ಉಡುಪಿ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದರೂ, ಕಾರ್ಕಳ ಕ್ಷೇತ್ರಕ್ಕೆ ಇನ್ನೂ ಕಾಂಗ್ರೆಸ್‌ ಅಭ್ಯರ್ಥಿ ಯಾರು ಎನ್ನುವುದನ್ನು ಘೋಷಿಸಿಲ್ಲ. ಇದರಿಂದಾಗಿ ಕಾರ್ಕಳದಲ್ಲಿ ಕಾಂಗ್ರೆಸ್‌ ಜೀವಂತವಿದೆಯಾ? ಸತ್ತಿದೆಯಾ? ತಿಳಿಯುತ್ತಿಲ್ಲ ಎಂದು ಕಾರ್ಕಳದ ಕಾರ್ಯಕರ್ತ ಡೇನಿಯಲ್‌ ರೇಂಜರ್‌ ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಅಭ್ಯರ್ಥಿ ಘೋಷಣೆಯಾಗದ ಕಾರಣ ಕಾರ್ಯಕರ್ತರ ಹುಮ್ಮಸ್ಸು ಕುಂಠಿತವಾಗಿದೆ. ಹೀಗೆಯೇ ಆದರೆ ಮುಂದಕ್ಕೆ ಕಾಂಗ್ರೆಸ್‌ಗೆ ಕಾರ್ಕಳ ಕ್ಷೇತ್ರದಲ್ಲಿ ಕಾರ್ಯಕರ್ತರೇ ಇಲ್ಲದ ದುಸ್ಥಿತಿ ಬರಬಹುದು. ಮೊಲಿಯವರ ಪುತ್ರ ಕಣದಿಂದ ಹಿಂದೆ ಸರಿದ ಬಳಿಕ ಕ್ಷೇತ್ರದ ಉಸ್ತುವಾರಿಗಳಾಗಿದ್ದ ಜಿ.ಎ. ಬಾವಾ ಮತ್ತು ಭರತ್‌ ಮುಂಡೋಡಿಯವರು ಕ್ಷೇತ್ರದಿಂದ ನಾಪತ್ತೆಯಾಗಿದ್ದಾರೆ. ಅವರು ಉತ್ಸಾಹಿ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಪಕ್ಷೀಯವಾಗಿ ಕಾರ್ಯನಿರ್ವಹಿಸುತ್ತಲಿದ್ದರು.

ಕಾರ್ಕಳದ ಕಾಂಗ್ರೆಸ್‌ನಲ್ಲಿ ಸಮರ್ಥ ನಾಯಕತ್ವ ಇಲ್ಲದ ಸಂದರ್ಭದಲ್ಲಿ ಪಕ್ಷ ಸಂಘಟನೆಗೆ ಒತ್ತು ಕೊಟ್ಟು ಕ್ಷೇತ್ರದಾದ್ಯಂತ ಕಾರ್ಯಕರ್ತರನ್ನು ಒಟ್ಟು ಸೇರಿಸಿದ್ದು ಉದಯ ಕುಮಾರ್‌ ಶೆಟ್ಟಿ ಮುನಿಯಾಲು ಅವರು.

ಅವರಿಗೆ ಟಿಕೆಟ್‌ ನೀಡಬೇಕು ಎಂದು ಹೈಕಮಾಂಡ್‌ ಹಾಗೂ ಕ್ಷೇತ್ರದ ಉಸ್ತುವಾರಿಗಳಲ್ಲಿಯೂ ಭಿನ್ನವಿಸಿಕೊಂಡಿದ್ದೇವೆ. ಕಾರ್ಯಕರ್ತರ ಅಪೇಕ್ಷೆ ಹಾಗೂ ಒಮ್ಮತದಂತೆ ಉದಯ ಕುಮಾರ್‌ ಶೆಟ್ಟಿ ಮುನಿಯಾಲು ಅವರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಬೇಕು.

ಕಾರ್ಕಳದಲ್ಲಿ ಸಮರ್ಥ ನಾಯಕತ್ವ ಹಾಗೂ ಬ್ಲಾಕ್‌ ಮಟ್ಟದ ನಾಯಕರ ಉದಾಸೀನ ಸ್ವಭಾವದಿಂದಾಗಿ ಸತತವಾಗಿ 5 ಜಿ.ಪಂ., 19 ತಾ.ಪಂ. ಹಾಗೂ 26 ಗ್ರಾ.ಪಂ.ಗಳಲ್ಲಿ ಅಧಿಕಾರ ಕಳೆದುಕೊಂಡು ಸಂಪೂರ್ಣವಾಗಿ ನೆಲಕ್ಕಚ್ಚಿತ್ತು. ಇಂತಹ ಸಂದರ್ಭದಲ್ಲಿ ಪಕ್ಷವನ್ನು ಆಶಾದಾಯಕ ಮಟ್ಟದಲ್ಲಿ ಸಂಘಟಿಸಿರುವ ಮುನಿಯಾಲು ಉದಯ ಕುಮಾರ್‌ ಶೆಟ್ಟಿಯವರಿಗೆ ಕಾರ್ಕಳ ವಿಧಾನಸಭೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಟಿಕೆಟ್‌ ಕೊಡದಿದ್ದರೆ ತಳಮಟ್ಟದ ಕಾರ್ಯಕರ್ತರು ನಿರಾಸೆಯನ್ನು ಹೊಂದಿ ತಟಸ್ಥರಾಗಬಹುದು. ಈ ಬಗ್ಗೆ  ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ, ರಾಜ್ಯ ಉಸ್ತುವಾರಿಗಳು, ಕೆಪಿಸಿಸಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಈ-ಮೇಲ್‌ ಮತ್ತು ಪತ್ರದ ಮುಖಾಂತರ ಮನವಿ ಮಾಡಲಾಗಿದೆ. ಕಾರ್ಯಕರ್ತರಾದ ನಮ್ಮ ಮನವಿಯನ್ನು ಕಡೆಗಣಿಸಿ ಅಭಿಪ್ರಾಯಕ್ಕೆ ವಿರೋಧವಾಗಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದಲ್ಲಿ ನಾವೆಲ್ಲ ತಟಸ್ಥ ನೀತಿಯನ್ನು ಅನುಸರಿಸುತ್ತೇವೆ ಎಂದವರು ತಿಳಿಸಿದರು.

ಯುವಕಾಂಗ್ರೆಸ್‌ ಉಡುಪಿ ಜಿಲ್ಲಾಧ್ಯಕ್ಷ ವಿಶ್ವಾಸ್‌ ವಿ. ಅಮೀನ್‌, ಕಾರ್ಯಕರ್ತರಾದ ತಾರಾನಾಥ ಕೋಟ್ಯಾನ್‌, ಶೇಖ್‌ ಶಬ್ಬೀರ್‌, ವೆಲೇರಿಯನ್‌ ಪಾಯಸ್‌, ರಂಜಿತ್‌ ಅವರು ಪತ್ರಿಕಾಗೋಷ್ಠಿಯಲ್ಲಿದ್ದರು.

 

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

13 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

14 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

14 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

16 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

16 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

17 hours ago