ಮಂಗಳೂರು: ರೂ.100 ಮುಖಬೆಲೆಯ ಸ್ವಚ್ಛವಾದ ಹೊಸ ಸೀರಿಸ್’ನ ನೋಟುಗಳು ಜನತೆಯಲ್ಲಿ ಚಲಾವಣೆಯಲ್ಲಿ ಇರುವಂತೆ ಮಾಡುವ ಉದ್ದೇಶ ಹೊಂದಿರುವ ಭಾರತೀಯ ರಿಸರ್ವ್ ಬ್ಯಾಂಕ್ ಹಳೆಯ ಸೀರಿಸ್’ನ ಎಲ್ಲಾ ನೋಟುಗಳನ್ನು ಹಿಂಪಡೆಯುವ ನಿರ್ಧಾರಕ್ಕೆ ಬಂದಿದೆ.
ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಬ್ಯಾಂಕಿಂಗ್ ಭದ್ರತಾ ಸಮಿತಿ ಮತ್ತು ನಗದು ನಿರ್ವಹಣಾ ಸಮಿತಿ ಸಬೆಯಲ್ಲಿ ಆರ್’ಬಿಐ ಸಹಾಯಕ ಮಹಾಪ್ರಬಂಧಕ ಬಿ.ಎಂ.ಮಹೇಶ್ ಅವರು ಮಾತನಾಡಿದರು.
ನೋಟು ವಾಪಸ್ ಕಾರಣಕ್ಕೆ ಜನತೆ ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯವಿಲ್ಲ. ಸ್ವಚ್ಛ ನೋಟುಗಳು ಜನತೆಯ ಕೈಗೆ ಸಿಗಬೇಕೆಂಬುದು ಮಾತ್ರ ಉದ್ದೇಶ. ಇದು ನೋಟು ಅಮಾನ್ಯೀಕರಣ ಅಲ್ಲ ಎಂದು ಇದೇ ವೇಳೆ ಮಹೇಶ್ ಅವರು ಸ್ಪಷ್ಟಪಡಿಸಿದ್ದಾರೆ.
ಹೊಸ ಸೀರಿಸ್ ಹೊಂದಿರುವ 100ರ ಮುಖಬೆಲೆಯ ನೋಟುಗಳು ಮಾತ್ರ ಚಲಾವಣೆಯಲ್ಲಿರಬೇಕು. ಬ್ಯಾಂಕ್ ನವರು ಅಂತಹ ನೋಟುಗಳನ್ನು ಇರಿಸಿಕೊಳ್ಳದೆ ಕರೆನ್ಸಿ ಚೆಸ್ಟ್’ಗೆ ಒಪ್ಪಿಸಬೇಕು ಎಂದು ಸೂಚಿಸಿದ್ದಾರೆ.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…