Featured

11 ಜನ ಮಕ್ಕಳಿದ್ದರೂ ಯಾರಿಗೂ  ಬೇಡವಾದ ತಾಯಿ : ದಯಾ ಮರಣಕ್ಕೆ ಅರ್ಜಿ ಸಲ್ಲಿಸಿದ ಹೆತ್ತಮ್ಮ – Vishwanews24

11 ಜನ ಮಕ್ಕಳಿದ್ದರೂ ಯಾರಿಗೂ  ಬೇಡವಾದ ತಾಯಿ,ದಯಾ ಮರಣಕ್ಕೆ ಅರ್ಜಿ ಸಲ್ಲಿಸಿದ ಹೆತ್ತಮ್ಮ

ಹಾವೇರಿ: 11 ಜನ ಮಕ್ಕಳು, ಮೊಮ್ಮಕ್ಕಳಿದ್ದರೂ ಅವರ್ಯಾರು ವೃದ್ಧೆಯೊಬ್ಬರನ್ನು ನೋಡಿಕೊಳ್ಳಲು ತಯಾರಿಲ್ಲದ ಕಾರಣ ಆಕೆ ದಯಾಮರಣಕ್ಕೆ ಅರ್ಜಿ ಸಲ್ಲಿಸಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದಲ್ಲಿ ನಡೆದಿದೆ.

ವೃದ್ಧೆಯ ಹೆಸರು ಪುಟ್ಟವ್ವ ಕೊಟ್ಟೂರ. 75ನ ವರ್ಷ. ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದ ರಂಗನಾಥ ನಗರದ ನಿವಾಸಿ. ಪುಟ್ಟವ್ವಳಿಗೆ 7 ಜನ ಗಂಡು ಹಾಗೂ 4 ಜನ ಹೆಣ್ಣು ಮಕ್ಕಳಿದ್ದಾರೆ. ಎಲ್ಲಾ ಮಕ್ಕಳಿಗೂ ಮದುವೆಯಾಗಿದ್ದು, ಅವರೆಲ್ಲರಿಗೂ 1-2 ಎಂಬಂತೆ ಮಕ್ಕಳಿದ್ದಾರೆ. ಪುಟ್ಟವ್ವಳ ಪತಿ ರಾಣೆಬೆನ್ನೂರು ನಗರದಲ್ಲಿ 7 ಮನೆಗಳು, ಸೈಟು ಮತ್ತು ಜಮೀನಿ ಮಾಡಿದ್ದಾರೆ. ತಾಲೂಕಿನ ಹುಲ್ಲತ್ತಿ ಗ್ರಾಮದ ಹದ್ದಿನಲ್ಲಿರೋ 28 ಎಕರೆ ಜಮೀನು ವ್ಯಾಜ್ಯದಲ್ಲಿದ್ದು, ಪ್ರಕರಣ ನ್ಯಾಯಾಲಯದಲ್ಲಿದೆಯಂತೆ.

ಇದನ್ನೂ ಓದಿ : ಅನವಶ್ಯಕ ಚರ್ಚೆ ಬೇಡ, ಸಹನೆಯನ್ನು ಕಾಪಾಡಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಪುಟ್ಟವ್ವಳ ಪತಿ ಹನುಮಂತಪ್ಪ ಕೆಲವು ವರ್ಷಗಳ ಹಿಂದೆಯೇ ನಿಧನರಾಗಿದ್ದಾರೆ. ಆದರೆ ಈಗಲೂ ಮನೆಗಳು, ಜಮೀನು ಸೇರಿದಂತೆ ಎಲ್ಲವೂ ಪುಟ್ಟವ್ವಳ ಪತಿ ಹನುಮಂತಪ್ಪನ ಹೆಸರಿನಲ್ಲೇ ಇವೆ. ಇಷ್ಟೆಲ್ಲಾ ಇದ್ದರೂ ಇಳಿ ವಯಸ್ಸಿನಲ್ಲಿರೋ ಹೆತ್ತ ತಾಯಿಯನ್ನು ಯಾರೂ ನೋಡಿಕೊಳ್ಳುತ್ತಿಲ್ಲ. ಪುಟ್ಟವ್ವಳಿಗೆ ಹಲವು ವಯೋಸಹಜ ಕಾಯಿಲೆಗಳೂ ಇವೆ. ಗಂಡು, ಹೆಣ್ಣು ಮಕ್ಕಳು, ಮೊಮ್ಮಕ್ಕಳು ಇದ್ದರೂ ಯಾರೂ ಪುಟ್ಟವ್ವಳಿಗೆ ಒಂದು ಹೊತ್ತಿನ ಊಟ ಹಾಕುತ್ತಿಲ್ಲ. ಆರೋಗ್ಯ ಸಮಸ್ಯೆಯಾದಾಗ ಆಸ್ಪತ್ರೆಗೂ ಕರೆದುಕೊಂಡು ಹೋಗುತ್ತಿಲ್ಲ. ಹೀಗಾಗಿ ನನಗೆ ಈ ಜೀವನ ಸಾಕಾಗಿದೆ. ದಯಾಮರಣ ಕೊಡಿ ಅಂತ ವೃದ್ಧೆ ಪುಟ್ಟವ್ವ ದಯಾಮರಣದ ಪತ್ರ ಹಿಡಿದುಕೊಂಡು ಜಿಲ್ಲಾಡಳಿತ ಭವನಕ್ಕೆ ಅಲೆಯುತ್ತಿದ್ದಾರೆ.

ಹೆಣ್ಣು ಮಕ್ಕಳು ಮದುವೆಯಾಗಿ ಗಂಡನ ಮನೆ ಸೇರಿದ್ದಾರೆ. 7 ಜನ ಗಂಡು ಮಕ್ಕಳ ಪೈಕಿ ಕಿರಿಯ ಮಗ ಗೋವಿಂದರಾಜ ಮಾತ್ರ ಪುಟ್ಟವ್ವಳಿಗೆ ಕೆಲವು ವರ್ಷಗಳ ಕಾಲ ನೋಡಿಕೊಂಡಿದ್ದರು. ಆದರೆ ಅವರ ಆರ್ಥಿಕ ಪರಿಸ್ಥಿತಿ ಪ್ರಸ್ತುತ ಸರಿ ಇಲ್ಲ. ಪತಿಯ ಹೆಸರಿನಲ್ಲಿರೋ ಆಸ್ತಿಗಳಲ್ಲಿ ಅಲ್ಪಸ್ವಲ್ಪ ಮಾರಾಟ ಮಾಡಿ ಜೀವನ ಸಾಗಿಸಬೇಕು ಎಂದರೆ ಗಂಡು ಮಕ್ಕಳು ಅದಕ್ಕೂ ಬಿಡುತ್ತಿಲ್ಲ. ಎರಡು ಹೊತ್ತಿನ ಊಟವನ್ನೂ ಹಾಕುತ್ತಿಲ್ಲ. ಹೀಗಾಗಿ 11 ಜನ ಮಕ್ಕಳಿದ್ರೂ ಅಕ್ಕಪಕ್ಕದ ಮನೆಯವರು, ಅವರಿವರು ಕೊಟ್ಟ ಊಟ ಮಾಡಿ ಬದುಕಬೇಕಾಗಿದೆ ಎಂದು ಪುಟ್ಟವ್ವ ತನ್ನ ಅಳಲನ್ನು ತೋಡಿಕೊಂಡಿದ್ದಾರೆ.

ಇದನ್ನೂ ಓದಿ : NIA ದಾಳಿ ವಿರೋಧಿಸಿ ಸುರತ್ಕಲ್‌ ಬಳಿ ಹೆದ್ದಾರಿ ತಡೆ..ಶಾಸಕ ಭರತ್ ತೀವ್ರ ಆಕ್ರೋಶ ; ಸೂಕ್ತ ಕ್ರಮಕ್ಕೆ ಆಗ್ರಹ – Vishwanews24

ಮಕ್ಕಳು ನೋಡಿಕೊಳ್ಳದೇ ಇರೋದನ್ನು ಕಂಡು ಜೀವನವೇ ಸಾಕು ಸಾಕು ಅನ್ನಿಸಿದೆ. ನನಗೆ ದಯಾಮರಣ ಕೊಡಿಸಿ ಅಂತ ವೃದ್ಧ ತಾಯಿ ಪುಟ್ಟವ್ವ ಜಿಲ್ಲಾಡಳಿತ ಭವನದಲ್ಲಿ ಅಧಿಕಾರಿಗಳ ಬಳಿ ತನ್ನ ಅಳಲು ತೋಡಿಕೊಂಡಿದ್ದಾರೆ. ರಾಷ್ಟ್ರಪತಿಗಳಿಗೆ ದಯಾಮರಣ ಕೋರಿ ಬರೆದಿರೋ ಪತ್ರ ಹಿಡಿದು ಬಂದಿರೋ ವೃದ್ಧೆಯನ್ನು ಭೇಟಿಯಾಗಿ ಹಿರಿಯ ನಾಗಕರಿಕರ ಕಲ್ಯಾಣ ಇಲಾಖೆ ಅಧಿಕಾರಿ ಆಶು ನದಾಫ ಸಮಸ್ಯೆ ಆಲಿಸಿದ್ದಾರೆ. ಪುಟ್ಟವ್ವಳಿಗೆ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಉಪವಿಭಾಗಾಧಿಕಾರಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವಂತೆ ಸಲಹೆ ನೀಡಿದ್ದಾರೆ. ಉಳಿದಂತೆ ಪುಟ್ಟವ್ವ ಅವರಿಗೆ ಯಾವುದೇ ಸಮಸ್ಯೆ ಆಗದಂತೆ ಉಳಿದುಕೊಳ್ಳಲು ವೃದ್ಧಾಶ್ರಮದಲ್ಲಿ ವ್ಯವಸ್ಥೆ ಕಲ್ಪಿಸೋದಾಗಿ ಹೇಳಿದ್ದಾರೆ.

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

12 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

12 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

13 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

15 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

15 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

15 hours ago