ದಕ್ಷಿಣ ಕನ್ನಡ

ಕರಾವಳಿಯಲ್ಲಿ ಮತ್ತೊಮ್ಮೆ ಆರ್ಭಟಿಸುತ್ತಿದ್ದಾನೆ ಮಳೆರಾಯ!

ಉಡುಪಿ/ದಕ್ಷಿಣಕನ್ನಡ: ಒಂದು ವಾರ ವಿರಾಮ ನೀಡಿದ ಬಳಿಕ ಮಳೆರಾಯ ಇಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಆರ್ಭಟ ಮುಂದುವರಿಸಿದ್ದಾನೆ.

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಕಳೆದೊಂದು ವಾರದ ಹಿಂದೆ ಆದ ಅವಾಂತರಗಳಿಂದ ಜನಸಾಮಾನ್ಯರು ಹೊರಬರುವಷ್ಟರಲ್ಲಿ ಮತ್ತೆ ಮಳೆರಾಯನ ಆಗಮನ ಜೋರಾಗಿದೆ. ಜಿಲ್ಲೆಯ ಮಲೆನಾಡು ಭಾಗವಾದ ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಬಾಳೆಹೊನ್ನೂರು, ಕಳಸ ಭಾಗದಲ್ಲಿ ಬೆಳಗ್ಗಿನಿಂದಲೂ ಕಪ್ಪನೆಯ ಕಾರ್ಮೋಡ ಕವಿದು ಮಳೆ ಸುರಿಯುತ್ತಿದೆ. ಇದರ ನಡುವೆಯೂ ರೈತರು ತಮ್ಮ ಜಮೀನುಗಳನ್ನು ಉಳುಮೆ ಮಾಡಿಕೊಂಡು, ಬಿತ್ತನೆ ಕೆಲಸಕ್ಕೆ ಮುಂದಾಗಿದ್ದಾರೆ.

ಚಾರ್ಮಾಡಿ ಘಾಟ್‍ನಲ್ಲೂ ಕೂಡ ಮಳೆ ಬೀಳುತ್ತಿದ್ದು, ದಟ್ಟವಾದ ಮಂಜು ಕವಿದಿರುವ ಹಿನ್ನೆಲೆಯಲ್ಲಿ ವಾಹನ ಸವಾರರು ವಾಹನ ಚಲಾಯಿಸಲು ಪರದಾಡುತ್ತಿದ್ದಾರೆ. ಹೆಚ್ಚಿನ ಮಂಜು ಕವಿದ ಕಾರಣದಿಂದ ಚಾರ್ಮಾಡಿ ಘಾಟ್‍ನಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.

ದಕ್ಷಿಣಕನ್ನಡದಲ್ಲಿ ಬೆಳಗ್ಗಿನಿಂದಲೂ ವರುಣ ತನ್ನ ಆರ್ಭಟ ಮುಂದುರಿಸಿದ್ದಾನೆ. ಹಲವು ರಸ್ತೆಗಳಲ್ಲಿ ನೀರು ಉಕ್ಕಿ ಹರಿಯುತ್ತಿದೆ. ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿರುವುದರಿಂದ ಮತ್ತೆ ನೆರೆಯ ಆತಂಕ ಸೃಷ್ಟಿಯಾಗಿದೆ.

ಉಡುಪಿ ಜಿಲ್ಲೆಯ ಕಾರ್ಕಳ, ಹೆಬ್ರಿ, ಬೈಂದೂರಲ್ಲೂ ಬಿರುಸಿನ ಮಳೆ ಬೀಳುತ್ತಿದೆ. ಭಾರೀ ಮೋಡ ಮುಸುಕಿದ ವಾತಾವರಣವಿದ್ದು, ದಿನವಿಡೀ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಮಳೆ ಜೊತೆ ಗಾಳಿ ಬೀಸುತ್ತಿದೆ. ನಾಡದೋಣಿ ಮೀನುಗಾರರಿಗೆ ಜಿಲ್ಲಾಡಳಿತ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಸಂದೇಶ ರವಾನಿಸಿದೆ.

ಜಿಲ್ಲೆಯ ನದಿ, ಕೆರೆ ತೊರೆಗಳು ತುಂಬಿ ಹರಿಯುತ್ತಿದೆ. ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅರಬ್ಬೀ ಸಮುದ್ರದಲ್ಲಿ ಗಂಟೆಗೆ ಸುಮಾರು 50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದೆ. ಸಮುದ್ರ ತೀರದ ಜನ ಎಚ್ಚರಿಕೆಯಿಂದ ಇರುವಂತೆ ಮುನ್ಸೂಚನೆ ನೀಡಲಾಗಿದೆ.

ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆಯ ನಿರ್ದೇಶಕರಾದ ಶ್ರೀನಿವಾಸ್ ರೆಡ್ಡಿಯವರು ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದ್ದರು. ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ಹೆಚ್ಚು ಮಳೆ ಬೀಳಲಿದೆ. ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಅವರು ತಿಳಿಸಿದ್ದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

12 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

12 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago