Featured

10 ಲಕ್ಷ ಕೋಟಿ ರೂ. ದಾಟಿದ ಅಂಬಾನಿ ನೇತೃತ್ವದ ರಿಲಯನ್ಸ್‌ ಮಾರುಕಟ್ಟೆ ಮೌಲ್ಯ , ಐತಿಹಾಸಿಕ ಸಾಧನೆ ಸೃಷ್ಟಿಸಿದ ದೇಶದ ಮೊದಲ ಕಂಪನಿ -Vishwanews24

ಮುಂಬಯಿ: ಮುಖೇಶ್‌ ಅಂಬಾನಿ ನೇತೃತ್ವದ ರಿಲಯನ್ಸ್‌ ಇಂಡಸ್ಟ್ರೀಸ್‌ ಲಿ. (ಆರ್‌ಐಎಲ್‌) ಮಾರುಕಟ್ಟೆ ಮೌಲ್ಯ ಗುರುವಾರ 10 ಲಕ್ಷ ಕೋಟಿ ರೂಪಾಯಿ ದಾಟಿದೆ. ಈ ಮೂಲಕ ಈ ಸಾಧನೆ ಮೆರೆದ ಭಾರದ ಮೊದಲ ಕಂಪನಿ ಎಂಬ ಹೆಗ್ಗಳಿಕೆಗೆ ಆರ್‌ಐಎಲ್‌ ಪಾತ್ರವಾಗಿದೆ.

ಗುರುವಾರ ರಿಲಯನ್ಸ್ ಷೇರು ಸಾರ್ವಕಾಲಿಕ ಗರಿಷ್ಠ 1,581 ರೂ. ತಲುಪುವ ಮೂಲಕ ಮಾರುಕಟ್ಟೆ ಮೌಲ್ಯ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿದೆ. 2019ರಲ್ಲಿ ರಿಲಯನ್ಸ್ ಷೇರು ಶೇ. 40ರಷ್ಟು ಏರಿಕೆ ಕಂಡಿದ್ದರೆ ಇಂದು ಶೇ.0.70ರಷ್ಟು ಏರಿಕೆ ಕಂಡಿದ್ದರಿಂದ ಈ ದಾಖಲೆ ನಿರ್ಮಾಣವಾಗಿದೆ.

ಸೌದಿ ಅರಾಮ್ಕೋ ಕಂಪನಿಯ ಜೊತೆಗೆ ರಿಲಯನ್ಸ್ ಒಪ್ಪಂದ ಮತ್ತು ಡಿಸೆಂಬರ್ ತಿಂಗಳಿನಲ್ಲಿ ಜಿಯೋ ತನ್ನ ಕರೆ ಮತ್ತು ಡೇಟಾ ದರಗಳನ್ನು ಏರಿಸುವುದಾಗಿ ಹೇಳಿತ್ತು. ಇದರಿಂದಾಗಿ ಷೇರು ಮಾರುಕಟ್ಟೆಯಲ್ಲಿ ಉತ್ಸಾಹ ಕಂಡು ಬಂದಿದ್ದು ಹೂಡಿಕೆದಾರರು ಷೇರುಗಳನ್ನು ಖರೀದಿಸಲು ಆಸಕ್ತಿ ತೋರಿದ್ದರಿಂದ ರಿಲಯನ್ಸ್ ಭಾರತದಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ.

ಗುರುವಾರ ಬೆಳಿಗ್ಗೆ 10 ಗಂಟೆ 10 ನಿಮಿಷದ ವೇಳೆಗೆ ಬಾಂಬೆ ಷೇರು ಮಾರುಕಟ್ಟೆಯಲ್ಲಿ ಆರ್‌ಐಎಲ್‌ ಷೇರುಗಳು 1,579 ರೂ.ಗೆ ಮಾರಾಟವಾಗುತ್ತಿದ್ದವು. ಈ ವೇಳೆ ಕಂಪನಿಯ ಮಾರುಕಟ್ಟೆ ಮೌಲ್ಯ ಕೂಡ 10 ಲಕ್ಷ ಕೋಟಿ ರೂಪಾಯಿಗಳನ್ನು ದಾಟಿತ್ತು.

ಕಳೆದ ವಾರ ಕಂಪನಿಯ ಮಾರುಕಟ್ಟೆ ಮೌಲ್ಯ 9.5 ಲಕ್ಷ ಕೋಟಿ ರೂಪಾಯಿಗಳನ್ನು ದಾಟಿತ್ತು. ಕಚ್ಛಾ ತೈಲದಿಂದ ಟೆಲಿಕಾಂ ಕ್ಷೇತ್ರದವರೆಗೆ ಹರಡಿಕೊಂಡಿರುವ ಕಂಪನಿಯ ಮಾರುಕಟ್ಟೆ ಮೌಲ್ಯ ಅಕ್ಟೋಬರ್‌ 18ರಂದು 9 ಲಕ್ಷ ಕೋಟಿ ರೂಪಾಯಿಗಳನ್ನು ತಲುಪಿತ್ತು. ಅಲ್ಲಿಂದ ತನ್ನ ಮಾರುಕಟ್ಟೆ ಮೌಲ್ಯವನ್ನು ಒಂದು ಲಕ್ಷ ಕೋಟಿ ರೂಪಾಯಿಯಷ್ಟು ಹೆಚ್ಚಿಸಿಕೊಳ್ಳಲು ಕಂಪನಿ ಒಂದಕ್ಕಿಂತ ಹೆಚ್ಚು ತಿಂಗಳು ತೆಗೆದುಕೊಂಡಿದೆ.

 

Vishwa News 24

Recent Posts

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

6 minutes ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

3 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

3 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

16 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

20 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

22 hours ago