ಉಡುಪಿ

ಮರಳು ಸಮಸ್ಯೆಯ ಉರುಳು ತೆಗೆಯಲು ಶತಪ್ರಯತ್ನ: ಶಾಸಕ ರಘುಪತಿಭಟ್

ಉಡುಪಿ: ಉದ್ಯಮಿ ಬಿ.ಆರ್‌ ಶೆಟ್ಟಿ ಅವರು 200 ಹಾಸಿಗೆಯ ಆಸ್ಪತ್ರೆಯನ್ನು ಸರ್ಕಾರಕ್ಕೆ ಕೊಡದ ಹೊರತು 400 ಹಾಸಿಗೆಯ ಖಾಸಗಿ ಆಸ್ಪತ್ರೆ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಶಾಸಕ ರಘುಪತಿ ಭಟ್‌ ತಿಳಿಸಿದರು. ಜಿಲ್ಲೆಯ ವೈದ್ಯಾಧಿಕಾರಿ ನೇತೃತ್ವದಲ್ಲಿಯೇ ಈಗಿರುವ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ನಡೆಯಬೇಕು. ಈಗ ಇರುವ ವೈದ್ಯರು ಹಾಗೂ ಸಿಬ್ಬಂದಿಯೇ ಮುಂದುವರೆಯಬೇಕು. ನಗರದ ಹೃದಯಭಾಗದಲ್ಲಿರುವ ದುಬಾರಿ ಬೆಲೆಯ ಸರ್ಕಾರಿ ಜಾಗವನ್ನು ಬಿ.ಆರ್. ಶೆಟ್ಟಿ ಅವರಿಗೆ ನೀಡಲಾಗಿದೆ. ಆದ್ದರಿಂದ ಸರ್ಕಾರಿ ಆಸ್ಪತ್ರೆ ನಡೆಸಲು ಬೇಕಾಗಿರುವ ಹೆಚ್ಚುವರಿ ಸಿಬ್ಬಂದಿ ಹಾಗೂ ಇತರೆ ಸೌಲಭ್ಯವನ್ನು ಒದಗಿಸಬೇಕು. ಅದರ ಉಸ್ತುವಾರಿಯನ್ನು ಜಿಲ್ಲಾ ವೈದ್ಯಧಿಕಾರಿ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಹಿಂದೆ ಸರ್ಕಾರ ಹಾಗೂ ಬಿ.ಆರ್‌ ಶೆಟ್ಟಿ ಅವರು ಮಾಡಿಕೊಂಡ ಒಪ್ಪಂದದಲ್ಲಿ ಬದಲಾವಣೆ ಮಾಡಬೇಕು. ಜಿಲ್ಲಾ ವೈದ್ಯಾಧಿಕಾರಿ ನೇತೃತ್ವದಲ್ಲಿ ಒಂದು ಸಮಿತಿ ರಚನೆಯಾಗಬೇಕು. ಅದರಲ್ಲಿ ಜನಪ್ರತಿನಿಧಿಯೂ ಇರಬೇಕು. ಹಾಜಿ ಅಬ್ದುಲ್ಲಾ ಅವರ ಹೆರಿನಲ್ಲಿಯೇ ಜನರಿಗೆ ಸೇವೆ ನೀಡಬೇಕು. ಖಾಸಗಿ 400 ಹಾಸಿಗೆ ಆಸ್ಪತ್ರೆಗೆ ಯಾವ ಹೆಸರನ್ನು ಬೇಕಾದರೂ ಇಟ್ಟುಕೊಳ್ಳಿ. ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದರೆ ಅದರ ಆದರ ಕತೆಯೇ ಬೇರೆಯಾಗಿತ್ತು. ಕ್ಷೇತ್ರದ ಶಾಸಕನಾಗಿ ಆಸ್ಪತ್ರೆ ಉಳಿವಿಗಾಗಿ ಏನೆಲ್ಲಾ ಹೋರಾಟ ಮಾಡಲು ಸಾಧ್ಯವೋ ಅದನ್ನು ಮಾಡುತ್ತೇನೆ ಎಂದರು.
ಜಿಲ್ಲೆಯಲ್ಲಿ ಮರಳಿನ ಸಮಸ್ಯೆ ಇರುವುದರಿಂದ ಅಭಿವೃದ್ಧಿಗೆ ಅಡಚಣೆಯಾಗಿದೆ. ಚುನಾವಣೆಯ ನೀತಿ ಸಂಹಿತೆ ಜೂನ್‌ 15ವರೆಗೆ ಇರುವುದರಿಂದ ಅಧಿಕಾರಿಗಳ ಜೊತೆ ಸಭೆ ನಡೆಸಲು ಸಾಧ್ಯವಾಗುತ್ತಿಲ್ಲ. ಜೂನ್‌ನಿಂದ ಅಗಸ್ಟ್‌ ವರೆಗೆ ಜಿಲ್ಲೆಯಲ್ಲಿ ಮರಳುಗಾರಿಕೆ ನಿಷೇಧವಿದೆ. ನಂತರ ದಿನದಲ್ಲಿ ಮರಳುಗಾರಿಗೆಯ ನೀತಿಯನ್ನು ಸರಳಗೊಳಿಸಲಾಗುತ್ತದೆ. ಅವೈಜ್ಞಾನಿಕವಾಗಿ ದೋಣಿಗೆ ಆಳವಡಿಸಲಾದ ಜಿಪಿಎಸ್‌ ತೆಗೆದು ಹಾಕುವ ಕುರಿತು ಚಿಂತನೆ ನಡೆಸಲಾಗುತ್ತದೆ ಎಂದು ಹೇಳಿದರು.
Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

8 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

9 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

9 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

12 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

12 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

12 hours ago