Featured

ಉಡುಪಿ: ಶೀರೂರು ಪರ್ಯಾಯಕ್ಕೆ ಎಲ್ಲರೂ ಸಹಕಾರ ಕೊಡುವುದು ಕರ್ತವ್ಯ ಹಾಗೂ ಜವಾಬ್ದಾರಿ : ಡಾ. ವೀರೇಂದ್ರ ಹೆಗ್ಗಡೆ – vishwanews24

ಉಡುಪಿ: ಶೀರೂರು ಪರ್ಯಾಯಕ್ಕೆ ಎಲ್ಲರೂ ಸಹಕಾರ ಕೊಡುವುದು ಕರ್ತವ್ಯ ಹಾಗೂ ಜವಾಬ್ದಾರಿ : ಡಾ. ವೀರೇಂದ್ರ ಹೆಗ್ಗಡೆ

ಉಡುಪಿ: ಉಡುಪಿ ಪರ್ಯಾಯ ಅಂದರೆ ಮಠದ ಪರ್ಯಾಯ ಅಲ್ಲ, ಅದು ನಮ್ಮೆಲ್ಲರ ಪರ್ಯಾಯ. ಭಾವೀ ಶೀರೂರು ಪರ್ಯಾಯ ಮಠಾಧೀಶರು ಅತ್ಯಂತ ಕಿರಿಯರು ಆಗಿರುವುದರಿಂದ ಅವರಿಗೆ ಎಲ್ಲರೂ ಸಹಕಾರ ಕೊಡುವುದು ಕರ್ತವ್ಯ ಹಾಗೂ ಜವಾಬ್ದಾರಿ ಆಗಿದೆ. ಆದುದರಿಂದ ಎಲ್ಲರೂ ಸಹಕಾರ ನೀಡಬೇಕೆಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.

ಶೀರೂರು ಮಠದ ಪರ್ಯಾಯ ಸ್ವಾಗತ ಸಮಿತಿಯ ವತಿಯಿಂದ ಉಡುಪಿ ವಿದ್ಯೋದಯ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ನಡೆದ ಶೀರೂರು ಪರ್ಯಾಯ 2026-2028 ಇದರ ಸಮಾಲೋಚನಾ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

“ಭಗವಂತ ಕೊಟ್ಟ ದೇಹವನ್ನು ಹೊರೆ ಮಾಡದೆ, ಸೇವೆಯ ಮೂಲಕ ಅದನ್ನು ದೇವರಿಗೆ ಅರ್ಪಿಸಬೇಕು. ಭಕ್ತಿಯಿಂದ ಸೇವೆ ಸಲ್ಲಿಸುವುದು ಜೀವನದ ಪರಮಾರ್ಥ. ಈ ದೃಷ್ಟಿಯಿಂದ ಉಡುಪಿಯ ಪರ್ಯಾಯೋತ್ಸವ ಭಗವಂತನಿಗೆ ಸಮರ್ಪಣೆ ಮಾಡಲು ಅಪೂರ್ವ ಅವಕಾಶ,” ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.

ಮಠದ ದಿವಾನ ಡಾ.ಉದಯ ಕುಮಾರ್ ಸರಳತ್ತಾಯ, ಸ್ವಾಗತ ಸಮಿತಿಯ ಅಧ್ಯಕ್ಷ, ಶಾಸಕ ಯಶ್‌ಪಾಲ್ ಸುವರ್ಣ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಎಂ.ಬಿ.ಪುರಾಣಿಕ್, ಅರುಣ್ ಕುಮಾರ್ ಪುತ್ತಿಲ ಮಾತನಾಡಿದರು.

ಶಾಸಕರಾದ ಸುನೀಲ್ ಕುಮಾರ್, ಗುರುರಾಜ್ ಗಂಟಿಹೊಳೆ, ಕಿರಣ್ ಕೊಡ್ಗಿ, ಮಾಜಿ ಶಾಸಕ ರಘುಪತಿ ಭಟ್, ಕಟೀಲು ಕ್ಷೇತ್ರ ಮೊಕ್ತೇಸರ ಲಕ್ಷ್ಮೀನಾರಾಯಣ ಅಸ್ರಣ್ಣ, ಹರಿಕೃಷ್ಣ ಪುನರೂರು, ದಿನಕರ ಹೇರೂರು, ಪ್ರದೀಪ್ ಕುಮಾರ್ ಕಲ್ಕೂರ, ಆನಂದ ಸುವರ್ಣ, ಹರಿಯಪ್ಪ ಕೊಟ್ಯಾನ್, ಧನಂಜಯ ಶೆಟ್ಟಿ, ಮುನಿಯಾಲು ಉದಯ ಕುಮಾರ್ ಶೆಟ್ಟಿ, ಪ್ರಸಾದ್ ರಾಜ್ ಕಾಂಚನ್, ರಮೇಶ್ ಕಾಂಚನ್, ಗಣೇಶ್ ರಾವ್, ರಮೇಶ್ ವೈದ್ಯ, ಪುರುಷೋತ್ತಮ ಶೆಟ್ಟಿ, ನಾರಾಯಣ ಕರ್ಕೇರ, ಬಿ.ಎನ್.ಶಂಕರ ಪೂಜಾರಿ, ಮಹೇಶ್ ಅಂಚನ್ ಮೊದಲಾದವರು ಉಪಸ್ಥಿತರಿದ್ದರು.

ಸಮಿತಿಯ ಸಂಚಾಲಕ ಬೈಕಾಡಿ ಸುಪ್ರಸಾದ್ ಶೆಟ್ಟಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಮಟ್ಟಾರು ರತ್ನಾಕರ ಹೆಗ್ಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಾರಕೂರು ದಾಮೋದರ್ ಶರ್ಮ ಕಾರ್ಯಕ್ರಮ ನಿರೂಪಿಸಿದರು.

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

7 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

8 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

8 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

8 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

8 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

9 hours ago