Featured

1 ಮತ್ತು 2 ನೇ ತರಗತಿಯ ಶಾಲಾ ಮಕ್ಕಳಿಗೆ ಹೋಂ ವರ್ಕ್ ಕೊಡುವಂತಿಲ್ಲ ; ಕೇಂದ್ರ ಸರಕಾರದಿಂದ ಗುಡ್ ನ್ಯೂಸ್ !!

ಹೊಸದಿಲ್ಲಿ: ಕೇಂದ್ರ ಸರ್ಕಾರವು ಮಕ್ಕಳಿಗೆ ಹೋಂವರ್ಕ್ ಕೊಡುವ ಹಾಗೂ ಶಾಲಾ ಮಕ್ಕಳ ಬ್ಯಾಗಿನ ಹೊರೆ ಇಳಿಸುವ ವಿಚಾರದಲ್ಲಿ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ.

ಶಾಲಾ ಮಕ್ಕಳ ಬ್ಯಾಗಿನ ಹೊರೆ ಇಳಿಸುವ ಹಾಗೂ ಮಕ್ಕಳಿಗೆ ಹೋಂವರ್ಕ್ ಕೊಡುವ ವಿಚಾರದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ತಮ್ಮ ಮಾರ್ಗದರ್ಶಿ ಸೂತ್ರ ಪಾಲಿಸುವಂತೆ ನಿರ್ದೇಶನ ನೀಡಿದೆ.

ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು 1 ಮತ್ತು 2 ನೇ ತರಗತಿಯ ಮಕ್ಕಳ ಬ್ಯಾಗಿನ ತೂಕ ಒಂದೂವರೆ ಕೆಜಿಯಷ್ಟು ಮಾತ್ರ ಇರಬೇಕು ಎಂದು ನಿರ್ದೇಶಿಸಿದೆ.

ಇದೇ ರೀತಿ, 3 ಮತ್ತು 5 ನೇ ತರಗತಿಯ ಮಕ್ಕಳಿಗೆ 2 – 3 ಕೆ.ಜಿ, 6 ರಿಂದ 7 ನೇ ತರಗತಿಯ ಮಕ್ಕಳಿಗೆ 4 ಕೆಜಿ, 8 ಮತ್ತು 9 ನೇ ತರಗತಿಯ ಮಕ್ಕಳಿಗೆ ನಾಲ್ಕೂವರೆ ಕೆಜಿ ಹಾಗೂ 10 ನೇ ತರಗತಿಯ ಮಕ್ಕಳಿಗೆ ಐದು ಕೆಜಿ ಬ್ಯಾಗ್ ತೂಕ ಮೀರುವಂತಿಲ್ಲ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಮಾರ್ಗದರ್ಶಿ ಸೂತ್ರದಲ್ಲಿ ತಿಳಿಸಿದೆ. 

ಅಲ್ಲದೆ, ಶಿಕ್ಷಕರು 1 ಮತ್ತು 2 ನೇ ತರಗತಿಯ ಶಾಲಾ ಮಕ್ಕಳಿಗೆ ಹೋಂ ವರ್ಕ್ ಕೊಡುವಂತಿಲ್ಲ ಎಂದೂ ಸೂಚನೆ ನೀಡಿದೆ. ಇನ್ನು, 1 ಮತ್ತು 2 ನೇ ತರಗತಿಯ ಶಾಲಾ ಮಕ್ಕಳಿಗೆ ಗಣಿತ ಹಾಗೂ ಭಾಷಾ ವಿಷಯಗಳನ್ನು ಮಾತ್ರ ನಿಗದಿ ಮಾಡಬೇಕು. ಹಾಗೂ, 3 ಮತ್ತು 4 ನೇ ತರಗತಿ ಓದುತ್ತಿರುವ ಮಕ್ಕಳಿಗೆ ಗಣಿತ, ಭಾಷೆ ಹಾಗೂ ಇವಿಎಸ್‌ ಭಾಷೆಗಳನ್ನು ಮಾತ್ರ ನಿಗದಿ ಮಾಡಬೇಕು ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಸೂಚಿಸಿದೆ.

ಕೇಂದ್ರ ಸರಕಾರದ ಈ ಸೂಚನೆಗಳನ್ನು ಹೊರತುಪಡಿಸಿ ಶಾಲೆಗಳು ಮಕ್ಕಳಿಗೆ ಅಗತ್ಯಕ್ಕಿಂತ ಹೆಚ್ಚು ಪುಸ್ತಕಗಳನ್ನು ತರಲು ಹೇಳಬಾರದು. ಹಾಗೂ ಬ್ಯಾಗಿನ ತೂಕ ಹೆಚ್ಚದಂತೆ ನೋಡಿಕೊಳ್ಳಬೇಕು ಎಂದೂ ಸೂಚಿಸಿದೆ.
Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

3 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

3 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

4 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

4 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

4 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

4 hours ago