Featured

11 ವರ್ಷಗಳ ದಾಂಪತ್ಯ ಬದುಕಿಗೆ ಅಂತ್ಯ ಹಾಡಿದ ತಮಿಳಿನ ಖ್ಯಾತ ಸಂಗೀತ ನಿರ್ದೇಶಕ ಜಿ.ವಿ ಪ್ರಕಾಶ್ ಕುಮಾರ್ – Vishwanews24

11 ವರ್ಷಗಳ ದಾಂಪತ್ಯ ಬದುಕಿಗೆ ಅಂತ್ಯ ಹಾಡಿದ ತಮಿಳಿನ ಖ್ಯಾತ ಸಂಗೀತ ನಿರ್ದೇಶಕ ಜಿ.ವಿ ಪ್ರಕಾಶ್ ಕುಮಾರ್

ತಮಿಳಿನ ಖ್ಯಾತ ಸಂಗೀತ ನಿರ್ದೇಶಕ ಜಿ.ವಿ ಪ್ರಕಾಶ್ ಕುಮಾರ್ ಅವರು ತಮ್ಮ 11 ವರ್ಷಗಳ ದಾಂಪತ್ಯ ಬದುಕಿಗೆ ಅಂತ್ಯ ಹಾಡಿದ್ದಾರೆ. ಡಿವೋರ್ಸ್ ಬಗ್ಗೆ ಮ್ಯೂಸಿಕ್ ಡೈರೆಕ್ಟರ್ ಜಿ.ವಿ ಪ್ರಕಾಶ್ ಅಧಿಕೃತ ಮಾಹಿತಿ ಬಿಚ್ಚಿಟ್ಟಿದ್ದಾರೆ.‌

ಸಾಕಷ್ಟು ಆಲೋಚಿಸಿ ನಾನು ಹಾಗೂ ಸೈಂಧವಿ  ಬೇರೆ ಆಗುತ್ತಿದ್ದೇವೆ. 11 ವರ್ಷಗಳ ದಾಂಪತ್ಯಕ್ಕೆ ಕೊನೆ ಹಾಡುತ್ತಿದ್ದೇವೆ. ನಮ್ಮ ಮಾನಸಿಕ ಆರೋಗ್ಯಕ್ಕಾಗಿ ಈ ನಿರ್ಧಾರ ಎಂದು ಪ್ರಕಾಶ್ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದಾಂಪತ್ಯ ಬದುಕಿನ ಬಿರುಕಿನ ಬಗ್ಗೆ ಹಲವು ದಿನಗಳಿಂದ ಸುದ್ದಿಯಾಗಿತ್ತು. ಈಗ ಅಧಿಕೃತ ಮಾಹಿತಿ ಹೊರಬಿದ್ದಿದೆ.

ಈ ವೈಯಕ್ತಿಕ ಪರಿವರ್ತನೆಯ ಸಮಯದಲ್ಲಿ ನಮ್ಮ ಖಾಸಗಿತನಕ್ಕೆ ಬೆಲೆ ನೀಡಬೇಕು ಎಂದು ಮಾಧ್ಯಮಗಳು, ಸ್ನೇಹಿತರು ಮತ್ತು ಅಭಿಮಾನಿಗಳನ್ನು ನಾವು ದಯೆಯಿಂದ ಕೇಳುತ್ತೇವೆ. ನಾವು ಬೇರೆ ಬೇರೆ ಆಗಿ ಬೆಳೆಯುತ್ತಿದ್ದೇವೆ. ಇದು ಅತ್ಯುತ್ತಮ ನಿರ್ಧಾರ ಎಂದು ನಾವು ಭಾವಿಸುತ್ತೇವೆ. ಈ ಕಷ್ಟದ ಸಮಯದಲ್ಲಿ ನಿಮ್ಮ ತಿಳುವಳಿಕೆ ಮತ್ತು ಬೆಂಬಲವು ಮುಖ್ಯ ಎಂದು ಪ್ರಕಾಶ್ ಬರೆದುಕೊಂಡಿದ್ದಾರೆ.

ಪ್ರಕಾಶ್ ಕುಮಾರ್ ಅವರು ಎ.ಆರ್ ರೆಹಮಾನ್ ಅವರ ಸೋದರಳಿಯ. ಪ್ರಕಾಶ್ ಅವರು ಬಾಲ್ಯದ ಗೆಳೆತಿ ಸೈಂಧವಿ ಅವರನ್ನು 2013ರಲ್ಲಿ ಮದುವೆ ಆದರು. 2020ರಲ್ಲಿ ಈ ದಂಪತಿ ಹೆಣ್ಣು ಮಗುವನ್ನು ಕುಟುಂಬಕ್ಕೆ ಸ್ವಾಗತಿಸಿದರು. ಈಗ ದಾಂಪತ್ಯ ಬದುಕಿಗೆ ಈ ಜೋಡಿ ಕೊನೆ ಹಾಡಿದ್ದಾರೆ.

Vishwa News 24

Recent Posts

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

21 minutes ago

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…

40 minutes ago

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago