Featured

1 ಮತ್ತು 2 ನೇ ತರಗತಿಯ ಶಾಲಾ ಮಕ್ಕಳಿಗೆ ಹೋಂ ವರ್ಕ್ ಕೊಡುವಂತಿಲ್ಲ ; ಕೇಂದ್ರ ಸರಕಾರದಿಂದ ಗುಡ್ ನ್ಯೂಸ್ !!

ಹೊಸದಿಲ್ಲಿ: ಕೇಂದ್ರ ಸರ್ಕಾರವು ಮಕ್ಕಳಿಗೆ ಹೋಂವರ್ಕ್ ಕೊಡುವ ಹಾಗೂ ಶಾಲಾ ಮಕ್ಕಳ ಬ್ಯಾಗಿನ ಹೊರೆ ಇಳಿಸುವ ವಿಚಾರದಲ್ಲಿ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ.

ಶಾಲಾ ಮಕ್ಕಳ ಬ್ಯಾಗಿನ ಹೊರೆ ಇಳಿಸುವ ಹಾಗೂ ಮಕ್ಕಳಿಗೆ ಹೋಂವರ್ಕ್ ಕೊಡುವ ವಿಚಾರದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ತಮ್ಮ ಮಾರ್ಗದರ್ಶಿ ಸೂತ್ರ ಪಾಲಿಸುವಂತೆ ನಿರ್ದೇಶನ ನೀಡಿದೆ.

ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು 1 ಮತ್ತು 2 ನೇ ತರಗತಿಯ ಮಕ್ಕಳ ಬ್ಯಾಗಿನ ತೂಕ ಒಂದೂವರೆ ಕೆಜಿಯಷ್ಟು ಮಾತ್ರ ಇರಬೇಕು ಎಂದು ನಿರ್ದೇಶಿಸಿದೆ.

ಇದೇ ರೀತಿ, 3 ಮತ್ತು 5 ನೇ ತರಗತಿಯ ಮಕ್ಕಳಿಗೆ 2 – 3 ಕೆ.ಜಿ, 6 ರಿಂದ 7 ನೇ ತರಗತಿಯ ಮಕ್ಕಳಿಗೆ 4 ಕೆಜಿ, 8 ಮತ್ತು 9 ನೇ ತರಗತಿಯ ಮಕ್ಕಳಿಗೆ ನಾಲ್ಕೂವರೆ ಕೆಜಿ ಹಾಗೂ 10 ನೇ ತರಗತಿಯ ಮಕ್ಕಳಿಗೆ ಐದು ಕೆಜಿ ಬ್ಯಾಗ್ ತೂಕ ಮೀರುವಂತಿಲ್ಲ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಮಾರ್ಗದರ್ಶಿ ಸೂತ್ರದಲ್ಲಿ ತಿಳಿಸಿದೆ. 

ಅಲ್ಲದೆ, ಶಿಕ್ಷಕರು 1 ಮತ್ತು 2 ನೇ ತರಗತಿಯ ಶಾಲಾ ಮಕ್ಕಳಿಗೆ ಹೋಂ ವರ್ಕ್ ಕೊಡುವಂತಿಲ್ಲ ಎಂದೂ ಸೂಚನೆ ನೀಡಿದೆ. ಇನ್ನು, 1 ಮತ್ತು 2 ನೇ ತರಗತಿಯ ಶಾಲಾ ಮಕ್ಕಳಿಗೆ ಗಣಿತ ಹಾಗೂ ಭಾಷಾ ವಿಷಯಗಳನ್ನು ಮಾತ್ರ ನಿಗದಿ ಮಾಡಬೇಕು. ಹಾಗೂ, 3 ಮತ್ತು 4 ನೇ ತರಗತಿ ಓದುತ್ತಿರುವ ಮಕ್ಕಳಿಗೆ ಗಣಿತ, ಭಾಷೆ ಹಾಗೂ ಇವಿಎಸ್‌ ಭಾಷೆಗಳನ್ನು ಮಾತ್ರ ನಿಗದಿ ಮಾಡಬೇಕು ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಸೂಚಿಸಿದೆ.

ಕೇಂದ್ರ ಸರಕಾರದ ಈ ಸೂಚನೆಗಳನ್ನು ಹೊರತುಪಡಿಸಿ ಶಾಲೆಗಳು ಮಕ್ಕಳಿಗೆ ಅಗತ್ಯಕ್ಕಿಂತ ಹೆಚ್ಚು ಪುಸ್ತಕಗಳನ್ನು ತರಲು ಹೇಳಬಾರದು. ಹಾಗೂ ಬ್ಯಾಗಿನ ತೂಕ ಹೆಚ್ಚದಂತೆ ನೋಡಿಕೊಳ್ಳಬೇಕು ಎಂದೂ ಸೂಚಿಸಿದೆ.
Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

21 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

21 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

22 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

22 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

23 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

24 hours ago