Featured

13 ವರ್ಷಗಳ ದಾಂಪತ್ಯ ಜೀವನ ಅಂತ್ಯ – ಪತ್ನಿ ಶಾಲಿನಿ ತಲ್ವಾರ್ ಗೆ ವಿಚ್ಛೇದನ ನೀಡಿದ ಬಾಲಿವುಡ್ ಖ್ಯಾತ ಗಾಯಕ  ಹನಿ ಸಿಂಗ್ – vishwanews24

13 ವರ್ಷಗಳ ದಾಂಪತ್ಯ ಜೀವನ ಅಂತ್ಯ – ಪತ್ನಿ ಶಾಲಿನಿ ತಲ್ವಾರ್ ಗೆ ವಿಚ್ಛೇದನ ನೀಡಿದ ಬಾಲಿವುಡ್ ಖ್ಯಾತ ಗಾಯಕ  ಹನಿ ಸಿಂಗ್

ಬಾಲಿವುಡ್ ಖ್ಯಾತ ಗಾಯಕ  ಹನಿ ಸಿಂಗ್ ತಮ್ಮ ಹದಿಮೂರು ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯವಾಡಿದ್ದಾರೆ. ಪತ್ನಿ ಶಾಲಿನಿ ತಲ್ವಾರ್ ಮತ್ತು ಹನಿ ಸಿಂಗ್  ಅಧಿಕೃತವಾಗಿ ಬೇರೆಯಾಗಿದ್ದಾರೆ. ನಿನ್ನೆ ದೆಹಲಿ ಫ್ಯಾಮಿಲಿ ಕೋರ್ಟ್ ಈ ಜೋಡಿಗೆ ವಿಚ್ಛೇದನ ನೀಡಿದೆ. ಹನಿ ಸಿಂಗ್ ಮತ್ತು ಶಾಲಿನಿ 2011ರ ಜನವರಿಯಲ್ಲಿ ಹೊಸ ಜೀವನಕ್ಕೆ ಕಾಲಿಟ್ಟಿದ್ದರು.

ಪಂಜಾಬಿ ಖ್ಯಾತ ಗಾಯಕ, ಬಾಲಿವುಡ್ ನಲ್ಲೂ ತಮ್ಮದೇ ಆದ ಛಾಪು ಮೂಡಿಸಿರುವ ಹನಿ ಸಿಂಗ್  ಕೊನೆಗೂ ತಮ್ಮ ಪತ್ನಿ ಶಾಲಿನಿ ತಲ್ವಾರ್ ಅವರಿಗೆ ವಿಚ್ಛೇದನ ನೀಡಿದ್ದಾರೆ. ಕಳೆದ ವರ್ಷವಷ್ಟೇ ಹನಿ ಸಿಂಗ್ ಮೇಲೆ ಅವರ ಪತ್ನಿ ದೈಹಿಕ ಹಿಂಸಾಚಾರದ ಆರೋಪ ಮಾಡಿದ್ದರು. ಪತಿಯಿಂದ ತಮಗೆ ತುಂಬಾ ಹಿಂಸೆ ಆಗುತ್ತಿದೆ ಎಂದು ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಇದರ ಬೆನ್ನಲ್ಲೆ ಹನಿ ಸಿಂಗ್ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು.

ದೆಹಲಿ (Delhi) ಕೋರ್ಟ್ ನಲ್ಲಿ ಡಿವೋರ್ಸ್ ಗೆ ಅರ್ಜಿ ಸಲ್ಲಿಸಿದ್ದ ಹನಿ ಸಿಂಗ್ ಮತ್ತು ಅವರ ಪತ್ನಿ ಶಾಲಿನಿ (Shalini)ಯು ನ್ಯಾಯಾಧೀಶರ ಎದುರು ಸೆಟಲ್ ಮೆಂಟ್ ಮಾಡಿಕೊಂಡು, ಪತ್ನಿಗೆ ಜೀವನಾಂಶವಾಗಿ ಒಂದು ಕೋಟಿ ರೂಪಾಯಿ ನೀಡಿದ್ದಾರೆ. ಅದು ಚೆಕ್ ಮೂಲಕ ನೀಡಿದ್ದಾರೆ. 2001ರಲ್ಲಿ ಈ ಜೋಡಿ ವಿವಾಹವಾಗಿದ್ದು, ಆ ನಂತರ ಮನಸ್ತಾಪಗಳು ಬಂದಿದ್ದವು. ಕಳೆದ ವರ್ಷವಂತೂ ಇಬ್ಬರೂ ಸೋಷಿಯಲ್ ಮೀಡಿಯಾದಲ್ಲಿ ಒಬ್ಬರ ಮೇಲೆ ಮತ್ತೊಬ್ಬರು ಆರೋಪ ಮಾಡಿದ್ದರು.

ತಮ್ಮ ಮೇಲೆ ಪತಿ ದೈಹಿಕವಾಗಿ ಹಿಂಸೆ ಮಾಡಿದ್ದಾನೆ ಎಂದು ಶಾಲಿನಿ ಬಹಿರಂಗವಾಗಿಯೇ ಸೋಷಿಯಲ್ ಮೀಡಿಯಾದಲ್ಲಿ ಪತ್ರವನ್ನು ಬರೆದಿದ್ದರು. ಹನಿ ಸಿಂಗ್ ಕುಟುಂಬದ ಬಗ್ಗೆಯೂ ಆರೋಪಗಳನ್ನು ಮಾಡಿದ್ದರು. ಆನಂತರ ಹನಿ ಸಿಂಗ್ ಕೂಡ ಮಾಧ್ಯಮಗಳ ಮುಂದೆ ಬಂದು ಎಲ್ಲ ಆರೋಪಗಳನ್ನು ನಿರಾಕರಿಸಿದ್ದರು. ಅಲ್ಲದೇ, ಶಾಲಿನಿಯಿಂದ ದೂರ ಹೋಗುವುದಾಗಿಯೂ ಹೇಳಿಕೊಂಡಿದ್ದರು. ಈ ಮೂಲಕ ಅವರು ಡಿವೋರ್ಸ್ ಗೆ (Divorce) ಅರ್ಜಿ ಸಲ್ಲಿಸಿದ್ದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago