ಬೆಂಗಳೂರು: ಪಾಸಿಟಿವಿಟಿ ರೇಟ್ ಹೆಚ್ಚಿರುವ ರಾಜ್ಯದ 11 ಜಿಲ್ಲೆಗಳಲ್ಲಿ ಲಾಕ್ಡೌನ್ ಮುಂದುವರಿಯಲಿದ್ದು, ಉಳಿದ ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಗೊಳಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.
ಉಸ್ತುವಾರಿ ಸಚಿವರ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಬೆಂಗಳೂರು ಗ್ರಾಮಾಂತರ, ಮೈಸೂರು, ಕೊಡಗು, ಚಿಕ್ಕಮಗಳೂರು, ಹಾಸನ, ಮಂಡ್ಯ, ಚಾಮರಾಜನಗರ, ದಕ್ಷಿಣ ಕನ್ನಡ, ಬೆಳಗಾವಿ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಗಿರುವ ಲಾಕ್ ಡೌನ್ ಮುಂದುವರಿಯಲಿದೆ ಎಂದು ಹೇಳಿದರು.
ಎಲ್ಲ ಕಾರ್ಖಾನೆಗಳಲ್ಲಿ ಶೇ. 50, ಗಾರ್ಮೆಂಟ್ನಲ್ಲಿ ಶೇ.30ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿ ನೀಡಲಾಗಿದೆ.
ಅಗತ್ಯ ವಸ್ತು ಖರೀದಿಗೆ ಮಧ್ಯಾಹ್ನ 2ರವರೆಗೆ ಅವಕಾಶ ನೀಡಲಾಗಿದೆ. ನಿರ್ಮಾಣ ಚಟುವಟಿಕೆ ಮತ್ತು ಅದಕ್ಕೆ ಸಂಬಂಧಿಸಿದ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.
ಪಾರ್ಕ್ಗಳಲ್ಲಿ 10 ಗಂಟೆವರೆಗೆ ವಾಕಿಂಗ್ ನಡೆಸಲು ಅನುಮತಿ ನೀಡಲಾಗಿದೆ. ಬೀದಿ ಬದಿ ವ್ಯಾಪಾರಿಗಳು ಮಧ್ಯಾಹ್ನ 2ರವರೆಗೆ ವ್ಯಾಪಾರ ನಡೆಸಲು ಅನುಮತಿ ನೀಡಲಾಗಿದೆ.
ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರು ಸಂಚರಿಸಲು ಅವಕಾಶ ಕೊಡಲಾಗಿದೆ.
ಇದೇ 14ರ ಸೋಮವಾರ ಬೆಳಿಗ್ಗೆಯಿಂದಲೇ 21ರ ಬೆಳಿಗ್ಗೆಯವರೆಗೆ ಹೊಸ ನಿಯಮ ಅನ್ವಯವಾಗಲಿದೆ.
ಪ್ರತಿದಿನ ಸಂಜೆ 7ಗಂಟೆಯಿಂದ ಬೆಳಗ್ಗೆ 5ಗಂಟೆವರೆಗೆ ನೈಟ್ ಕರ್ಫ್ಯೂ ಮತ್ತು ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 5ರವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ. ಜೂನ್ 14ರಿಂದ ಈ ನಿಯಮ ಜಾರಿಗೆ ಬರಲಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…