Featured

12 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ ಹೇಮಾ ಮಾಲಿನಿ- ಧರ್ಮೇಂದ್ರ ಪುತ್ರಿ ಇಶಾ ಡಿಯೋಲ್ – Vishwanews24

12 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ ಹೇಮಾ ಮಾಲಿನಿ- ಧರ್ಮೇಂದ್ರ ಪುತ್ರಿ ಇಶಾ ಡಿಯೋಲ್

ಮುಂಬೈ(Vishwanews24): ಹಿರಿಯ ನಟರಾದ ಧರ್ಮೇಂದ್ರ ಮತ್ತು ಹೇಮಾ ಮಾಲಿನಿ ಅವರ ಪುತ್ರಿ ನಟಿ ಇಶಾ ಡಿಯೋಲ್ ಮಂಗಳವಾರ ತಮ್ಮ ಪತಿ ಭರತ್ ತಖ್ತಾನಿಗೆ ಡೈವೋರ್ಸ್ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಇಬ್ಬರು ಪರಸ್ಪರ ಮತ್ತು ಸೌಹಾರ್ದಯುತವಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.

2012ರಲ್ಲಿ ಇಶಾ ಡಿಯೋಲ್ ಹಾಗೂ ಭರತ್ ತಖ್ತಾನಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು. 2017ರಲ್ಲಿ ಮಗಳು ರಾಧ್ಯಗೆ ಇಶಾ ಡಿಯೋಲ್‌ ಜನ್ಮ ನೀಡಿದರು. 2019ರಲ್ಲಿ ಎರಡನೇ ಮಗುವನ್ನ ಇಶಾ ಡಿಯೋಲ್ ಹಾಗೂ ಭರತ್ ತಖ್ತಾನಿ ಬರಮಾಡಿಕೊಂಡಿದ್ದರು. ಇದೀಗ 12 ವರ್ಷಗಳ ದಾಂಪತ್ಯ ಜೀವನಕ್ಕೆ ಇಶಾ ಡಿಯೋಲ್ ಮತ್ತು ಭರತ್ ತಖ್ತಾನಿ ಅಂತ್ಯ ಹಾಡಿದ್ದಾರೆ.

ವಿಚ್ಛೇದನದ ಬಗ್ಗೆ ಇಶಾ ಡಿಯೋಲ್ ಮತ್ತು ಭರತ್ ತಖ್ತಾನಿ ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ ಎಂದು ದೆಹಲಿ ಟೈಮ್ಸ್ ವರದಿ ಮಾಡಿದೆ. ‘’ನಾವು ಪರಸ್ಪರ ಒಪ್ಪಿಗೆಯ ಮೇರೆಗೆ ಸೌಹಾರ್ದಯುತವಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ನಮ್ಮ ಜೀವನ ಬದಲಾಗುತ್ತಿರುವ ಈ ಸಮಯದಲ್ಲಿ ನಮ್ಮ ಇಬ್ಬರು ಮಕ್ಕಳ ಉತ್ತಮ ಹಿತಾಸಕ್ತಿ ಮತ್ತು ಯೋಗಕ್ಷೇಮ ನಮಗೆ ಅತ್ಯಂತ ಮಹತ್ವದ್ದಾಗಿದೆ. ನಮ್ಮ ಗೌಪ್ಯತೆಯನ್ನ ಗೌರವಿಸುವುದನ್ನು ನಾವು ಪ್ರಶಂಸಿಸುತ್ತೇವೆ’’ ಎಂದು ಇಶಾ ಡಿಯೋಲ್ ಹಾಗೂ ಭರತ್ ತಖ್ತಾನಿ ಜಂಟಿ ಹೇಳಿಕೆ ನೀಡಿದ್ಧಾರೆ ಎಂದು ವರದಿಯಾಗಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

8 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago