Featured

1250 ಮಂದಿಗೆ ಆಟಿ ಕಷಾಯ ವಿತರಿಸಿದ ಮೂಳೂರು ಹಿಂದೂ ರಕ್ಷಾ ವೆಲ್‍ಫೇರ್ ಟ್ರಸ್ಟ್‍ನ ಸದಸ್ಯರು.

1250 ಮಂದಿಗೆ ಆಟಿ ಕಷಾಯ ವಿತರಿಸಿದ ಮೂಳೂರು ಹಿಂದೂ ರಕ್ಷಾ ವೆಲ್‍ಫೇರ್ ಟ್ರಸ್ಟ್‍ನ ಸದಸ್ಯರು.

ಕಾಪು: ಮೂಳೂರು ಹಿಂದೂ ರಕ್ಷಾ ವೆಲ್‍ಫೇರ್ ಟ್ರಸ್ಟ್ ವತಿಯಿಂದ ಆಟಿ ಅಮಾವಾಸ್ಯೆಯ ಪ್ರಯುಕ್ತ ಹಾಲೇಯ ಮರದ ತೊಗಟೆಯ ಕಷಾಯವನ್ನು ಸಿದ್ಧಪಡಿಸಿ ಉಚಿತವಾಗಿ ಸುಮಾರು 1250 ಅಧಿಕ ಮಂದಿ ಸಾರ್ವಜನಿಕರಿಗೆ ವಿತರಿಸಲಾಯಿತು.
ಕಾಪು ಪುರಸಭಾ ವ್ಯಾಪ್ತಿಯ ಮೂಳೂರು ಪಡುವಿನ ಹಳೆ ಭಜನಾ ಮಂದಿರ ಮತ್ತು ಮೂಳೂರು ಮಹಾಲಕ್ಷ್ಮೀ ನಗರ ಸೇರಿದಂತೆ ಎರಡು ಭಾಗದಲ್ಲಿ ಬೆಳಿಗ್ಗೆ 6 ಗಂಟೆಯಿಂದ ಈ ಕಷಾಯ ವಿತರಣೆಯನ್ನು ಆರಂಭಿಸಲಾಗಿತ್ತು.

ಸರ್ವ ಧರ್ಮಿಯರು ಸಹಿತ ಸಾವಿರಕ್ಕೂ ಅಧಿಕ ಮಂದಿ ದೂರದ ಊರುಗಳಿಂದಲೂ ಆಗಮಿಸಿ ಆಟಿ ಅಮಾವಾಸ್ಯೆಯ ಪ್ರಯುಕ್ತ ಹಾಲೆಮರದ ತೊಗಟೆಯಿಂದ ತಯಾರಿಸಿದ ಮದ್ದನ್ನು ಪಡೆದುಕೊಂಡರು.

ಮಾಧ್ಯಮದವರೊಂದಿಗೆ ಮಾತಾಡಿದ ಟ್ರಸ್ಟ್‍ನ ಪ್ರಧಾನ ಕಾರ್ಯದರ್ಶಿ ಧೀರೇಶ್ ಡಿ.ಪಿ ಆರೋಗ್ಯದ ದೃಷ್ಟಿಯಿಂದ ಆಟಿ ಕಷಾಯಕ್ಕೆ ವೈಜ್ಞಾನಿಕ ಮತ್ತು ಆಯುರ್ವೇದ ಶಾಸ್ತ್ರದಲ್ಲಿ ಆಟಿ ಕಷಾಯಕ್ಕೆ ವಿಶೇಷವಾದ ಮಹತ್ವವಿದೆ. ಹಳ್ಳಿಗಾಡಿನ ಪ್ರದೇಶಗಳು ನಗರ ಪ್ರದೇಶವಾಗಿ ಬದಲಾಗುತ್ತಿದೆ ಮಾತ್ರವಲ್ಲದೆ ಅವಿಭಕ್ತ ಕುಟುಂಬಗಳು ವಿಭಕ್ತ ಕುಟುಂಬಗಳಾಗಿ ವಿಂಗಡನೆಯಾಗಿ ಆಟಿ ಕಷಾಯ ತಯಾರಿಸುವ ಮಾಹಿತಿಯೂ ಕೆಲವರಿಗಿಲ್ಲ ಮತ್ತು ಹಾಲೆ ಮರದ ಪರಿಚಯವೂ ಈಗಿನ ಯುವಪೀಳಿಗೆಗೆ ಇಲ್ಲ, ಆದರೆ ಆಟಿ ಕಷಾಯ ಕುಡಿಯಬೇಕೆಂಬ ಹಂಬಲ ಇದೆ ಆ ದೃಷ್ಟಿಯಿಂದ ತುಳುನಾಡಿನ ನಾಡು ನುಡಿ ಸಂಸ್ಕøತಿ ಉಳಿಸಿ ಜನರ ಆರೋಗ್ಯದ ದೃಷ್ಟಿಯಿಂದ ಸತತ ನಾಲ್ಕು ವರ್ಷದಿಂದ ಈ ಸೇವೆಯನ್ನ ಹಿಂದೂ ರಕ್ಷಾ ವೆಲ್ಫೇರ್ ಟ್ರಸ್ಟ್ ವತಿಯಿಂದ ಮಾಡಿಕೊಂಡು ಬರುತ್ತಿದ್ದೇವೆ ಇದರಿಂದ ನೂರಾರು ಕುಟುಂಬಗಳಿಗೆ ಇದು ಸಹಕಾರಿಯಾಗಿದೆ ಎಂದರು.

ದೂರದ ಪಡುಬಿದ್ರೆ, ಕಾಪು ಏರ್ಮಾಳು, ಕೈಪುಂಜಾಲು ಭಾಗದಿಂದ ಕೂಡ ಯಾವುದೇ ಮತಧರ್ಮಗಳ ಭೇದವಿಲ್ಲದೆ ಬಂದು ಕಷಾಯವನ್ನು ಪಡೆದುಕೊಂಡರು.ಕಷಾಯವನ್ನು ಓಂ ಕೆಟರಸ್ ಮಾಲಕ ಸಂಜೀವ ಆರ್ ಅಮೀನ್ ಅವರ ಸಹಕಾರದಿಂದ ಸಿದ್ದಪಡಿಸಲಾಗಿದೆ.

ಈ ಸಂದರ್ಭ ಟ್ರಸ್ಟ್‍ನ ಅಧ್ಯಕ್ಷ ಚಂದ್ರಕಾಂತ್ ಕೆ ಮೆಂಡನ್.ಪ್ರದೀಪ್ ಎಸ್ ಪುತ್ರನ್,ಅಶೋಕ್ ಪುತ್ರನ್.,ದಿನೇಶ್ ಪಾಣಾರ, ಅರುಣ್ ಕುಲಾಲ್,ಮಧುಕಿರಣ್,ಪ್ರತೀಕ್ ಸುವರ್ಣ ಟ್ರಸ್ಟ್ ಸದಸ್ಯರು ಕಷಾಯ ತಯಾರಿ ಹಂಚಿಕೆಯ ಕಾರ್ಯದಲ್ಲಿ ಸಹಕರಿಸಿದರು.

ಬ್ಯೂರೋ ರಿಪೋರ್ಟ್
ವಿಶ್ವನ್ಯೂಸ್24

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

22 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago