ತೀವ್ರ ಕತೂಹಲ ಕೆರಳಿಸಿರುವ ಈ ಎರಡು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಇಂದು ಸಂಜೆ ಬಿಜೆಪಿ ಪ್ರಕಟಿಸಿದೆ.
ಉಡುಪಿ ಕ್ಷೇತ್ರಕ್ಕೆ ಕಾಂಗ್ರೆಸ್ನ ಹಾಲಿ ಸಚಿವ ಪ್ರಮೋದ್ ಮಧ್ವರಾಜ್ ಎದುರು ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಕಣಕ್ಕಿಳಿಸಿದೆ. ಶಾಸಕ ವಿನಯ ಕುಮಾರ್ ಸೊರಕೆ ಎದುರು ಮಾಜಿ ಶಾಸಕ ಲಾಲಾಜಿ ಮೆಂಡನ್ ಅವರನ್ನು ಕಣಕ್ಕಿಳಿಸಿದೆ.
ಕಳೆದ ಬಾರಿಯ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ನಲ್ಲಿ ಗುರುತಿಸಿಕೊಂಡಿದ್ದ ಗುರ್ಮೆ ಸುರೇಶ್ ಶೆಟ್ಟಿ ವಿನಯ ಕುಮಾರ್ ಸೊರಕೆ ಅವರಿಗೆ ಟಿಕೆಟ್ ನೀಡಿದ ಬೆನ್ನಲ್ಲೇ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಗೊಂಡಿದ್ದರು.
ಕಾಪು ಕ್ಷೇತ್ರದ ಬಿಜೆಪಿ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿ ಗುರುತಿಸಿಕೊಂಡಿದ್ದ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಈ ಬಾರಿ ಬಿಜೆಪಿಯೂ ನಿರಾಸೆ ಮೂಡಿಸಿದೆ.
ಇನ್ನೊಂದೆಡೆಯಲ್ಲಿ ಚತುರ ಸಂಘಟಕ, ಯುವ ನಾಯಕ ಯಶ್ಪಾಲ್ ಸುವರ್ಣ ಅವರೂ ಕಾಪು ಕ್ಷೇತ್ರದ ಬಿಜೆಪಿ ಆಕಾಂಕ್ಷಿಯಾಗಿದ್ದರು. ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ಯಶ್ಪಾಲ್ ಬೆಂಬಲಿಗರು ಟಿಕೆಟ್ ನೀಡಬೇಕೆಂದು ಭಾರೀ ಪ್ರಚಾರ ನಡೆಸಿದ್ದರು.
ಕಳೆದ ಎರಡು ದಿನಗಳ ಹಿಂದೆ ರಘುಪತಿ ಭಟ್ ಅವರಿಗೆ ಉಡುಪಿಯಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನೀಡಬೇಕೆಂದು ಅವರ ವಯೋವೃದ್ದ ತಾಯಿ ಸೇರಿದಂತೆ ನೂರಾರು ಅಭಿಮಾನಿಗಳು ಉಡುಪಿಯ ಶ್ರೀಕೃಷ್ಣ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು.
ಮಂಗಳೂರಿಗೆ ಸಂತೋಷ್ ಕುಮಾರ್ ರೈ, ಮಂಗಳೂರು ಉತ್ತರಕ್ಕೆ ಡಾ. ಭರತ್ ಶೆಟ್ಟಿ, ಮಂಗಳೂರು ದಕ್ಷಿಣ ಕ್ಷೇತ್ರಕ್ಕೆ ವೇದವ್ಯಾಸ ಕಾಮತ್ ಅವರನ್ನು ಅಭ್ಯರ್ಥಿ ಎಂದು ಘೋಷಿಸಲಾಗಿದೆ.
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…