Featured

11 ಜನ ಮಕ್ಕಳಿದ್ದರೂ ಯಾರಿಗೂ  ಬೇಡವಾದ ತಾಯಿ : ದಯಾ ಮರಣಕ್ಕೆ ಅರ್ಜಿ ಸಲ್ಲಿಸಿದ ಹೆತ್ತಮ್ಮ – Vishwanews24

11 ಜನ ಮಕ್ಕಳಿದ್ದರೂ ಯಾರಿಗೂ  ಬೇಡವಾದ ತಾಯಿ,ದಯಾ ಮರಣಕ್ಕೆ ಅರ್ಜಿ ಸಲ್ಲಿಸಿದ ಹೆತ್ತಮ್ಮ

ಹಾವೇರಿ: 11 ಜನ ಮಕ್ಕಳು, ಮೊಮ್ಮಕ್ಕಳಿದ್ದರೂ ಅವರ್ಯಾರು ವೃದ್ಧೆಯೊಬ್ಬರನ್ನು ನೋಡಿಕೊಳ್ಳಲು ತಯಾರಿಲ್ಲದ ಕಾರಣ ಆಕೆ ದಯಾಮರಣಕ್ಕೆ ಅರ್ಜಿ ಸಲ್ಲಿಸಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದಲ್ಲಿ ನಡೆದಿದೆ.

ವೃದ್ಧೆಯ ಹೆಸರು ಪುಟ್ಟವ್ವ ಕೊಟ್ಟೂರ. 75ನ ವರ್ಷ. ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದ ರಂಗನಾಥ ನಗರದ ನಿವಾಸಿ. ಪುಟ್ಟವ್ವಳಿಗೆ 7 ಜನ ಗಂಡು ಹಾಗೂ 4 ಜನ ಹೆಣ್ಣು ಮಕ್ಕಳಿದ್ದಾರೆ. ಎಲ್ಲಾ ಮಕ್ಕಳಿಗೂ ಮದುವೆಯಾಗಿದ್ದು, ಅವರೆಲ್ಲರಿಗೂ 1-2 ಎಂಬಂತೆ ಮಕ್ಕಳಿದ್ದಾರೆ. ಪುಟ್ಟವ್ವಳ ಪತಿ ರಾಣೆಬೆನ್ನೂರು ನಗರದಲ್ಲಿ 7 ಮನೆಗಳು, ಸೈಟು ಮತ್ತು ಜಮೀನಿ ಮಾಡಿದ್ದಾರೆ. ತಾಲೂಕಿನ ಹುಲ್ಲತ್ತಿ ಗ್ರಾಮದ ಹದ್ದಿನಲ್ಲಿರೋ 28 ಎಕರೆ ಜಮೀನು ವ್ಯಾಜ್ಯದಲ್ಲಿದ್ದು, ಪ್ರಕರಣ ನ್ಯಾಯಾಲಯದಲ್ಲಿದೆಯಂತೆ.

ಇದನ್ನೂ ಓದಿ : ಅನವಶ್ಯಕ ಚರ್ಚೆ ಬೇಡ, ಸಹನೆಯನ್ನು ಕಾಪಾಡಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಪುಟ್ಟವ್ವಳ ಪತಿ ಹನುಮಂತಪ್ಪ ಕೆಲವು ವರ್ಷಗಳ ಹಿಂದೆಯೇ ನಿಧನರಾಗಿದ್ದಾರೆ. ಆದರೆ ಈಗಲೂ ಮನೆಗಳು, ಜಮೀನು ಸೇರಿದಂತೆ ಎಲ್ಲವೂ ಪುಟ್ಟವ್ವಳ ಪತಿ ಹನುಮಂತಪ್ಪನ ಹೆಸರಿನಲ್ಲೇ ಇವೆ. ಇಷ್ಟೆಲ್ಲಾ ಇದ್ದರೂ ಇಳಿ ವಯಸ್ಸಿನಲ್ಲಿರೋ ಹೆತ್ತ ತಾಯಿಯನ್ನು ಯಾರೂ ನೋಡಿಕೊಳ್ಳುತ್ತಿಲ್ಲ. ಪುಟ್ಟವ್ವಳಿಗೆ ಹಲವು ವಯೋಸಹಜ ಕಾಯಿಲೆಗಳೂ ಇವೆ. ಗಂಡು, ಹೆಣ್ಣು ಮಕ್ಕಳು, ಮೊಮ್ಮಕ್ಕಳು ಇದ್ದರೂ ಯಾರೂ ಪುಟ್ಟವ್ವಳಿಗೆ ಒಂದು ಹೊತ್ತಿನ ಊಟ ಹಾಕುತ್ತಿಲ್ಲ. ಆರೋಗ್ಯ ಸಮಸ್ಯೆಯಾದಾಗ ಆಸ್ಪತ್ರೆಗೂ ಕರೆದುಕೊಂಡು ಹೋಗುತ್ತಿಲ್ಲ. ಹೀಗಾಗಿ ನನಗೆ ಈ ಜೀವನ ಸಾಕಾಗಿದೆ. ದಯಾಮರಣ ಕೊಡಿ ಅಂತ ವೃದ್ಧೆ ಪುಟ್ಟವ್ವ ದಯಾಮರಣದ ಪತ್ರ ಹಿಡಿದುಕೊಂಡು ಜಿಲ್ಲಾಡಳಿತ ಭವನಕ್ಕೆ ಅಲೆಯುತ್ತಿದ್ದಾರೆ.

ಹೆಣ್ಣು ಮಕ್ಕಳು ಮದುವೆಯಾಗಿ ಗಂಡನ ಮನೆ ಸೇರಿದ್ದಾರೆ. 7 ಜನ ಗಂಡು ಮಕ್ಕಳ ಪೈಕಿ ಕಿರಿಯ ಮಗ ಗೋವಿಂದರಾಜ ಮಾತ್ರ ಪುಟ್ಟವ್ವಳಿಗೆ ಕೆಲವು ವರ್ಷಗಳ ಕಾಲ ನೋಡಿಕೊಂಡಿದ್ದರು. ಆದರೆ ಅವರ ಆರ್ಥಿಕ ಪರಿಸ್ಥಿತಿ ಪ್ರಸ್ತುತ ಸರಿ ಇಲ್ಲ. ಪತಿಯ ಹೆಸರಿನಲ್ಲಿರೋ ಆಸ್ತಿಗಳಲ್ಲಿ ಅಲ್ಪಸ್ವಲ್ಪ ಮಾರಾಟ ಮಾಡಿ ಜೀವನ ಸಾಗಿಸಬೇಕು ಎಂದರೆ ಗಂಡು ಮಕ್ಕಳು ಅದಕ್ಕೂ ಬಿಡುತ್ತಿಲ್ಲ. ಎರಡು ಹೊತ್ತಿನ ಊಟವನ್ನೂ ಹಾಕುತ್ತಿಲ್ಲ. ಹೀಗಾಗಿ 11 ಜನ ಮಕ್ಕಳಿದ್ರೂ ಅಕ್ಕಪಕ್ಕದ ಮನೆಯವರು, ಅವರಿವರು ಕೊಟ್ಟ ಊಟ ಮಾಡಿ ಬದುಕಬೇಕಾಗಿದೆ ಎಂದು ಪುಟ್ಟವ್ವ ತನ್ನ ಅಳಲನ್ನು ತೋಡಿಕೊಂಡಿದ್ದಾರೆ.

ಇದನ್ನೂ ಓದಿ : NIA ದಾಳಿ ವಿರೋಧಿಸಿ ಸುರತ್ಕಲ್‌ ಬಳಿ ಹೆದ್ದಾರಿ ತಡೆ..ಶಾಸಕ ಭರತ್ ತೀವ್ರ ಆಕ್ರೋಶ ; ಸೂಕ್ತ ಕ್ರಮಕ್ಕೆ ಆಗ್ರಹ – Vishwanews24

ಮಕ್ಕಳು ನೋಡಿಕೊಳ್ಳದೇ ಇರೋದನ್ನು ಕಂಡು ಜೀವನವೇ ಸಾಕು ಸಾಕು ಅನ್ನಿಸಿದೆ. ನನಗೆ ದಯಾಮರಣ ಕೊಡಿಸಿ ಅಂತ ವೃದ್ಧ ತಾಯಿ ಪುಟ್ಟವ್ವ ಜಿಲ್ಲಾಡಳಿತ ಭವನದಲ್ಲಿ ಅಧಿಕಾರಿಗಳ ಬಳಿ ತನ್ನ ಅಳಲು ತೋಡಿಕೊಂಡಿದ್ದಾರೆ. ರಾಷ್ಟ್ರಪತಿಗಳಿಗೆ ದಯಾಮರಣ ಕೋರಿ ಬರೆದಿರೋ ಪತ್ರ ಹಿಡಿದು ಬಂದಿರೋ ವೃದ್ಧೆಯನ್ನು ಭೇಟಿಯಾಗಿ ಹಿರಿಯ ನಾಗಕರಿಕರ ಕಲ್ಯಾಣ ಇಲಾಖೆ ಅಧಿಕಾರಿ ಆಶು ನದಾಫ ಸಮಸ್ಯೆ ಆಲಿಸಿದ್ದಾರೆ. ಪುಟ್ಟವ್ವಳಿಗೆ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಉಪವಿಭಾಗಾಧಿಕಾರಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವಂತೆ ಸಲಹೆ ನೀಡಿದ್ದಾರೆ. ಉಳಿದಂತೆ ಪುಟ್ಟವ್ವ ಅವರಿಗೆ ಯಾವುದೇ ಸಮಸ್ಯೆ ಆಗದಂತೆ ಉಳಿದುಕೊಳ್ಳಲು ವೃದ್ಧಾಶ್ರಮದಲ್ಲಿ ವ್ಯವಸ್ಥೆ ಕಲ್ಪಿಸೋದಾಗಿ ಹೇಳಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago