ ಮಕ್ಕಳಿಗೆ ನಾಲ್ಕೂವರೆ ಕೆಜಿ ಹಾಗೂ 10 ನೇ ತರಗತಿಯ ಮಕ್ಕಳಿಗೆ ಐದು ಕೆಜಿ ಬ್ಯಾಗ್ ತೂಕ ಮೀರುವಂತಿಲ್ಲ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಮಾರ್ಗದರ್ಶಿ ಸೂತ್ರದಲ್ಲಿ ತಿಳಿಸಿದೆ. 

ಅಲ್ಲದೆ, ಶಿಕ್ಷಕರು 1 ಮತ್ತು 2 ನೇ ತರಗತಿಯ ಶಾಲಾ ಮಕ್ಕಳಿಗೆ ಹೋಂ ವರ್ಕ್ ಕೊಡುವಂತಿಲ್ಲ ಎಂದೂ ಸೂಚನೆ ನೀಡಿದೆ. ಇನ್ನು, 1 ಮತ್ತು 2 ನೇ ತರಗತಿಯ ಶಾಲಾ ಮಕ್ಕಳಿಗೆ ಗಣಿತ ಹಾಗೂ ಭಾಷಾ ವಿಷಯಗಳನ್ನು ಮಾತ್ರ ನಿಗದಿ ಮಾಡಬೇಕು. ಹಾಗೂ, 3 ಮತ್ತು 4 ನೇ ತರಗತಿ ಓದುತ್ತಿರುವ ಮಕ್ಕಳಿಗೆ ಗಣಿತ, ಭಾಷೆ ಹಾಗೂ ಇವಿಎಸ್‌ ಭಾಷೆಗಳನ್ನು ಮಾತ್ರ ನಿಗದಿ ಮಾಡಬೇಕು ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಸೂಚಿಸಿದೆ.

ಕೇಂದ್ರ ಸರಕಾರದ ಈ ಸೂಚನೆಗಳನ್ನು ಹೊರತುಪಡಿಸಿ ಶಾಲೆಗಳು ಮಕ್ಕಳಿಗೆ ಅಗತ್ಯಕ್ಕಿಂತ ಹೆಚ್ಚು ಪುಸ್ತಕಗಳನ್ನು ತರಲು ಹೇಳಬಾರದು. ಹಾಗೂ ಬ್ಯಾಗಿನ ತೂಕ ಹೆಚ್ಚದಂತೆ ನೋಡಿಕೊಳ್ಳಬೇಕು ಎಂದೂ ಸೂಚಿಸಿದೆ.
Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

12 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

12 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

12 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

13 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

14 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

14 hours ago