ಉಡುಪಿ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದರೂ, ಕಾರ್ಕಳ ಕ್ಷೇತ್ರಕ್ಕೆ ಇನ್ನೂ ಕಾಂಗ್ರೆಸ್‌ ಅಭ್ಯರ್ಥಿ ಯಾರು ಎನ್ನುವುದನ್ನು ಘೋಷಿಸಿಲ್ಲ. ಇದರಿಂದಾಗಿ ಕಾರ್ಕಳದಲ್ಲಿ ಕಾಂಗ್ರೆಸ್‌ ಜೀವಂತವಿದೆಯಾ? ಸತ್ತಿದೆಯಾ? ತಿಳಿಯುತ್ತಿಲ್ಲ ಎಂದು ಕಾರ್ಕಳದ ಕಾರ್ಯಕರ್ತ ಡೇನಿಯಲ್‌ ರೇಂಜರ್‌ ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಅಭ್ಯರ್ಥಿ ಘೋಷಣೆಯಾಗದ ಕಾರಣ ಕಾರ್ಯಕರ್ತರ ಹುಮ್ಮಸ್ಸು ಕುಂಠಿತವಾಗಿದೆ. ಹೀಗೆಯೇ ಆದರೆ ಮುಂದಕ್ಕೆ ಕಾಂಗ್ರೆಸ್‌ಗೆ ಕಾರ್ಕಳ ಕ್ಷೇತ್ರದಲ್ಲಿ ಕಾರ್ಯಕರ್ತರೇ ಇಲ್ಲದ ದುಸ್ಥಿತಿ ಬರಬಹುದು. ಮೊಲಿಯವರ ಪುತ್ರ ಕಣದಿಂದ ಹಿಂದೆ ಸರಿದ ಬಳಿಕ ಕ್ಷೇತ್ರದ ಉಸ್ತುವಾರಿಗಳಾಗಿದ್ದ ಜಿ.ಎ. ಬಾವಾ ಮತ್ತು ಭರತ್‌ ಮುಂಡೋಡಿಯವರು ಕ್ಷೇತ್ರದಿಂದ ನಾಪತ್ತೆಯಾಗಿದ್ದಾರೆ. ಅವರು ಉತ್ಸಾಹಿ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಪಕ್ಷೀಯವಾಗಿ ಕಾರ್ಯನಿರ್ವಹಿಸುತ್ತಲಿದ್ದರು.

ಕಾರ್ಕಳದ ಕಾಂಗ್ರೆಸ್‌ನಲ್ಲಿ ಸಮರ್ಥ ನಾಯಕತ್ವ ಇಲ್ಲದ ಸಂದರ್ಭದಲ್ಲಿ ಪಕ್ಷ ಸಂಘಟನೆಗೆ ಒತ್ತು ಕೊಟ್ಟು ಕ್ಷೇತ್ರದಾದ್ಯಂತ ಕಾರ್ಯಕರ್ತರನ್ನು ಒಟ್ಟು ಸೇರಿಸಿದ್ದು ಉದಯ ಕುಮಾರ್‌ ಶೆಟ್ಟಿ ಮುನಿಯಾಲು ಅವರು.

ಅವರಿಗೆ ಟಿಕೆಟ್‌ ನೀಡಬೇಕು ಎಂದು ಹೈಕಮಾಂಡ್‌ ಹಾಗೂ ಕ್ಷೇತ್ರದ ಉಸ್ತುವಾರಿಗಳಲ್ಲಿಯೂ ಭಿನ್ನವಿಸಿಕೊಂಡಿದ್ದೇವೆ. ಕಾರ್ಯಕರ್ತರ ಅಪೇಕ್ಷೆ ಹಾಗೂ ಒಮ್ಮತದಂತೆ ಉದಯ ಕುಮಾರ್‌ ಶೆಟ್ಟಿ ಮುನಿಯಾಲು ಅವರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಬೇಕು.

ಕಾರ್ಕಳದಲ್ಲಿ ಸಮರ್ಥ ನಾಯಕತ್ವ ಹಾಗೂ ಬ್ಲಾಕ್‌ ಮಟ್ಟದ ನಾಯಕರ ಉದಾಸೀನ ಸ್ವಭಾವದಿಂದಾಗಿ ಸತತವಾಗಿ 5 ಜಿ.ಪಂ., 19 ತಾ.ಪಂ. ಹಾಗೂ 26 ಗ್ರಾ.ಪಂ.ಗಳಲ್ಲಿ ಅಧಿಕಾರ ಕಳೆದುಕೊಂಡು ಸಂಪೂರ್ಣವಾಗಿ ನೆಲಕ್ಕಚ್ಚಿತ್ತು. ಇಂತಹ ಸಂದರ್ಭದಲ್ಲಿ ಪಕ್ಷವನ್ನು ಆಶಾದಾಯಕ ಮಟ್ಟದಲ್ಲಿ ಸಂಘಟಿಸಿರುವ ಮುನಿಯಾಲು ಉದಯ ಕುಮಾರ್‌ ಶೆಟ್ಟಿಯವರಿಗೆ ಕಾರ್ಕಳ ವಿಧಾನಸಭೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಟಿಕೆಟ್‌ ಕೊಡದಿದ್ದರೆ ತಳಮಟ್ಟದ ಕಾರ್ಯಕರ್ತರು ನಿರಾಸೆಯನ್ನು ಹೊಂದಿ ತಟಸ್ಥರಾಗಬಹುದು. ಈ ಬಗ್ಗೆ  ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ, ರಾಜ್ಯ ಉಸ್ತುವಾರಿಗಳು, ಕೆಪಿಸಿಸಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಈ-ಮೇಲ್‌ ಮತ್ತು ಪತ್ರದ ಮುಖಾಂತರ ಮನವಿ ಮಾಡಲಾಗಿದೆ. ಕಾರ್ಯಕರ್ತರಾದ ನಮ್ಮ ಮನವಿಯನ್ನು ಕಡೆಗಣಿಸಿ ಅಭಿಪ್ರಾಯಕ್ಕೆ ವಿರೋಧವಾಗಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದಲ್ಲಿ ನಾವೆಲ್ಲ ತಟಸ್ಥ ನೀತಿಯನ್ನು ಅನುಸರಿಸುತ್ತೇವೆ ಎಂದವರು ತಿಳಿಸಿದರು.

ಯುವಕಾಂಗ್ರೆಸ್‌ ಉಡುಪಿ ಜಿಲ್ಲಾಧ್ಯಕ್ಷ ವಿಶ್ವಾಸ್‌ ವಿ. ಅಮೀನ್‌, ಕಾರ್ಯಕರ್ತರಾದ ತಾರಾನಾಥ ಕೋಟ್ಯಾನ್‌, ಶೇಖ್‌ ಶಬ್ಬೀರ್‌, ವೆಲೇರಿಯನ್‌ ಪಾಯಸ್‌, ರಂಜಿತ್‌ ಅವರು ಪತ್ರಿಕಾಗೋಷ್ಠಿಯಲ್ಲಿದ್ದರು.

 

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

13 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

13 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

14 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

14 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

14 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

15 hours ago