ಕಾಪು : ಕಾಪು ವಿಧಾನಸಭಾ ಕ್ಷೇತ್ರದಲ್ಲಿ ರಾಷ್ಟೀಯ ಪಕ್ಷಗಳ ಹವಾ ಜೋರಾಗುತ್ತಿದ್ದಂತೆ, ಪ್ರಾದೇಶಿಕ ಪಕ್ಷ ಜಾತ್ಯಾತೀತ ಜನತದಳದ ಮತಬೇಟೆಯು ಜೋರಾಗಿಯೇ ಶುರುವಾಗಿದೆ. ಕುಂದಾಪುರ ಮೂಲದ ಮನ್ಸೂರ್ ಇಬ್ರಾಹಿಂ ಕಾಪುವಿನ ಜೆಡಿಎಸ್ ಅಭ್ಯರ್ಥಿಯಾಗಿದ್ದು ನಾಮ ಪತ್ರ ಸಲ್ಲಿಸಿದ ದಿನದಿಂದಲೇ ಪ್ರಚಾರ ಕಾರ್ಯ ಶುರುಮಾಡಿದ್ದಾರೆ. ಕಾಪುವಿನಲ್ಲಿ ಮತಯಾಚನೇ ನಡೆಸಿ ಮಾಧ್ಯಮದವರೊಂದಿಗೆ ಮಾತನಾಡಿ” ರಾಜ್ಯದಲ್ಲಿ ನಡೆಯುತ್ತಿರುವ ಅನಚಾರ ಜಾಸ್ತಿಯಾಗುತ್ತಿದೆ ಇದರಿಂದ ಜನ ಬೇಸತ್ತು ಕುಮಾರ ಸ್ವಾಮಿಯ ಸರ್ಕಾರವನ್ನ ಬಯಸುತ್ತಿದ್ದಾರೆ ಹಾಗಾಗಿ ಈ ಸಲ ಮಾತ್ರ ರಾಜ್ಯದಲ್ಲಿ ಸೇರಿದಂತೆ ಕಾಪುವಿನಲ್ಲಿ ಕೂಡ ಜೆಡಿಎಸ್ ತನ್ನ ಗದ್ದುಗೆಯನ್ನ ಗಟ್ಟಿ ಮಾಡಿಕೊಳ್ಳಲಿದೆ ಎಂದರು. ಕಾಪುವಿನ ಅಭಿವೃದ್ದಿ ಕೇವಲ ಜಾಹಿರಾತು ಮತ್ತು ಪ್ರಚಾರದಲ್ಲಿ ಸೀಮಿತವಾಗಿದೆ, ಸೊರಕೆಯ ಯಾವುದೇ ಕಾಮಗಾರಿ ನಡೆದರೂ ಕೂಡ ಅದು ಕಮಿಷನ್ ಆಧಾರವಾಗಿರುತ್ತೆ ಬಿಟ್ರೇ ಜನರ ಉಪಯೋಗಕ್ಕೆ ಖಂಡಿತ ಅಲ್ಲ, ಪ್ರವಾಸೋದ್ಯಮ ಕೇಂದ್ರವಾಗಿರುವ ಕಾಪುವಿನ ಅಭಿವೃದ್ದಿ ಏನೆಂದು ಜನ ತಿರ್ಮಾನಿಸಲಿದ್ದಾರೆ ಹಾಗೂ ಸರಿಯಾದ ಹೆಜಮಾಡಿ ಬಂದರು ನಿರ್ಮಾಣವಾಗಿಲ್ಲ, ಯಾವುದೇ ಒಬ್ಬನಿಗೆ ಒಂದು ಉದ್ಯೋಗ ಸೃಷ್ಟಿಸುವ ಕಾರ್ಯ ಸೊರಕೆ ಮಾಡಿಲ್ಲ. ಕೇವಲ ರಸ್ತೆ ಮಾಡಿದರೇ ಅದು ಅಭಿವೃದ್ದಿ ಎನ್ನಲು ಸಾದ್ಯವೇ ಎಂದು ಪ್ರಶ್ನಿಸಿದರು. ಕಾಪು ಕ್ಷೇತ್ರದ ಕಟಪಾಡಿ, ಸುಭಾಸ್ ನಗರ, ಅಚ್ಚಡ ಸೇರಿದಂತೆ ವಿವಿಧಡೆಯಲ್ಲಿ ಮತ ಪ್ರಚಾರ ಆರಂಭಿಸಿ ಸುಮಾರು ನೂರಕ್ಕೂ ಅಧಿಕ ಬಿಜೆಪಿ ಕಾಂಗ್ರೇಸ್ ಕಾರ್ಯಕರ್ತರನ್ನ ಜೆಡಿಎಸ್ ಗೆ ಸೇರ್ಪಡೆಗೊಳಿಸಲಾಯಿತು.
ಈ ಸಂಧರ್ಭ ಜಿಲ್ಲಾಧ್ಯಕ್ಷ ಯೋಗಿಶ್ ಶೆಟ್ಟಿ, ಕಾರ್ಯಧ್ಯಕ್ಷ ವಾಸುದೇವ್ ರಾವ್, ಶಾಲಿನಿ ಶೆಟ್ಟಿ,ಉದಯ್ ಹೆಗ್ಡೆ, ಹುಸೇನ್ ಹೈಕಾಡಿ, ಮಕ್ದ್ ಮ್ ಇಸ್ಮಾಯಿಲ್ ಸೇರಿದಂತೆ ಹಲವಾರು ಮುಖಂಡರು ಜೊತೆಗಿದ್ದರು.
ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ.…
ಎಲ್ಲಾ ಗ್ಯಾರಂಟಿ ಯೋಜನೆಗಳು ಎಂದಿನಂತೆ ಮುಂದುವರಿಯಲಿವೆ : ಸಿಎಂ ಡಿಕೆಶಿ ಸ್ಪಷ್ಟನೆ ಬೆಂಗಳೂರು :ಫಲಾನುಭವಿಗಳು ಯಾವುದೇ ಆತಂಕಪಡಬೇಕಾದ ಅಗತ್ಯವಿಲ್ಲ, ಎಲ್ಲಾ…
ಉಡುಪಿ: ಪೆರ್ಡೂರು ಸಂಜೀವಿನಿ ಒಕ್ಕೂಟಕ್ಕೆ ಲಕ್ಷಾಂತರ ರೂ.ವಂಚನೆ ; ದೂರು ದಾಖಲು ಹಿರಿಯಡ್ಕ: ಪೆರ್ಡೂರು ಪದ್ಮ ಕಮಲ ಸಂಜೀವಿನಿ ಗ್ರಾಮ…
ಹಿರಿಯ ಲೇಖಕಿ ಇಂದಿರಾ ಲಂಕೇಶ್ ನಿಧನ ಬೆಂಗಳೂರು: ಹಿರಿಯ ಲೇಖಕಿ ಹಾಗೂ ಖ್ಯಾತ ಪತ್ರಕರ್ತ ದಿವಂಗತ ಪಿ. ಲಂಕೇಶ್ ಅವರ…
ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ಚಾಲನೆ ತಿರುವನಂತಪುರಂ: ಮಹಿಳೆಯರು ಮತ್ತು ತೃತೀಯಲಿಂಗಿಗಳಿಗೆ ಉಚಿತ…
ಮಣಿಪಾಲ: ಚಲಿಸುತ್ತಿದ್ದ ಶಾಲಾ ಬಸ್ಸಿನ ಚಾಲಕನಿಗೆ ಹಠಾತ್ ಹೃದಯಾಘಾತ ; ತಪ್ಪಿದ ಭಾರಿ ಅನಾಹುತ ಮಣಿಪಾಲ: ಚಲಿಸುತ್ತಿದ್ದ ಶಾಲಾ ಬಸ್ಸಿನ…