ಉಡುಪಿ

ಮರಳು ಸಮಸ್ಯೆಯ ಉರುಳು ತೆಗೆಯಲು ಶತಪ್ರಯತ್ನ: ಶಾಸಕ ರಘುಪತಿಭಟ್

ಉಡುಪಿ: ಉದ್ಯಮಿ ಬಿ.ಆರ್‌ ಶೆಟ್ಟಿ ಅವರು 200 ಹಾಸಿಗೆಯ ಆಸ್ಪತ್ರೆಯನ್ನು ಸರ್ಕಾರಕ್ಕೆ ಕೊಡದ ಹೊರತು 400 ಹಾಸಿಗೆಯ ಖಾಸಗಿ ಆಸ್ಪತ್ರೆ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಶಾಸಕ ರಘುಪತಿ ಭಟ್‌ ತಿಳಿಸಿದರು. ಜಿಲ್ಲೆಯ ವೈದ್ಯಾಧಿಕಾರಿ ನೇತೃತ್ವದಲ್ಲಿಯೇ ಈಗಿರುವ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ನಡೆಯಬೇಕು. ಈಗ ಇರುವ ವೈದ್ಯರು ಹಾಗೂ ಸಿಬ್ಬಂದಿಯೇ ಮುಂದುವರೆಯಬೇಕು. ನಗರದ ಹೃದಯಭಾಗದಲ್ಲಿರುವ ದುಬಾರಿ ಬೆಲೆಯ ಸರ್ಕಾರಿ ಜಾಗವನ್ನು ಬಿ.ಆರ್. ಶೆಟ್ಟಿ ಅವರಿಗೆ ನೀಡಲಾಗಿದೆ. ಆದ್ದರಿಂದ ಸರ್ಕಾರಿ ಆಸ್ಪತ್ರೆ ನಡೆಸಲು ಬೇಕಾಗಿರುವ ಹೆಚ್ಚುವರಿ ಸಿಬ್ಬಂದಿ ಹಾಗೂ ಇತರೆ ಸೌಲಭ್ಯವನ್ನು ಒದಗಿಸಬೇಕು. ಅದರ ಉಸ್ತುವಾರಿಯನ್ನು ಜಿಲ್ಲಾ ವೈದ್ಯಧಿಕಾರಿ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಹಿಂದೆ ಸರ್ಕಾರ ಹಾಗೂ ಬಿ.ಆರ್‌ ಶೆಟ್ಟಿ ಅವರು ಮಾಡಿಕೊಂಡ ಒಪ್ಪಂದದಲ್ಲಿ ಬದಲಾವಣೆ ಮಾಡಬೇಕು. ಜಿಲ್ಲಾ ವೈದ್ಯಾಧಿಕಾರಿ ನೇತೃತ್ವದಲ್ಲಿ ಒಂದು ಸಮಿತಿ ರಚನೆಯಾಗಬೇಕು. ಅದರಲ್ಲಿ ಜನಪ್ರತಿನಿಧಿಯೂ ಇರಬೇಕು. ಹಾಜಿ ಅಬ್ದುಲ್ಲಾ ಅವರ ಹೆರಿನಲ್ಲಿಯೇ ಜನರಿಗೆ ಸೇವೆ ನೀಡಬೇಕು. ಖಾಸಗಿ 400 ಹಾಸಿಗೆ ಆಸ್ಪತ್ರೆಗೆ ಯಾವ ಹೆಸರನ್ನು ಬೇಕಾದರೂ ಇಟ್ಟುಕೊಳ್ಳಿ. ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದರೆ ಅದರ ಆದರ ಕತೆಯೇ ಬೇರೆಯಾಗಿತ್ತು. ಕ್ಷೇತ್ರದ ಶಾಸಕನಾಗಿ ಆಸ್ಪತ್ರೆ ಉಳಿವಿಗಾಗಿ ಏನೆಲ್ಲಾ ಹೋರಾಟ ಮಾಡಲು ಸಾಧ್ಯವೋ ಅದನ್ನು ಮಾಡುತ್ತೇನೆ ಎಂದರು.
ಜಿಲ್ಲೆಯಲ್ಲಿ ಮರಳಿನ ಸಮಸ್ಯೆ ಇರುವುದರಿಂದ ಅಭಿವೃದ್ಧಿಗೆ ಅಡಚಣೆಯಾಗಿದೆ. ಚುನಾವಣೆಯ ನೀತಿ ಸಂಹಿತೆ ಜೂನ್‌ 15ವರೆಗೆ ಇರುವುದರಿಂದ ಅಧಿಕಾರಿಗಳ ಜೊತೆ ಸಭೆ ನಡೆಸಲು ಸಾಧ್ಯವಾಗುತ್ತಿಲ್ಲ. ಜೂನ್‌ನಿಂದ ಅಗಸ್ಟ್‌ ವರೆಗೆ ಜಿಲ್ಲೆಯಲ್ಲಿ ಮರಳುಗಾರಿಕೆ ನಿಷೇಧವಿದೆ. ನಂತರ ದಿನದಲ್ಲಿ ಮರಳುಗಾರಿಗೆಯ ನೀತಿಯನ್ನು ಸರಳಗೊಳಿಸಲಾಗುತ್ತದೆ. ಅವೈಜ್ಞಾನಿಕವಾಗಿ ದೋಣಿಗೆ ಆಳವಡಿಸಲಾದ ಜಿಪಿಎಸ್‌ ತೆಗೆದು ಹಾಕುವ ಕುರಿತು ಚಿಂತನೆ ನಡೆಸಲಾಗುತ್ತದೆ ಎಂದು ಹೇಳಿದರು.
Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

5 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

9 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

10 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

10 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

11 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

11 hours ago