Featured

11 ವರ್ಷಗಳ ದಾಂಪತ್ಯ ಬದುಕಿಗೆ ಅಂತ್ಯ ಹಾಡಿದ ತಮಿಳಿನ ಖ್ಯಾತ ಸಂಗೀತ ನಿರ್ದೇಶಕ ಜಿ.ವಿ ಪ್ರಕಾಶ್ ಕುಮಾರ್ – Vishwanews24

11 ವರ್ಷಗಳ ದಾಂಪತ್ಯ ಬದುಕಿಗೆ ಅಂತ್ಯ ಹಾಡಿದ ತಮಿಳಿನ ಖ್ಯಾತ ಸಂಗೀತ ನಿರ್ದೇಶಕ ಜಿ.ವಿ ಪ್ರಕಾಶ್ ಕುಮಾರ್

ತಮಿಳಿನ ಖ್ಯಾತ ಸಂಗೀತ ನಿರ್ದೇಶಕ ಜಿ.ವಿ ಪ್ರಕಾಶ್ ಕುಮಾರ್ ಅವರು ತಮ್ಮ 11 ವರ್ಷಗಳ ದಾಂಪತ್ಯ ಬದುಕಿಗೆ ಅಂತ್ಯ ಹಾಡಿದ್ದಾರೆ. ಡಿವೋರ್ಸ್ ಬಗ್ಗೆ ಮ್ಯೂಸಿಕ್ ಡೈರೆಕ್ಟರ್ ಜಿ.ವಿ ಪ್ರಕಾಶ್ ಅಧಿಕೃತ ಮಾಹಿತಿ ಬಿಚ್ಚಿಟ್ಟಿದ್ದಾರೆ.‌

ಸಾಕಷ್ಟು ಆಲೋಚಿಸಿ ನಾನು ಹಾಗೂ ಸೈಂಧವಿ  ಬೇರೆ ಆಗುತ್ತಿದ್ದೇವೆ. 11 ವರ್ಷಗಳ ದಾಂಪತ್ಯಕ್ಕೆ ಕೊನೆ ಹಾಡುತ್ತಿದ್ದೇವೆ. ನಮ್ಮ ಮಾನಸಿಕ ಆರೋಗ್ಯಕ್ಕಾಗಿ ಈ ನಿರ್ಧಾರ ಎಂದು ಪ್ರಕಾಶ್ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದಾಂಪತ್ಯ ಬದುಕಿನ ಬಿರುಕಿನ ಬಗ್ಗೆ ಹಲವು ದಿನಗಳಿಂದ ಸುದ್ದಿಯಾಗಿತ್ತು. ಈಗ ಅಧಿಕೃತ ಮಾಹಿತಿ ಹೊರಬಿದ್ದಿದೆ.

ಈ ವೈಯಕ್ತಿಕ ಪರಿವರ್ತನೆಯ ಸಮಯದಲ್ಲಿ ನಮ್ಮ ಖಾಸಗಿತನಕ್ಕೆ ಬೆಲೆ ನೀಡಬೇಕು ಎಂದು ಮಾಧ್ಯಮಗಳು, ಸ್ನೇಹಿತರು ಮತ್ತು ಅಭಿಮಾನಿಗಳನ್ನು ನಾವು ದಯೆಯಿಂದ ಕೇಳುತ್ತೇವೆ. ನಾವು ಬೇರೆ ಬೇರೆ ಆಗಿ ಬೆಳೆಯುತ್ತಿದ್ದೇವೆ. ಇದು ಅತ್ಯುತ್ತಮ ನಿರ್ಧಾರ ಎಂದು ನಾವು ಭಾವಿಸುತ್ತೇವೆ. ಈ ಕಷ್ಟದ ಸಮಯದಲ್ಲಿ ನಿಮ್ಮ ತಿಳುವಳಿಕೆ ಮತ್ತು ಬೆಂಬಲವು ಮುಖ್ಯ ಎಂದು ಪ್ರಕಾಶ್ ಬರೆದುಕೊಂಡಿದ್ದಾರೆ.

ಪ್ರಕಾಶ್ ಕುಮಾರ್ ಅವರು ಎ.ಆರ್ ರೆಹಮಾನ್ ಅವರ ಸೋದರಳಿಯ. ಪ್ರಕಾಶ್ ಅವರು ಬಾಲ್ಯದ ಗೆಳೆತಿ ಸೈಂಧವಿ ಅವರನ್ನು 2013ರಲ್ಲಿ ಮದುವೆ ಆದರು. 2020ರಲ್ಲಿ ಈ ದಂಪತಿ ಹೆಣ್ಣು ಮಗುವನ್ನು ಕುಟುಂಬಕ್ಕೆ ಸ್ವಾಗತಿಸಿದರು. ಈಗ ದಾಂಪತ್ಯ ಬದುಕಿಗೆ ಈ ಜೋಡಿ ಕೊನೆ ಹಾಡಿದ್ದಾರೆ.

Vishwa News 24

Recent Posts

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು -vishwanews24

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…

1 day ago

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ -vishwanews24

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌…

2 days ago

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು -vishwanews24

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…

2 days ago

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ -vishwanews24

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…

2 days ago

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ -vishwanews24

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…

2 days ago

ಶಿರ್ವ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು -vishwanews24

ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…

2 days ago