ಬೆಂಗಳೂರು : ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡುದಾರರಿಗೆ ಹೆಚ್ಚುವರಿಯಾಗಿ ನೀಡುತ್ತಿರುವ ಐದು ಕೆ.ಜಿ ಅಕ್ಕಿಯ ಬದಲಾಗಿ 61.19 ಕೋಟಿ ರೂ. ವೆಚ್ಚದಲ್ಲಿ ʼಇಂದಿರಾ ಆಹಾರ ಕಿಟ್ʼ(ಪೌಷ್ಠಿಕ ಆಹಾರ ಕಿಟ್) ನೀಡಲು ಸಚಿವ ಸಂಪುಟ ನಿರ್ಧಾರ ಕೈಗೊಂಡಿದೆ.
ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಹೆಚ್ಚುವರಿ ಅಕ್ಕಿ ನೀಡಲು ಆಯವ್ಯಯದಲ್ಲಿ ಹಂಚಿಕೆ ಮಾಡಿರುವ 6,426 ಕೋಟಿ ರೂ. ಅನುದಾನದಲ್ಲಿ 6119.52 ಕೋಟಿ ರೂ. ವೆಚ್ಚದಲ್ಲಿ ಇಂದಿರಾ ಆಹಾರ ಕಿಟ್ ಒದಗಿಸಲು ಬಜೆಟ್ ಮರುಹಂಚಿಕೆ ಮಾಡಲು ಅನುಮೋದನೆ ನೀಡಲಾಗಿದೆ ಎಂದು ಅವರು ಹೇಳಿದರು.
ಇಂದಿರಾ ಆಹಾರ ಕಿಟ್ನಲ್ಲಿ 2 ಕೆ.ಜಿ ತೊಗರಿ ಬೇಳೆ, 1 ಲೀಟರ್ ಅಡುಗೆ ಎಣ್ಣೆ, 1 ಕೆ.ಜಿ ಸಕ್ಕರೆ ಹಾಗೂ 1 ಕೆ.ಜಿ ಉಪ್ಪು ಇರಲಿದೆ. ಅನ್ನಭಾಗ್ಯ ಅಕ್ಕಿಯ ಅಕ್ರಮ ಸಾಗಾಟ, ಕಳ್ಳತನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಹಾರ ಕಿಟ್ ನೀಡಲು ತೀರ್ಮಾನಿಸಲಾಗಿದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…