ಬಳ್ಳಾರಿ: 130 ಕೋಟಿ ಜನರು ಆಯ್ಕೆ ಮಾಡಿದ ಪ್ರಧಾನ ಮಂತ್ರಿಗಿಂತ ಈತ ದೊಡ್ಡವನಾ? ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಮಾಜಿ ಸಿಎಂ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ.
ಸಿದ್ದರಾಮಯ್ಯ ಅವರ ಹೇಳಿಕೆ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ 60 ವರ್ಷದಲ್ಲಿ ದಲಿತರು ಹಾಗು ಅಲ್ಪ ಸಂಖ್ಯಾತರಿಗೆ ಏನು ಮಾಡಿದೆ ಎನ್ನುವುದನ್ನು ಸಾಬೀತುಪಡಿಸಲಿ ಹಾಗೂ ರಾಜ್ಯದಲ್ಲಿ ಮುಂದಿನ ನಿಮ್ಮ ಸಿಎಂ ಅಭ್ಯರ್ಥಿ ದಲಿತರನ್ನು ಘೋಷಣೆ ಮಾಡಲಿ ಎಂದು ನಾನು ಹಾಕಿದ ಸವಾಲಿಗೆ ಮೊದಲ ಸಿದ್ದರಾಮಯ್ಯ ಅವರು ಉತ್ತರ ನೀಡಲಿ. ಆ ಮೇಲೆ ಸಿಎಂ ಬಸವರಾಜ್ ಬೊಮ್ಮಾಯಿ ನಿಮ್ಮ ಸವಾಲಿಗೆ ಉತ್ತರ ನೀಡಲಿದ್ದಾರೆ ಕಿಡಿಕಾರಿದ್ದಾರೆ.
ಸಿದ್ದರಾಮಯ್ಯ ಅವರು ಅಭಿವೃದ್ಧಿ ಹಾಗೂ ದಲಿತರ ವಿಷಯದಲ್ಲಿ ಬೊಮ್ಮಾಯಿ ಅವರಿಗೆ ಸವಾಲು ಹಾಕಿದ್ದಾರೆ. ಆ ಸವಾಲಿಗೆ ಉತ್ತರ ಪಡೆಯುವ ಮೊದಲು ನಾನು ಹಾಕಿದ ಸವಾಲಿಗೆ ಉತ್ತರ ನೀಡಲಿ ಎಂದು ಸವಾಲು ಹಾಕಿದ್ದಾರೆ. ನಾನು ದೊಡ್ಡವನು ಎಂದು ಸಿದ್ದರಾಮಯ್ಯ ಅವರು ಅನ್ಕೊಳ್ತಾ ಇರೋದು ಅವರ ಭ್ರಮೆ. ಸಿದ್ದರಾಮಯ್ಯ ಅವರು ಏನು ಡೊಡ್ಡ ಮನುಷ್ಯನಾ? 130 ಕೋಟಿ ಜನ ಅಯ್ಕೆ ಮಾಡಿದ ಪ್ರಧಾನಿಮಂತ್ರಿಗಿಂತ ಈತ ದೊಡ್ಡವನಾ? ಎಂದು ಪ್ರಶ್ನೆ ಮಾಡಿದ್ದಾರೆ.
ಆತ ಯಾರ ಬಗ್ಗೆ ಬೇಕಾದ್ರು ಮಾತನಾಡಬಹುದು, ಯಾರನ್ನು ಬೇಕಾದ್ರೂ ಗಿರಾಕಿ ಅನ್ನಬಹುದು. ಲೂಟಿಕೊರ ಅನ್ನಬಹುದಾ? ಸಿದ್ದರಾಮಯ್ಯ ಅವರು ಒಬ್ಬ ಪಳಗಿದ ರಾಜಕಾರಣಿಯಾಗಿ ಹೇಗಿರಬೇಕು? ಮುಂದಿನ ರಾಜಕಾರಣಿಗಳಿಗೆ ಅವರು ಒಂದು ಶಕ್ತಿಯಾಗಬೇಕು. ಅದನ್ನು ಬಿಟ್ಟು ನಾನು ದೊಡ್ಡವನು ಎಂದು ಎಲ್ಲರ ಬಗ್ಗೆ ಲಘುವಾಗಿ ಮಾತಾಡಬಹುದು ಎಂದು ತಿಳಿದುಕೊಂಡಿದ್ದಾರೆ. ಇದು ಅವರ ವಿನಾಶದ ಪರಮಾವಧಿ, ಮುಂದಿನ ಚುನಾವಣೆಯಲ್ಲಿ ಜನರು ಇದಕ್ಕೆ ತಕ್ಕ ಉತ್ತರ ಸಿಗಲಿದೆ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…