108 ದಿನ 108 ಕ್ಷೇತ್ರ ಪ್ರದಕ್ಷಿಣೆಯ ಮಹಾ ಸಂಕಲ್ಪದ ಅಂಗವಾಗಿ 5ನೇ ದಿನ ಜೂನ್ 18ರ ಮಂಗಳವಾರ ಶ್ರೀ ಕ್ಷೇತ್ರ ಶಂಕರಪುರ “ಏಕ ಜಾತಿ ಧರ್ಮ ಪೀಠ ದ್ವಾರಕಾಮಯಿ” ಪೀಠಾಧೀಶ್ವರ ಶ್ರೀ ಸಾಯಿ ಈಶ್ವರ್ ಗುರೂಜಿಯವರು ಕಾಪು ಮಾರಿಯಮ್ಮನ ದರುಶನಕ್ಕಾಗಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ ಶ್ರೀದೇವಿಯ ದರುಶನ ಪಡೆದರು.
ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀ ಶ್ರೀನಿವಾಸ ತಂತ್ರಿ ಕಲ್ಯಾ ಇವರು ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿ ಗೌರವಿಸಿದರು.
ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿಯವರು ಸಮಗ್ರ ಜಿರ್ಣೋದ್ಧಾರದ ಬಗ್ಗೆ ಮಾಹಿತಿಯನ್ನು ನೀಡಿದರು.
ಗುರೂಜಿ ಸಾಯಿ ಈಶ್ವರ್ ಅವರು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿಯವರಿಗೆ ಧರ್ಮ, ರಾಷ್ಟ್ರ, ಯೋಧರು ಹಾಗೂ ಅವರ ಕುಟುಂಬದ ರಕ್ಷಣೆ ಹಾಗೂ ಸನಾತನ ಧರ್ಮ ರಕ್ಷಣೆ ಮತ್ತು ಹಿಂದೂಗಳು ಮತಾಂತರವಾಗುವುದನ್ನು ತಡೆಯುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರದಲ್ಲಿ ನಿತ್ಯ ಪೂಜೆಯ ಬಳಿಕ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಮನವಿ ನೀಡಿ ಬಿಲ್ವಪತ್ರೆಯ ಗಿಡ ನೀಡಿದರು.
ಈ ಸಂದರ್ಭದಲ್ಲಿ ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ, ಅಭಿವೃದ್ಧಿ ಸಮಿತಿಯ ಗೌರವ ಸಲಹೆಗಾರ, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯ ಕಾರ್ಯಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಮಾಧವ ಆರ್. ಪಾಲನ್, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ಸಂಚಾಲಕ ಜಯರಾಮ್ ಆಚಾರ್ಯ, ಕಚೇರಿ ನಿರ್ವಹಣಾ ಸಮಿತಿಯ ಪ್ರಧಾನ ಸಂಚಾಲಕ ಮಧುಕರ್ ಎಸ್, ಗ್ರಾಮ ಸಮಿತಿಯ ಮಹಿಳಾ ಮುಖ್ಯ ಸಂಚಾಲಕಿ ಗೀತಾಂಜಲಿ ಎಂ. ಸುವರ್ಣ, ಪ್ರಚಾರ ಸಮಿತಿಯ ಮಹಿಳಾ ಸಮಿತಿಯ ಮುಖ್ಯ ಸಂಚಾಲಕಿ ಸಾವಿತ್ರಿ ಗಣೇಶ್, ದ್ವಾರಕಾಮಯಿ ಮಠದ ಟ್ರಸ್ಟಿ ಸುಧಾಕರ್ ಶೆಟ್ಟಿ, ಕಾಪು ಪುರಸಭಾ ಸದಸ್ಯ ಅನಿಲ್ ಕುಮಾರ್ ಕಾಪು, ವೀಣಾ ಶೆಟ್ಟಿ, ಅಭಿರಾಜ್ ಸುವರ್ಣ ಮತ್ತು ದೇವಳದ ಪ್ರಬಂಧಕ ಗೋವರ್ಧನ್ ಸೇರಿಗಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…