ಕಾಪು: ಕಾಪು ಶ್ರೀಹೊಸ ಮಾರಿಗುಡಿ ದೇವಸ್ಥಾನದ ಬ್ರಹ್ಮಕಲಶೋತ್ಸವವು ಫೆ. 25 ರಿಂದ ಮಾ. 5ರವರೆಗೆ ನಡೆಯಲಿದ್ದು. ಈ ಪ್ರಯುಕ್ತ ಹರಿದ್ವಾರದಿಂದ ತಂದ ಪವಿತ್ರ ಗಂಗಾಜಲವನ್ನು ಮಂಗಳೂರು ವಿಮಾನ ನಿಲ್ದಾಣದಿಂದ ವಾಹನ ಜಾಥಾದಿಂದ ಬರಮಾಡಿ ಕೊಂಡು ಕಾಪುಶ್ರೀ ಮಹಾತೋಬಾರ ಶ್ರೀ ಲಕ್ಷ್ಮಿ ಜನಾರ್ಧನ ದೇವಸ್ಥಾನಕ್ಕೆ ಶುಕ್ರವಾರ ತರಲಾಯಿತು.
ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಪ್ರಮುಖರನ್ನೊಳಗೊಂಡ 9 ಮಂದಿಯ ತಂಡ ಗಂಗಾಜಲದ 9 ಕುಂಭಗಳೊಂದಿಗೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು ಅವರನ್ನು ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮಿ ಉಪಸ್ಥಿತಿಯಲ್ಲಿ ಸ್ವಾಗತಿಸಲಾಯಿತು. ಬಳಿಕ 9 ಕುಂಭಗಳನ್ನು ವಿಶೇಷವಾಗಿ ಅಲಂಕರಿಸಿ ವಾಹನದಲ್ಲಿರಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಜಾಥಾಕ್ಕೆ ಚಾಲನೆ ನೀಡಲಾಯಿತು.
ಬಳಿಕ ದಾರಿಯುದ್ದಕ್ಕೂ ಸುರತ್ಕಲ್, ಮೂಲ್ಕಿ, ಹೆಜಮಾಡಿ, ಪಡುಬಿದ್ರಿ, ಉಚ್ಚಿಲ, ಮೂಳೂರು, ಕಾಪುವಿನವರೆಗೆ ಭಕ್ತಾದಿಗಳು ಪುಷ್ಪಾರ್ಚನೆ ಸಲ್ಲಿಸಿ ಸ್ವಾಗತಿಸಿದರು. ಕಾಪು ಶ್ರೀ ಲಕ್ಷ್ಮಿ ಜನಾರ್ಧನ ದೇವಸ್ಥಾನದಲ್ಲಿ ನೂರಾರು ಭಕ್ತರು ಮತ್ತು ಸುಮಂಗಲೆಯರು ಪುಷ್ಪಾರ್ಚನೆಗೈದು ಗಂಗಾಜಲವನ್ನು ಸ್ವಾಗತಿಸಿದರು.
ಬಳಿಕ ಹೊಸಮಾರಿಗುಡಿಯ ಪ್ರಧಾನತಂತ್ರಿ ಕೊರಂಗ್ರಪಾಡಿ ವಿದ್ವಾನ್ ಕೆ.ಪಿ.ಕುಮಾರಗುರು ತಂತ್ರಿ ಉಪಸ್ಥಿತಿಯಲ್ಲಿ ಪ್ರಧಾನ ಆರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಹಾಗೂ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ತಂತ್ರಿಗಳಾದ ವೇ.ಮೂ.ಕಲ್ಯ ಶ್ರೀಶ ತಂತ್ರಿ ವಿಶೇಷ ಪೂಜೆ ನೆರವೇರಿಸಿದರು. ಬಾರಕೂರು ಸಂಸ್ಥಾನ ಮಠದ ಸಂತೋಷ್ ಗುರೂಜಿ ಸಾನ್ನಿಧ್ಯ ವಹಿಸಿದ್ದರು.
ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ, ಕಾರ್ಯಾಧ್ಯಕ್ಷ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ.ಕೆ.ಪ್ರಕಾಶ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಆರ್ಥಿಕ ಸಮಿತಿ ಅಧ್ಯಕ್ಷ ಉದಯ ಸುಂದರ ಶೆಟ್ಟಿ, ಗಂಗಾಜಲ ಸ್ವಾಗತ ಸಮಿತಿ ಅಧ್ಯಕ್ಷ ಡಾ.ದೇವಿ ಪ್ರಸಾದ್ ಶೆಟ್ಟಿ ಬೆಳಪು, ಶ್ರೀಲಕ್ಷ್ಮೀ ಜನಾರ್ದನ ದೇವಸ್ಥಾನದ ಆಡಳಿತ ಮೊತ್ತೇಸರ ಮನೋಹರ್ ಎಸ್.ಶೆಟ್ಟಿ, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಕಾಪು ದಿವಾಕರ ಶೆಟ್ಟಿ, ಮಾಧವ ಆರ್.ಪಾಲನ್, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ, ಕೋಶಾಧಿಕಾರಿ ರವಿಕಿರಣ್, ಬಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಯೋಗೀಶ್ ವಿ.ಶೆಟ್ಟಿ ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ದಾನಿ ಪ್ರಭಾಕರ್ ಶೆಟ್ಟಿ ಮಂಡಗದ್ದೆ ಮಹಿಳಾ ಸಮಿತಿ ಅಧ್ಯಕ್ಷೆ ಬೀನಾ ವಾಸುದೇವ ಶೆಟ್ಟಿ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶೇಖರ್ ಸಾಲ್ಯಾನ್, ಮನೋಹರ್ ರಾವ್, ಜಯಲಕ್ಷ್ಮೀ ಸುರೇಶ್ ಶೆಟ್ಟಿ, ಚರಿತಾ ದೇವಾಡಿಗ, ಶ್ರೀಧರ ಕಾಂಚನ್, ರವೀಂದ್ರ ಮಲ್ಲಾರ್, ಪ್ರಮುಖರಾದ ಉದಯ ಕುಮಾರ್ ಶೆಟ್ಟಿ ಮುನಿಯಾಲು, ಸುಹಾಸ್ ಹೆಗ್ಡೆ ನಂದಳಿಕೆ, ಹರಿಯಪ್ಪ ಕೋಟ್ಯಾನ್, ಕೆ.ವಿಶ್ವನಾಥ್, ಶ್ರೀಕರ ಶೆಟ್ಟಿ ಕಲ್ಯ, ಗೀತಾಂಜಲಿ ಸುವರ್ಣ, ಸಾವಿತ್ರಿ ಗಣೇಶ್, ಶಿಲ್ಪಾ ಸುವರ್ಣ, ಜಯರಾಮ ಆಚಾರ್ಯ ಉಪಸ್ಥಿತರಿದ್ದರು.
ನವ ದಿನ ವಿಶೇಷ ಪೂಜೆ
ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವರ ಸನ್ನಿಧಾನದಲ್ಲಿ ಮುಂದಿನ 9 ದಿನ ವಿಶೇಷ ಪೂಜೆ ಸಲ್ಲಿಸಿದ ನಂತರ ಕಾಪು ಶ್ರೀ ಹೊಸ ಮಾರಿಗುಡಿ ಅಮ್ಮನ ಸನ್ನಿಧಾನಕ್ಕೆ ಗಂಗಾಜಲವನ್ನು ತಂದು ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನೆರವೇರಿಸಲಾಗುವುದು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…