ಉಡುಪಿ: ಕೊಡಿಬೆಂಗ್ರೆ ಸಮೀಪ ಸಮುದ್ರದಲ್ಲಿ ಸಂಭವಿಸಿದ ದೋಣಿ ದುರಂತ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬೋಟ್ ಮಾಲೀಕರಾದ ಬ್ರಹ್ಮಾವರ ತಾಲೂಕಿನ ಕೋಡಿ ಗ್ರಾಮದ ನಿವಾಸಿಗಳಾದ ಸುಹಾಸ್ ಶ್ರೀಯಾನ್(23) ಮತ್ತು ಸುಫಿಯಾನ್(20) ಹಾಗೂ ಬೋಟ್ ಚಾಲಕ ಕೋಡಿ ಗ್ರಾಮದ ನಿವಾಸಿ ವಾಸು ಮೆಂಡನ್(52̧) ಬಂಧಿತ ಆರೋಪಿಗಳು. ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಜ. 26ರಂದು ಬೆಳಿಗ್ಗೆ ಸಂಭವಿಸಿದ ದೋಣಿ ದುರಂತದಲ್ಲಿ ಮೂವರು ಮೃತಪಟ್ಟಿದ್ದರು. ಪ್ರಸಾಸೋದ್ಯಮ ಇಲಾಖೆಯಿಂದ ಯಾವುದೇ ಪರವಾನಿಗೆ ಪಡೆಯದಿರುವುದು ಕಂಡುಬಂದಿದೆ. ಅಲ್ಲದೆ, ಬೋಟ್ ಪ್ರವಾಸಿಗರ ವಿಹಾರಕ್ಕೆ ಯೋಗ್ಯವಾಗಿದೆ ಎಂಬ ಧೃಢೀಕರಣ ಪತ್ರವನ್ನು ಹೊಂದಿರಲಿಲ್ಲ. ಪ್ರವಾಸಿಗರನ್ನು ಕರೆದುಕೊಂಡು ಹೋಗುವಾಗ ಸಂದರ್ಭದಲ್ಲಿಯೂ ಲೈಫ್ ಜಾಕೆಟ್ ನಂತಹ ಯಾವುದೇ ಮುಂಜಾಗೃತಾ ಕ್ರಮಗಳನ್ನು ಅನುಸರಿಸದೆ ಇರುವುದು ಕೂಡ ತನಿಖೆಯಲ್ಲಿ ಕಂಡುಬಂದಿದೆ. ಆರೋಪಿಗಳ ವಿರುದ್ಧ ಅಜಾಗರೂಕತೆ ಹಾಗೂ ನಿರ್ಲಕ್ಷತನದ ಸೆಕ್ಷನ್ ನಡಿ ಪ್ರಕರಣ ದಾಖಲಾಗಿದೆ.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…