Featured

1 ಮತ್ತು 2 ನೇ ತರಗತಿಯ ಶಾಲಾ ಮಕ್ಕಳಿಗೆ ಹೋಂ ವರ್ಕ್ ಕೊಡುವಂತಿಲ್ಲ ; ಕೇಂದ್ರ ಸರಕಾರದಿಂದ ಗುಡ್ ನ್ಯೂಸ್ !!

ಹೊಸದಿಲ್ಲಿ: ಕೇಂದ್ರ ಸರ್ಕಾರವು ಮಕ್ಕಳಿಗೆ ಹೋಂವರ್ಕ್ ಕೊಡುವ ಹಾಗೂ ಶಾಲಾ ಮಕ್ಕಳ ಬ್ಯಾಗಿನ ಹೊರೆ ಇಳಿಸುವ ವಿಚಾರದಲ್ಲಿ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ.

ಶಾಲಾ ಮಕ್ಕಳ ಬ್ಯಾಗಿನ ಹೊರೆ ಇಳಿಸುವ ಹಾಗೂ ಮಕ್ಕಳಿಗೆ ಹೋಂವರ್ಕ್ ಕೊಡುವ ವಿಚಾರದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ತಮ್ಮ ಮಾರ್ಗದರ್ಶಿ ಸೂತ್ರ ಪಾಲಿಸುವಂತೆ ನಿರ್ದೇಶನ ನೀಡಿದೆ.

ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು 1 ಮತ್ತು 2 ನೇ ತರಗತಿಯ ಮಕ್ಕಳ ಬ್ಯಾಗಿನ ತೂಕ ಒಂದೂವರೆ ಕೆಜಿಯಷ್ಟು ಮಾತ್ರ ಇರಬೇಕು ಎಂದು ನಿರ್ದೇಶಿಸಿದೆ.

ಇದೇ ರೀತಿ, 3 ಮತ್ತು 5 ನೇ ತರಗತಿಯ ಮಕ್ಕಳಿಗೆ 2 – 3 ಕೆ.ಜಿ, 6 ರಿಂದ 7 ನೇ ತರಗತಿಯ ಮಕ್ಕಳಿಗೆ 4 ಕೆಜಿ, 8 ಮತ್ತು 9 ನೇ ತರಗತಿಯ ಮಕ್ಕಳಿಗೆ ನಾಲ್ಕೂವರೆ ಕೆಜಿ ಹಾಗೂ 10 ನೇ ತರಗತಿಯ ಮಕ್ಕಳಿಗೆ ಐದು ಕೆಜಿ ಬ್ಯಾಗ್ ತೂಕ ಮೀರುವಂತಿಲ್ಲ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಮಾರ್ಗದರ್ಶಿ ಸೂತ್ರದಲ್ಲಿ ತಿಳಿಸಿದೆ. 

ಅಲ್ಲದೆ, ಶಿಕ್ಷಕರು 1 ಮತ್ತು 2 ನೇ ತರಗತಿಯ ಶಾಲಾ ಮಕ್ಕಳಿಗೆ ಹೋಂ ವರ್ಕ್ ಕೊಡುವಂತಿಲ್ಲ ಎಂದೂ ಸೂಚನೆ ನೀಡಿದೆ. ಇನ್ನು, 1 ಮತ್ತು 2 ನೇ ತರಗತಿಯ ಶಾಲಾ ಮಕ್ಕಳಿಗೆ ಗಣಿತ ಹಾಗೂ ಭಾಷಾ ವಿಷಯಗಳನ್ನು ಮಾತ್ರ ನಿಗದಿ ಮಾಡಬೇಕು. ಹಾಗೂ, 3 ಮತ್ತು 4 ನೇ ತರಗತಿ ಓದುತ್ತಿರುವ ಮಕ್ಕಳಿಗೆ ಗಣಿತ, ಭಾಷೆ ಹಾಗೂ ಇವಿಎಸ್‌ ಭಾಷೆಗಳನ್ನು ಮಾತ್ರ ನಿಗದಿ ಮಾಡಬೇಕು ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಸೂಚಿಸಿದೆ.

ಕೇಂದ್ರ ಸರಕಾರದ ಈ ಸೂಚನೆಗಳನ್ನು ಹೊರತುಪಡಿಸಿ ಶಾಲೆಗಳು ಮಕ್ಕಳಿಗೆ ಅಗತ್ಯಕ್ಕಿಂತ ಹೆಚ್ಚು ಪುಸ್ತಕಗಳನ್ನು ತರಲು ಹೇಳಬಾರದು. ಹಾಗೂ ಬ್ಯಾಗಿನ ತೂಕ ಹೆಚ್ಚದಂತೆ ನೋಡಿಕೊಳ್ಳಬೇಕು ಎಂದೂ ಸೂಚಿಸಿದೆ.
Vishwa News 24

Recent Posts

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

55 minutes ago

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …

1 hour ago

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

1 hour ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

1 hour ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

1 hour ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

2 hours ago