ಉಡುಪಿ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದರೂ, ಕಾರ್ಕಳ ಕ್ಷೇತ್ರಕ್ಕೆ ಇನ್ನೂ ಕಾಂಗ್ರೆಸ್‌ ಅಭ್ಯರ್ಥಿ ಯಾರು ಎನ್ನುವುದನ್ನು ಘೋಷಿಸಿಲ್ಲ. ಇದರಿಂದಾಗಿ ಕಾರ್ಕಳದಲ್ಲಿ ಕಾಂಗ್ರೆಸ್‌ ಜೀವಂತವಿದೆಯಾ? ಸತ್ತಿದೆಯಾ? ತಿಳಿಯುತ್ತಿಲ್ಲ ಎಂದು ಕಾರ್ಕಳದ ಕಾರ್ಯಕರ್ತ ಡೇನಿಯಲ್‌ ರೇಂಜರ್‌ ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಅಭ್ಯರ್ಥಿ ಘೋಷಣೆಯಾಗದ ಕಾರಣ ಕಾರ್ಯಕರ್ತರ ಹುಮ್ಮಸ್ಸು ಕುಂಠಿತವಾಗಿದೆ. ಹೀಗೆಯೇ ಆದರೆ ಮುಂದಕ್ಕೆ ಕಾಂಗ್ರೆಸ್‌ಗೆ ಕಾರ್ಕಳ ಕ್ಷೇತ್ರದಲ್ಲಿ ಕಾರ್ಯಕರ್ತರೇ ಇಲ್ಲದ ದುಸ್ಥಿತಿ ಬರಬಹುದು. ಮೊಲಿಯವರ ಪುತ್ರ ಕಣದಿಂದ ಹಿಂದೆ ಸರಿದ ಬಳಿಕ ಕ್ಷೇತ್ರದ ಉಸ್ತುವಾರಿಗಳಾಗಿದ್ದ ಜಿ.ಎ. ಬಾವಾ ಮತ್ತು ಭರತ್‌ ಮುಂಡೋಡಿಯವರು ಕ್ಷೇತ್ರದಿಂದ ನಾಪತ್ತೆಯಾಗಿದ್ದಾರೆ. ಅವರು ಉತ್ಸಾಹಿ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಪಕ್ಷೀಯವಾಗಿ ಕಾರ್ಯನಿರ್ವಹಿಸುತ್ತಲಿದ್ದರು.

ಕಾರ್ಕಳದ ಕಾಂಗ್ರೆಸ್‌ನಲ್ಲಿ ಸಮರ್ಥ ನಾಯಕತ್ವ ಇಲ್ಲದ ಸಂದರ್ಭದಲ್ಲಿ ಪಕ್ಷ ಸಂಘಟನೆಗೆ ಒತ್ತು ಕೊಟ್ಟು ಕ್ಷೇತ್ರದಾದ್ಯಂತ ಕಾರ್ಯಕರ್ತರನ್ನು ಒಟ್ಟು ಸೇರಿಸಿದ್ದು ಉದಯ ಕುಮಾರ್‌ ಶೆಟ್ಟಿ ಮುನಿಯಾಲು ಅವರು.

ಅವರಿಗೆ ಟಿಕೆಟ್‌ ನೀಡಬೇಕು ಎಂದು ಹೈಕಮಾಂಡ್‌ ಹಾಗೂ ಕ್ಷೇತ್ರದ ಉಸ್ತುವಾರಿಗಳಲ್ಲಿಯೂ ಭಿನ್ನವಿಸಿಕೊಂಡಿದ್ದೇವೆ. ಕಾರ್ಯಕರ್ತರ ಅಪೇಕ್ಷೆ ಹಾಗೂ ಒಮ್ಮತದಂತೆ ಉದಯ ಕುಮಾರ್‌ ಶೆಟ್ಟಿ ಮುನಿಯಾಲು ಅವರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಬೇಕು.

ಕಾರ್ಕಳದಲ್ಲಿ ಸಮರ್ಥ ನಾಯಕತ್ವ ಹಾಗೂ ಬ್ಲಾಕ್‌ ಮಟ್ಟದ ನಾಯಕರ ಉದಾಸೀನ ಸ್ವಭಾವದಿಂದಾಗಿ ಸತತವಾಗಿ 5 ಜಿ.ಪಂ., 19 ತಾ.ಪಂ. ಹಾಗೂ 26 ಗ್ರಾ.ಪಂ.ಗಳಲ್ಲಿ ಅಧಿಕಾರ ಕಳೆದುಕೊಂಡು ಸಂಪೂರ್ಣವಾಗಿ ನೆಲಕ್ಕಚ್ಚಿತ್ತು. ಇಂತಹ ಸಂದರ್ಭದಲ್ಲಿ ಪಕ್ಷವನ್ನು ಆಶಾದಾಯಕ ಮಟ್ಟದಲ್ಲಿ ಸಂಘಟಿಸಿರುವ ಮುನಿಯಾಲು ಉದಯ ಕುಮಾರ್‌ ಶೆಟ್ಟಿಯವರಿಗೆ ಕಾರ್ಕಳ ವಿಧಾನಸಭೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಟಿಕೆಟ್‌ ಕೊಡದಿದ್ದರೆ ತಳಮಟ್ಟದ ಕಾರ್ಯಕರ್ತರು ನಿರಾಸೆಯನ್ನು ಹೊಂದಿ ತಟಸ್ಥರಾಗಬಹುದು. ಈ ಬಗ್ಗೆ  ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ, ರಾಜ್ಯ ಉಸ್ತುವಾರಿಗಳು, ಕೆಪಿಸಿಸಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಈ-ಮೇಲ್‌ ಮತ್ತು ಪತ್ರದ ಮುಖಾಂತರ ಮನವಿ ಮಾಡಲಾಗಿದೆ. ಕಾರ್ಯಕರ್ತರಾದ ನಮ್ಮ ಮನವಿಯನ್ನು ಕಡೆಗಣಿಸಿ ಅಭಿಪ್ರಾಯಕ್ಕೆ ವಿರೋಧವಾಗಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದಲ್ಲಿ ನಾವೆಲ್ಲ ತಟಸ್ಥ ನೀತಿಯನ್ನು ಅನುಸರಿಸುತ್ತೇವೆ ಎಂದವರು ತಿಳಿಸಿದರು.

ಯುವಕಾಂಗ್ರೆಸ್‌ ಉಡುಪಿ ಜಿಲ್ಲಾಧ್ಯಕ್ಷ ವಿಶ್ವಾಸ್‌ ವಿ. ಅಮೀನ್‌, ಕಾರ್ಯಕರ್ತರಾದ ತಾರಾನಾಥ ಕೋಟ್ಯಾನ್‌, ಶೇಖ್‌ ಶಬ್ಬೀರ್‌, ವೆಲೇರಿಯನ್‌ ಪಾಯಸ್‌, ರಂಜಿತ್‌ ಅವರು ಪತ್ರಿಕಾಗೋಷ್ಠಿಯಲ್ಲಿದ್ದರು.

 

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago