Featured

13 ವರ್ಷಗಳ ದಾಂಪತ್ಯ ಜೀವನ ಅಂತ್ಯ – ಪತ್ನಿ ಶಾಲಿನಿ ತಲ್ವಾರ್ ಗೆ ವಿಚ್ಛೇದನ ನೀಡಿದ ಬಾಲಿವುಡ್ ಖ್ಯಾತ ಗಾಯಕ  ಹನಿ ಸಿಂಗ್ – vishwanews24

13 ವರ್ಷಗಳ ದಾಂಪತ್ಯ ಜೀವನ ಅಂತ್ಯ – ಪತ್ನಿ ಶಾಲಿನಿ ತಲ್ವಾರ್ ಗೆ ವಿಚ್ಛೇದನ ನೀಡಿದ ಬಾಲಿವುಡ್ ಖ್ಯಾತ ಗಾಯಕ  ಹನಿ ಸಿಂಗ್

ಬಾಲಿವುಡ್ ಖ್ಯಾತ ಗಾಯಕ  ಹನಿ ಸಿಂಗ್ ತಮ್ಮ ಹದಿಮೂರು ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯವಾಡಿದ್ದಾರೆ. ಪತ್ನಿ ಶಾಲಿನಿ ತಲ್ವಾರ್ ಮತ್ತು ಹನಿ ಸಿಂಗ್  ಅಧಿಕೃತವಾಗಿ ಬೇರೆಯಾಗಿದ್ದಾರೆ. ನಿನ್ನೆ ದೆಹಲಿ ಫ್ಯಾಮಿಲಿ ಕೋರ್ಟ್ ಈ ಜೋಡಿಗೆ ವಿಚ್ಛೇದನ ನೀಡಿದೆ. ಹನಿ ಸಿಂಗ್ ಮತ್ತು ಶಾಲಿನಿ 2011ರ ಜನವರಿಯಲ್ಲಿ ಹೊಸ ಜೀವನಕ್ಕೆ ಕಾಲಿಟ್ಟಿದ್ದರು.

ಪಂಜಾಬಿ ಖ್ಯಾತ ಗಾಯಕ, ಬಾಲಿವುಡ್ ನಲ್ಲೂ ತಮ್ಮದೇ ಆದ ಛಾಪು ಮೂಡಿಸಿರುವ ಹನಿ ಸಿಂಗ್  ಕೊನೆಗೂ ತಮ್ಮ ಪತ್ನಿ ಶಾಲಿನಿ ತಲ್ವಾರ್ ಅವರಿಗೆ ವಿಚ್ಛೇದನ ನೀಡಿದ್ದಾರೆ. ಕಳೆದ ವರ್ಷವಷ್ಟೇ ಹನಿ ಸಿಂಗ್ ಮೇಲೆ ಅವರ ಪತ್ನಿ ದೈಹಿಕ ಹಿಂಸಾಚಾರದ ಆರೋಪ ಮಾಡಿದ್ದರು. ಪತಿಯಿಂದ ತಮಗೆ ತುಂಬಾ ಹಿಂಸೆ ಆಗುತ್ತಿದೆ ಎಂದು ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಇದರ ಬೆನ್ನಲ್ಲೆ ಹನಿ ಸಿಂಗ್ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು.

ದೆಹಲಿ (Delhi) ಕೋರ್ಟ್ ನಲ್ಲಿ ಡಿವೋರ್ಸ್ ಗೆ ಅರ್ಜಿ ಸಲ್ಲಿಸಿದ್ದ ಹನಿ ಸಿಂಗ್ ಮತ್ತು ಅವರ ಪತ್ನಿ ಶಾಲಿನಿ (Shalini)ಯು ನ್ಯಾಯಾಧೀಶರ ಎದುರು ಸೆಟಲ್ ಮೆಂಟ್ ಮಾಡಿಕೊಂಡು, ಪತ್ನಿಗೆ ಜೀವನಾಂಶವಾಗಿ ಒಂದು ಕೋಟಿ ರೂಪಾಯಿ ನೀಡಿದ್ದಾರೆ. ಅದು ಚೆಕ್ ಮೂಲಕ ನೀಡಿದ್ದಾರೆ. 2001ರಲ್ಲಿ ಈ ಜೋಡಿ ವಿವಾಹವಾಗಿದ್ದು, ಆ ನಂತರ ಮನಸ್ತಾಪಗಳು ಬಂದಿದ್ದವು. ಕಳೆದ ವರ್ಷವಂತೂ ಇಬ್ಬರೂ ಸೋಷಿಯಲ್ ಮೀಡಿಯಾದಲ್ಲಿ ಒಬ್ಬರ ಮೇಲೆ ಮತ್ತೊಬ್ಬರು ಆರೋಪ ಮಾಡಿದ್ದರು.

ತಮ್ಮ ಮೇಲೆ ಪತಿ ದೈಹಿಕವಾಗಿ ಹಿಂಸೆ ಮಾಡಿದ್ದಾನೆ ಎಂದು ಶಾಲಿನಿ ಬಹಿರಂಗವಾಗಿಯೇ ಸೋಷಿಯಲ್ ಮೀಡಿಯಾದಲ್ಲಿ ಪತ್ರವನ್ನು ಬರೆದಿದ್ದರು. ಹನಿ ಸಿಂಗ್ ಕುಟುಂಬದ ಬಗ್ಗೆಯೂ ಆರೋಪಗಳನ್ನು ಮಾಡಿದ್ದರು. ಆನಂತರ ಹನಿ ಸಿಂಗ್ ಕೂಡ ಮಾಧ್ಯಮಗಳ ಮುಂದೆ ಬಂದು ಎಲ್ಲ ಆರೋಪಗಳನ್ನು ನಿರಾಕರಿಸಿದ್ದರು. ಅಲ್ಲದೇ, ಶಾಲಿನಿಯಿಂದ ದೂರ ಹೋಗುವುದಾಗಿಯೂ ಹೇಳಿಕೊಂಡಿದ್ದರು. ಈ ಮೂಲಕ ಅವರು ಡಿವೋರ್ಸ್ ಗೆ (Divorce) ಅರ್ಜಿ ಸಲ್ಲಿಸಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago