Featured

13 ವರ್ಷಗಳ ದಾಂಪತ್ಯ ಜೀವನ ಅಂತ್ಯ – ಪತ್ನಿ ಶಾಲಿನಿ ತಲ್ವಾರ್ ಗೆ ವಿಚ್ಛೇದನ ನೀಡಿದ ಬಾಲಿವುಡ್ ಖ್ಯಾತ ಗಾಯಕ  ಹನಿ ಸಿಂಗ್ – vishwanews24

13 ವರ್ಷಗಳ ದಾಂಪತ್ಯ ಜೀವನ ಅಂತ್ಯ – ಪತ್ನಿ ಶಾಲಿನಿ ತಲ್ವಾರ್ ಗೆ ವಿಚ್ಛೇದನ ನೀಡಿದ ಬಾಲಿವುಡ್ ಖ್ಯಾತ ಗಾಯಕ  ಹನಿ ಸಿಂಗ್

ಬಾಲಿವುಡ್ ಖ್ಯಾತ ಗಾಯಕ  ಹನಿ ಸಿಂಗ್ ತಮ್ಮ ಹದಿಮೂರು ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯವಾಡಿದ್ದಾರೆ. ಪತ್ನಿ ಶಾಲಿನಿ ತಲ್ವಾರ್ ಮತ್ತು ಹನಿ ಸಿಂಗ್  ಅಧಿಕೃತವಾಗಿ ಬೇರೆಯಾಗಿದ್ದಾರೆ. ನಿನ್ನೆ ದೆಹಲಿ ಫ್ಯಾಮಿಲಿ ಕೋರ್ಟ್ ಈ ಜೋಡಿಗೆ ವಿಚ್ಛೇದನ ನೀಡಿದೆ. ಹನಿ ಸಿಂಗ್ ಮತ್ತು ಶಾಲಿನಿ 2011ರ ಜನವರಿಯಲ್ಲಿ ಹೊಸ ಜೀವನಕ್ಕೆ ಕಾಲಿಟ್ಟಿದ್ದರು.

ಪಂಜಾಬಿ ಖ್ಯಾತ ಗಾಯಕ, ಬಾಲಿವುಡ್ ನಲ್ಲೂ ತಮ್ಮದೇ ಆದ ಛಾಪು ಮೂಡಿಸಿರುವ ಹನಿ ಸಿಂಗ್  ಕೊನೆಗೂ ತಮ್ಮ ಪತ್ನಿ ಶಾಲಿನಿ ತಲ್ವಾರ್ ಅವರಿಗೆ ವಿಚ್ಛೇದನ ನೀಡಿದ್ದಾರೆ. ಕಳೆದ ವರ್ಷವಷ್ಟೇ ಹನಿ ಸಿಂಗ್ ಮೇಲೆ ಅವರ ಪತ್ನಿ ದೈಹಿಕ ಹಿಂಸಾಚಾರದ ಆರೋಪ ಮಾಡಿದ್ದರು. ಪತಿಯಿಂದ ತಮಗೆ ತುಂಬಾ ಹಿಂಸೆ ಆಗುತ್ತಿದೆ ಎಂದು ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಇದರ ಬೆನ್ನಲ್ಲೆ ಹನಿ ಸಿಂಗ್ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು.

ದೆಹಲಿ (Delhi) ಕೋರ್ಟ್ ನಲ್ಲಿ ಡಿವೋರ್ಸ್ ಗೆ ಅರ್ಜಿ ಸಲ್ಲಿಸಿದ್ದ ಹನಿ ಸಿಂಗ್ ಮತ್ತು ಅವರ ಪತ್ನಿ ಶಾಲಿನಿ (Shalini)ಯು ನ್ಯಾಯಾಧೀಶರ ಎದುರು ಸೆಟಲ್ ಮೆಂಟ್ ಮಾಡಿಕೊಂಡು, ಪತ್ನಿಗೆ ಜೀವನಾಂಶವಾಗಿ ಒಂದು ಕೋಟಿ ರೂಪಾಯಿ ನೀಡಿದ್ದಾರೆ. ಅದು ಚೆಕ್ ಮೂಲಕ ನೀಡಿದ್ದಾರೆ. 2001ರಲ್ಲಿ ಈ ಜೋಡಿ ವಿವಾಹವಾಗಿದ್ದು, ಆ ನಂತರ ಮನಸ್ತಾಪಗಳು ಬಂದಿದ್ದವು. ಕಳೆದ ವರ್ಷವಂತೂ ಇಬ್ಬರೂ ಸೋಷಿಯಲ್ ಮೀಡಿಯಾದಲ್ಲಿ ಒಬ್ಬರ ಮೇಲೆ ಮತ್ತೊಬ್ಬರು ಆರೋಪ ಮಾಡಿದ್ದರು.

ತಮ್ಮ ಮೇಲೆ ಪತಿ ದೈಹಿಕವಾಗಿ ಹಿಂಸೆ ಮಾಡಿದ್ದಾನೆ ಎಂದು ಶಾಲಿನಿ ಬಹಿರಂಗವಾಗಿಯೇ ಸೋಷಿಯಲ್ ಮೀಡಿಯಾದಲ್ಲಿ ಪತ್ರವನ್ನು ಬರೆದಿದ್ದರು. ಹನಿ ಸಿಂಗ್ ಕುಟುಂಬದ ಬಗ್ಗೆಯೂ ಆರೋಪಗಳನ್ನು ಮಾಡಿದ್ದರು. ಆನಂತರ ಹನಿ ಸಿಂಗ್ ಕೂಡ ಮಾಧ್ಯಮಗಳ ಮುಂದೆ ಬಂದು ಎಲ್ಲ ಆರೋಪಗಳನ್ನು ನಿರಾಕರಿಸಿದ್ದರು. ಅಲ್ಲದೇ, ಶಾಲಿನಿಯಿಂದ ದೂರ ಹೋಗುವುದಾಗಿಯೂ ಹೇಳಿಕೊಂಡಿದ್ದರು. ಈ ಮೂಲಕ ಅವರು ಡಿವೋರ್ಸ್ ಗೆ (Divorce) ಅರ್ಜಿ ಸಲ್ಲಿಸಿದ್ದರು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

3 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

3 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

4 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

4 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

4 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

4 hours ago