Featured

100 ರೂ. ಹಳೆಯ ನೋಟುಗಳ ಚಲಾವಣೆ ಮಾರ್ಚ್ ನಿಂದ ಸ್ಥಗಿತ..! Vishwanews24

100 ರೂ. ಹಳೆಯ ನೋಟುಗಳ ಚಲಾವಣೆ ಮಾರ್ಚ್ ನಿಂದ ಸ್ಥಗಿತ..!

ಮಂಗಳೂರು: ರೂ.100 ಮುಖಬೆಲೆಯ ಸ್ವಚ್ಛವಾದ ಹೊಸ ಸೀರಿಸ್’ನ ನೋಟುಗಳು ಜನತೆಯಲ್ಲಿ ಚಲಾವಣೆಯಲ್ಲಿ ಇರುವಂತೆ ಮಾಡುವ ಉದ್ದೇಶ ಹೊಂದಿರುವ ಭಾರತೀಯ ರಿಸರ್ವ್ ಬ್ಯಾಂಕ್ ಹಳೆಯ ಸೀರಿಸ್’ನ ಎಲ್ಲಾ ನೋಟುಗಳನ್ನು ಹಿಂಪಡೆಯುವ ನಿರ್ಧಾರಕ್ಕೆ ಬಂದಿದೆ.

ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಬ್ಯಾಂಕಿಂಗ್ ಭದ್ರತಾ ಸಮಿತಿ ಮತ್ತು ನಗದು ನಿರ್ವಹಣಾ ಸಮಿತಿ ಸಬೆಯಲ್ಲಿ ಆರ್’ಬಿಐ ಸಹಾಯಕ ಮಹಾಪ್ರಬಂಧಕ ಬಿ.ಎಂ.ಮಹೇಶ್ ಅವರು ಮಾತನಾಡಿದರು.

ಕೇಂದ್ರ ಸರ್ಕಾರ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಸ್ಪಂದಿಸದೆ ದುರಂಹಕಾರದಿಂದ ವರ್ತಿಸಿದೆ : ಸೋನಿಯಾ ಗಾಂಧಿ -Vishwanews24

ಹಳೆಯ ನೋಟುಗಳಂತೆ ಕಾಣುವ ಖೋಟಾನೋಟುಗಳು ಹೆಚ್ಚಾಗಿರುವುದರಿಂದ ರೂ.100ರ ಮುಖಬೆಲೆಯ ಹಳೆಯ ಸೀರಿಸ್’ನ ನೋಟುಗಳನ್ನು ಹಿಂಪಡೆಯಲಾಗುತ್ತಿದೆ. ಹಳೆಯ ಸೀರಿಸ್ ಹೊಂದಿರುವ 100ರ ಕರೆನ್ಸಿ ನೋಟುಗಳನ್ನು ಮಾರ್ಚ್ ಅಂತ್ಯದ ವೇಳೆಗೆ ಸಂಪೂರ್ಣವಾಗಿ ಹಿಂಪಡೆಯುವ ನಿರ್ಧಾರಕ್ಕೆ ಬರಲಾಗಿದೆ. ಕಳೆದ 6 ವರ್ಷಗಳಿಂದ ಈ ನೋಟುಗಳು ಮುದ್ರಣವಾಗುತ್ತಿಲ್ಲ. ಆದರೆ, ಈ ಹಿಂದೆಯೇ ಮುದ್ರಣಗೊಂಡಿರುವ ಈ ನೋಟುಗಳನ್ನು ಸಂಪೂರ್ಣವಾಗಿ ಹಿಂಪಡೆಯುವುದು ಆರ್’ಬಿಐ ಉದ್ದೇಶವಾಗಿದೆ. ಚಲಾವಣೆಯಲ್ಲಿರುವ ಹಳೆಯ ನೋಟುಗಳನ್ನು ಹಂತ ಹಂತವಾಗಿ ಹಿಂಪಡೆಯಲಾಗುತ್ತಾ ಬರಲಾಗಿದೆ ಮಾರ್ಚ್ ಅಂತ್ಯಕ್ಕೆ ಇದೂ ಪೂರ್ಣವಾಗಲಿದೆ ಎಂದು ಹೇಳಿದ್ದಾರೆ.

ನೋಟು ವಾಪಸ್ ಕಾರಣಕ್ಕೆ ಜನತೆ ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯವಿಲ್ಲ. ಸ್ವಚ್ಛ ನೋಟುಗಳು ಜನತೆಯ ಕೈಗೆ ಸಿಗಬೇಕೆಂಬುದು ಮಾತ್ರ ಉದ್ದೇಶ. ಇದು ನೋಟು ಅಮಾನ್ಯೀಕರಣ ಅಲ್ಲ ಎಂದು ಇದೇ ವೇಳೆ ಮಹೇಶ್ ಅವರು ಸ್ಪಷ್ಟಪಡಿಸಿದ್ದಾರೆ.

ಕಾರ್ಕಳ : ಸೌಕೂರು ಮೇಳದ ಭಾಗವತ ಡಾ. ರವಿಕುಮಾರ್ ಸೂರಾಲು ಅವರು ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಆಯ್ಕೆ -Vishwanews24

ಹೊಸ ಸೀರಿಸ್ ಹೊಂದಿರುವ 100ರ ಮುಖಬೆಲೆಯ ನೋಟುಗಳು ಮಾತ್ರ ಚಲಾವಣೆಯಲ್ಲಿರಬೇಕು. ಬ್ಯಾಂಕ್ ನವರು ಅಂತಹ ನೋಟುಗಳನ್ನು ಇರಿಸಿಕೊಳ್ಳದೆ ಕರೆನ್ಸಿ ಚೆಸ್ಟ್’ಗೆ ಒಪ್ಪಿಸಬೇಕು ಎಂದು ಸೂಚಿಸಿದ್ದಾರೆ.

 

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

15 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

15 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

15 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

16 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

16 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

17 hours ago