Featured

100 ಕೋಟಿ ಡೋಸ್ ಲಸಿಕೆ ನೀಡಿಕೆ : ಇದು ಕೇವಲ ಸಂಖ್ಯೆಯಲ್ಲ, ಹೊಸ ಭಾರತದ ಹೊಸ ಅಧ್ಯಾಯದ ಆರಂಭ : ಪ್ರಧಾನಿ ಮೋದಿ – Vishwanews24

100 ಕೋಟಿ ಡೋಸ್ ಲಸಿಕೆ ನೀಡಿಕೆ : ಇದು ಕೇವಲ ಸಂಖ್ಯೆಯಲ್ಲ, ಹೊಸ ಭಾರತದ ಹೊಸ ಅಧ್ಯಾಯದ ಆರಂಭ : ಪ್ರಧಾನಿ ಮೋದಿ – Vishwanews24

ನವದೆಹಲಿ,: ಭಾರತವು ಲಸಿಕೆ ಹಾಕಲು ಆರಂಭಿಸಿದ ಸುಮಾರು 9 ತಿಂಗಳಲ್ಲಿ 21 ಅಕ್ಟೋಬರ್ 2021 ರಂದು 100 ಕೋಟಿ ಡೋಸ್​ಗಳ ಲಸಿಕೆ ನೀಡಿಕೆಯನ್ನು ಪೂರ್ಣಗೊಳಿಸಿದೆ, ಈ ಸಂದರ್ಭದಲ್ಲಿ ನಾನು ಎಲ್ಲ ಆರೋಗ್ಯ ಸಮುದಾಯದ ಕಾರ್ಯಕರ್ತರು, ವೈದ್ಯರು, ದೇಶದ ನಾಗರಿಕರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶವಾಸಿಗಳನ್ನುದ್ದೇಶಿಸಿ ಹೇಳಿದ್ದಾರೆ.

100 ಕೋಟಿ ಡೋಸ್​ಗಳ ಲಸಿಕೆ ನೀಡಿಕೆಯನ್ನು ಪೂರೈಸಿದ ದಿನದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ್ದು, ಕರೊನಾ ವಿರುದ್ಧದ ಅಭೂತಪೂರ್ವ ಯಶಸ್ಸನ್ನು ಜನತೆಗೆ ಅರ್ಪಿಸಿದ್ದು, ವ್ಯಾಕ್ಸಿನೇಷನ್ ನಲ್ಲಿ ಭಾರತ ಜಗತ್ತಿನಲ್ಲಿಯೇ 2ನೇ ಸ್ಥಾನದಲ್ಲಿದೆ. ಲಸಿಕೆ ನೀಡಿಕೆಯಲ್ಲಿ ಇಂದು ಭಾರತ ಜಗತ್ತಿಗೆ ಮಾದರಿಯಾಗಿದೆ ಇದು ಕೇವಲ ಸಂಖ್ಯೆಯಲ್ಲ, ಹೊಸ ಭಾರತದ ಹೊಸ ಅಧ್ಯಾಯದ ಆರಂಭ ಎಂದಿದ್ದಾರೆ.

ವಿಐಪಿ ಸಂಸ್ಕೃತಿಯು ನಮ್ಮ ವ್ಯಾಕ್ಸಿನೇಷನ್ ಕಾರ್ಯಕ್ರಮ ಆವರಿಸಿಕೊಳ್ಳುತ್ತಿದ್ದಂತೆ ಖಾತ್ರಿಪಡಿಸಿದ್ದೇವೆ ಮತ್ತು ಎಲ್ಲರನ್ನೂ ಸಮಾನವಾಗಿ ಪರಿಗಣಿಸಲಾಗುತ್ತದೆ. ಸೋಂಕನ್ನು ಸಮರ್ಥವಾಗಿ ನಾವು ಭಾರತೀಯರು ಎದುರಿಸಿದ್ದೇವೆ, ಕಳೆದ ಜನವರಿಯಲ್ಲಿ ಕೊರೋನಾ ಲಸಿಕೆ ಬಂದ ಮೇಲೆ 9 ತಿಂಗಳಲ್ಲಿ ಸಾಧನೆ ಮಾಡಿದ್ದೇವೆ. ಸವಾಲನ್ನು ಸಮರ್ಥವಾಗಿ ಎದುರಿಸಿದ್ದೇವೆ. ಅದರ ಪರಿಣಾಮವೇ ಇಂದು ಶತಕೋಟಿ ಲಸಿಕೆ, ನಮ್ಮ ದೇಶದ ಸಾಮರ್ಥ್ಯದ ಪ್ರತಿಬಿಂಬವಾಗಿದೆ ಭಾರತದ ಸಂಪೂರ್ಣ ಲಸಿಕಾ ಕಾರ್ಯಕ್ರಮವು ವಿಜ್ಞಾನ ಚಾಲಿತ ಮತ್ತು ವಿಜ್ಞಾನ ಆಧಾರಿತವಾಗಿದೆ ಎಂಬ ಅಂಶದ ಬಗ್ಗೆ ನಾವು ಹೆಮ್ಮೆ ಪಡಬೇಕು. ಇದು ಸಂಪೂರ್ಣವಾಗಿ ವೈಜ್ಞಾನಿಕ ವಿಧಾನಗಳನ್ನು ಆಧರಿಸಿದೆ ಎಂದು ಹೇಳಿದ್ದಾರೆ

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

10 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

10 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

12 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

13 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

13 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

13 hours ago