ಬೆಳ್ತಂಗಡಿ : ಮನೆಯೊಂದರಲ್ಲಿ ಯಾರೂ ಇಲ್ಲದ ವೇಳೆ ಬಾಗಿಲಿನ ಚಿಲಕ ಮುರಿದು ಒಳಪ್ರವೇಶಿಸಿದ ಕಳ್ಳರು ಸುಮಾರು 9.50 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ ಘಟನೆ ತಾಲೂಕಿನ ಕುತ್ಲೂರು ಗ್ರಾಮದ ಮಂಜುಶ್ರೀ ನಗರದಲ್ಲಿ ನಡೆದಿದ್ದು, ಅ. 6ರಂದು ಬೆಳಕಿಗೆ ಬಂದಿದೆ.
ಮಂಜುಶ್ರೀ ನಗರದ ಅವಿನಾಶ್ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ. ಅ. 2ರ ಮಧ್ಯಾಹ್ನದಿಂದ ಅ. 6ರ ಸಂಜೆಯ ನಡುವೆ ಕಳ್ಳರು ಈ ಕೃತ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಮನೆಯ ಎದುರಿನ ಬಾಗಿಲಿನ ಚಿಲಕದ ಕೊಂಡಿಯನ್ನು ಮುರಿದು ಒಳ ಪ್ರವೇಶಿಸಿದ್ದಾರೆ. ಮನೆಯ ಬೆಡ್ ರೂಮಿನ ಕಪಾಟಿನ ಚಿಲಕವನ್ನು ಮುರಿದು ಅದರೊಳಗಿದ್ದ ವ್ಯಾನಿಟಿ ಬ್ಯಾಗ್ ನಲ್ಲಿ ಟಿಫಿನ್ ಬಾಕ್ಸ್ ನಲ್ಲಿ ಇಟ್ಟಿದ್ದ ಹಾಗೂ ಬ್ಯಾಗ್ ನ ಪರ್ಸ್ ನಲ್ಲಿ ಇಟ್ಟಿದ್ದ ಎರಡೆಳೆಯ ಚಿನ್ನದ ಕರಿಮಣಿ ಸರ 1, ಎರಡೆಳೆಯ ಮುತ್ತಿನ ಸರ ಜತೆಗೆ ಲಕ್ಷ್ಮೀ ಪೆಂಡೆಂಟ್ ಇರುವ ಚಿನ್ನದ ಸರ 1, ಚಿನ್ನದ ಬ್ರಾಸ್ ಲೈಟ್ 2, ಮಕ್ಕಳ ಚಿನ್ನದ ಸರ 2, ಚಿನ್ನದ ಉಂಗುರ 1, ಬೆಂಡೋಲೆ 1 ಜೊತೆ, ಕಿವಿಯ ಚಿಕ್ಕ ಓಲೆಗಳು 5 ಜೊತೆ, ಚಿನ್ನದ ಉಂಗುರಗಳು 3 ನ್ನು ಕಳ್ಳರು ಕದ್ದೊಯ್ದಿದ್ದಾರೆ. ಕಳವಾದ ಒಟ್ಟು ಚಿನ್ನದ ತೂಕ ಸುಮಾರು 149 ಗ್ರಾಂ ಆಗಿದ್ದು, ಅಂದಾಜು ಮೌಲ್ಯ ರೂ 9,50,000 ಆಗಿದೆ.
ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್ ಉಡುಪಿ: ಉದ್ಯಮಿ…
ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ ಆ.27ರಂದು ಧ್ವಜಾರೋಹಣ, ಗೋ ಅಶ್ವಪೂಜೆ ನೆರವೇರಿಸುವ ಮೂಲಕ ಆರಾಧನೆಗೆ…
ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ…
ಮಲ್ಪೆ : ಬೋಟ್ನಲ್ಲಿ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣ: ಆರೋಪಿ ಬಂಧನ ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು…
ಉಡುಪಿ :ಆ. 27 ರಂದು ನೇರ ಸಂದರ್ಶನ ಉಡುಪಿ : ನಗರದ ಡಿ.ಬಿ.ಎಸ್ ಬ್ಯಾಂಕ್, ಧರಣಿ ಆರ್ಕೇಡ್, ಕಲ್ಸಂಕ, ಗುಂಡಿಬೈಲು…
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…