ಪ್ರವಾಸೋದ್ಯಮ ಕ್ಷೇತ್ರವಾಗಿ ಬೆಳೆಯುತ್ತಿರುವ ಕಾರ್ಕಳ ಪೇಟೆಯಲ್ಲಿ ವಾಹನ ದಟ್ಟಣಿ ನಿವಾರಿಸಲು ರಿಂಗ್ರೋಡ್ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ 100ಕೋಟಿ ರೂ. ಪ್ರಸ್ತಾವನೆಗೆ ಬಜೆಟ್ನಲ್ಲಿ ತಾತ್ವಿಕ ಒಪ್ಪಿಗೆ ಸಿಕ್ಕಿದೆ ಎಂದು ಶಾಸಕ ಹಾಗೂ ವಿಧಾನಸಭೆ ಪ್ರತಿಪಕ್ಷ ಮುಖ್ಯ ಸಚೇತಕ ವಿ. ಸುನೀಲ್ ಕುಮಾರ್ ಹೇಳಿದರು.
ಕಾರ್ಕಳ ನಗರದಲ್ಲಿ ಜನ ಹಾಗೂ ವಾಹನ ದಟ್ಟಣೆ ದಿನೇ ದಿನೇ ಏರಿಕೆಯಾಗುತ್ತಿದೆ. ಬಹಳಷ್ಟು ಹೆಚ್ಚಿನ ಪ್ರಮಾಣದಲ್ಲಿ ಪ್ರವಾಸಿಗರು ಕಾರ್ಕಳಕ್ಕೆ ಬರುತ್ತಾರೆ ಮತ್ತು ಕಾರ್ಕಳ ಮುಖಾಂತರ ಧರ್ಮಸ್ಥಳ ಸುಬ್ರಹ್ಮಣ್ಯಕ್ಕೆ ಹಾದು ಹೋಗುತ್ತಾರೆ. ಈ ಎಲ್ಲಾ ಪರಿಸ್ಥಿತಿಗಳನ್ನು ಅವಲೋಕಿಸಿ ಕೇಂದ್ರ ಸರ್ಕಾರಕ್ಕೆ ಅಭಿವೃದ್ಧಿಯ ನಿಟ್ಟಿನಲ್ಲಿ ರಿಂಗ್ರೋಡ್ನ ಪ್ರಸ್ತಾವನೆಯನ್ನಿರಿಸಿದ್ದೆವು. ಕಾರ್ಕಳಕ್ಕೆ ಪ್ರತ್ಯೇಕ ರಿಂಗ್ರೋಡ್ ಅವಶ್ಯಕತೆ ಇದೆ. ಜೋಡುರಸ್ತೆಯಿಂದ ಪೆರ್ವಜೆಯಾಗಿ, ಕೋಟಿ ಚೆನ್ನಯ ಥೀಂ ಪಾರ್ಕ್ ಮೂಲಕ ಮಿಯ್ಯಾರು ಸಂಪರ್ಕದ ದ್ವಿಪದ ರಸ್ತೆ ನಿರ್ಮಾಣ ಈ ಯೋಜನೆಯಲ್ಲಿದೆ. ಇದು 10ಕಿ.ಮೀ ಉದ್ದದ ರಸ್ತೆಯಾಗಿದ್ದು, ಶೀಘ್ರದಲ್ಲಿ ಭೂಸ್ವಾಧೀನ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದು ವಿಕಾಸ ಕಛೇರಿಯಲ್ಲಿ ಸೋಮವಾರ ಸುದ್ಧಿಗೋಷ್ಟಿಯಲ್ಲಿ ಮಾಹಿತಿ ನೀಡಿದರು.
ಕಾರ್ಕಳದಲ್ಲಿ ಸುಸಜ್ಜಿತ ಲೈಬ್ರೆರಿ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದೆ. ಈ ಲೈಬ್ರೆರಿ ನಿರ್ಮಾಣಗೊಳ್ಳುತ್ತಿದ್ದು, ಒಂದೇ ಕಟ್ಟಡದ ಅಡಿ ಹೈಸ್ಕೂಲ್ ವಿದ್ಯಾರ್ಥಿಗಳಿಂದ ಮೆಡಿಕಲ್ ವಿದ್ಯಾರ್ಥಿಗಳ ತನಕ ಪುಸ್ತಕಗಳು ಹಾಗೂ ಮಾಹಿತಿಗಳು ಈ ಲೈಬ್ರೆರಿಯಲ್ಲಿ ಲಭ್ಯವಾಗಲಿದೆ ಎಂದು ಅವರು ಹೇಳಿದ್ದಾರೆ.
ರಾಜ್ಯ ಕಾಂಗ್ರೆಸ್ ವಿಧಾನಸಭಾ ಆಭ್ಯರ್ಥಿಯ ಟೀಕೆಟುಗಳು ಮಾರಾಟವಾಗುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಪರೋಕ್ಷವಾಗಿ ಹೇಳಿದ್ದಾರೆ. ಕಾಂಗ್ರೇಸ್ನ ಟಿಕೇಟ್ ಮಾರಾಟಕ್ಕಿರಬಹುದು, ನಮ್ಮ ಚುನಾವಣಾ ವಿಚಾರ ಅಭಿವೃದ್ಧಿ ಮಾತ್ರ. ಜಾತಿ, ಹಣ, ಅಪಪ್ರಚಾರ ಇವೆಲ್ಲವನ್ನೂ ಮೀರಿ ನಿಲ್ಲುವ ಶಕ್ತಿ ಕ್ಷೇತ್ರದ ಮತದಾರರಿಗಿದೆ. ಕಾಂಗ್ರೇಸ್ನಲ್ಲಿ ಯಾರೇ ಅಭ್ಯರ್ಥಿಯಾದರೂ ಸ್ವಾಗತ ಎಂದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…