ಉಡುಪಿ

ಬಿಜೆಪಿ ಮೂರನೆ ಪಟ್ಟಿ. ಉಡುಪಿಗೆ ರಘುಪತಿ ಭಟ್, ಕಾಪುವಿಗೆ ಲಾಲಾಜಿ ಮೆಂಡನ್..

ಬಿಜೆಪಿ ಮೂರನೆ ಪಟ್ಟಿ. ಉಡುಪಿಗೆ ರಘುಪತಿ ಭಟ್, ಕಾಪುವಿಗೆ ಲಾಲಾಜಿ ಮೆಂಡನ್

ಉಡುಪಿ: ಬಿಜೆಪಿ ಮೊದಲ ಹಾಗೂ ಎರಡನೆ ಪಟ್ಟಿಯಲ್ಲಿ ಉಡುಪಿ ಜಿಲ್ಲೆಯ ಎರಡು ಕ್ಷೇತ್ರಗಳಾದ ಉಡುಪಿ ಮತ್ತು ಕಾಪು ಕ್ಷೇತ್ರದ ಅಭ್ಯರ್ಥಿಗಳ ಹೆಸರು ಪ್ರಕಟಗೊಳಿಸದೆ ಹಲವು ಗೊಂದಲಗಳಿಗೆ ಎಡೆಮಾಡಿಕೊಟ್ಟಿರುವ ರಾಜ್ಯ ಬಿಜೆಪಿ ಇದೀಗ ಮೂರನೆ ಪಟ್ಟಿ ಬಿಡುಗಡೆ ಮಾಡುವ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದೆ.

ತೀವ್ರ ಕತೂಹಲ ಕೆರಳಿಸಿರುವ ಈ ಎರಡು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಇಂದು ಸಂಜೆ ಬಿಜೆಪಿ ಪ್ರಕಟಿಸಿದೆ. 

ಉಡುಪಿ ಕ್ಷೇತ್ರಕ್ಕೆ ಕಾಂಗ್ರೆಸ್‌ನ ಹಾಲಿ ಸಚಿವ ಪ್ರಮೋದ್ ಮಧ್ವರಾಜ್ ಎದುರು ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಕಣಕ್ಕಿಳಿಸಿದೆ. ಶಾಸಕ ವಿನಯ ಕುಮಾರ್ ಸೊರಕೆ ಎದುರು ಮಾಜಿ ಶಾಸಕ ಲಾಲಾಜಿ ಮೆಂಡನ್ ಅವರನ್ನು ಕಣಕ್ಕಿಳಿಸಿದೆ.

ಕಳೆದ ಬಾರಿಯ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದ ಗುರ್ಮೆ ಸುರೇಶ್ ಶೆಟ್ಟಿ ವಿನಯ ಕುಮಾರ್ ಸೊರಕೆ ಅವರಿಗೆ ಟಿಕೆಟ್ ನೀಡಿದ ಬೆನ್ನಲ್ಲೇ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಗೊಂಡಿದ್ದರು. 

ಕಾಪು ಕ್ಷೇತ್ರದ ಬಿಜೆಪಿ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿ ಗುರುತಿಸಿಕೊಂಡಿದ್ದ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಈ ಬಾರಿ ಬಿಜೆಪಿಯೂ ನಿರಾಸೆ ಮೂಡಿಸಿದೆ.

ಇನ್ನೊಂದೆಡೆಯಲ್ಲಿ ಚತುರ ಸಂಘಟಕ, ಯುವ ನಾಯಕ ಯಶ್‌ಪಾಲ್ ಸುವರ್ಣ ಅವರೂ ಕಾಪು ಕ್ಷೇತ್ರದ ಬಿಜೆಪಿ ಆಕಾಂಕ್ಷಿಯಾಗಿದ್ದರು. ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ಯಶ್‌ಪಾಲ್ ಬೆಂಬಲಿಗರು ಟಿಕೆಟ್ ನೀಡಬೇಕೆಂದು ಭಾರೀ ಪ್ರಚಾರ ನಡೆಸಿದ್ದರು.

ಕಳೆದ ಎರಡು ದಿನಗಳ ಹಿಂದೆ ರಘುಪತಿ ಭಟ್ ಅವರಿಗೆ ಉಡುಪಿಯಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನೀಡಬೇಕೆಂದು ಅವರ ವಯೋವೃದ್ದ ತಾಯಿ ಸೇರಿದಂತೆ ನೂರಾರು ಅಭಿಮಾನಿಗಳು ಉಡುಪಿಯ ಶ್ರೀಕೃಷ್ಣ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು.

ಮಂಗಳೂರಿಗೆ ಸಂತೋಷ್ ಕುಮಾರ್ ರೈ, ಮಂಗಳೂರು ಉತ್ತರಕ್ಕೆ ಡಾ. ಭರತ್ ಶೆಟ್ಟಿ, ಮಂಗಳೂರು ದಕ್ಷಿಣ ಕ್ಷೇತ್ರಕ್ಕೆ ವೇದವ್ಯಾಸ ಕಾಮತ್ ಅವರನ್ನು ಅಭ್ಯರ್ಥಿ ಎಂದು ಘೋಷಿಸಲಾಗಿದೆ.

 

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

4 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

5 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

5 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

5 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

6 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

6 hours ago