13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ – vishwanews24

Featured, ರಾಷ್ಟ್ರ ನ್ಯೂಸ್

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ

ಹೊಸದಿಲ್ಲಿ: 13 ವರ್ಷಗಳಿಂದ ಕೋಮಾಗೆ ಜಾರಿದ್ದ ಪಂಜಾಬ್ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಹರೀಶ್ ರಾಣಾಗೆ ಜೀವ ರಕ್ಷಕ ನೆರವನ್ನು ಹಿಂತೆಗೆದ ಹಿನ್ನೆಲೆ ಏಮ್ಸ್‌ನಲ್ಲಿ ಮಂಗಳವಾರ ಕೊನೆಯುಸಿರೆಳೆದಿದ್ದಾರೆ.

ಸುಪ್ರೀಂ ಕೋರ್ಟ್ ದಯಾಮರಣ ನೀಡಿದ ಹಿನ್ನೆಲೆ ಹರೀಶ್ ರಾಣಾಗೆ ಜೀವ ರಕ್ಷಕ ನೆರವನ್ನು ಹಿಂತೆಗೆದುಕೊಳ್ಳಲಾಗಿತ್ತು. ಇದು ದೇಶದ ಕಾನೂನು ಮತ್ತು ವೈದ್ಯಕೀಯ ಇತಿಹಾಸದಲ್ಲಿ ಮಹತ್ವದ ಪ್ರಕರಣವಾಗಿತ್ತು.

ಇದನ್ನೂ ಓದಿ:

ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು – ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ – vishwanews24

ಪಂಜಾಬ್ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾಗಿದ್ದ ಹರೀಶ್ ರಾಣಾ 2013ರಲ್ಲಿ ನಾಲ್ಕನೆ ಮಹಡಿಯಿಂದ ಕೆಳಗೆ ಬಿದ್ದ ಬಳಿಕ ಅವರ ಮೆದುಳಿಗೆ ಗಂಭೀರವಾಗಿ ಗಾಯವಾಗಿತ್ತು. ಅಲ್ಲಿಂದ ಆತ ಜೀವರಕ್ಷಕ ನೆರವಿನಲ್ಲಿ ಜೀವಿಸಿದ್ದ. ವರ್ಷಗಳು ಕಳೆದಂತೆ ಆತ ಬದುಕುಳಿಯುವ ಆಸೆ ಕಮರಿ ಹೋಗಿತ್ತು. ಹೀಗಾಗಿ, ಆತನ ಕುಟುಂಬದ ಸದಸ್ಯರು ದಯಾಮರಣ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ದಯಾಮರಣಕ್ಕೆ ಅನುಮತಿ ನೀಡಿತ್ತು.

ಇದನ್ನೂ ಓದಿ:

ಡಿವೈಡರ್‌ಗೆ ಕಾರು ಡಿಕ್ಕಿ : ಖ್ಯಾತ ನಟಿ  ಮಾಡೆಲ್ ಹರ್ಷಿಲ್ ಕಾಲಿಯಾ ಸಾವು – vishwanews24

Leave a Reply