ಬೆಂಗಳೂರು: ರಾಜ್ಯದಲ್ಲಿ ಪಾಕಿಸ್ತಾನ ಹಾಗೂ ಬಾಂಗ್ಲಾ ದೇಶದ 137 ಅಕ್ರಮ ವಲಸೆಗಾರರನ್ನು ಪತ್ತೆ ಹಚ್ಚಿ, ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ವಿಧಾನಸಭೆಯ ಅಧಿವೇಶನದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಕಳೆದ 10 ವರ್ಷಗಳಿಂದ ಅಕ್ರಮವಾಗಿ ನೆಲೆಸಿದ್ದಾರೆ. ವಿಜಯಪುರದಲ್ಲಿ ಸುಮಾರು 27 ಭೂಮಾಫಿಯಾ ಪ್ರಕರಣಗಳು ದಾಖಲಾಗಿದ್ದು, 8 ಪ್ರಕರಣಗಳಲ್ಲಿ ದೋಷಾರೋಪಣೆ ಪ್ರಕರಣ ದಾಖಲಿಸಿದೆ. 9 ಪ್ರಕರಣಗಳ ತನಿಖೆ ಮುಂದುವರಿಸಲಾಗಿದೆ. ಇವರುಗಳು ವಯೋವೃದ್ಧರನ್ನು ಗುರಿಯಾಗಿಟ್ಟುಕೊಂಡು ರೇಷನ್ ಕಾರ್ಡ್, ಚುನಾವಣಾ ಗುರುತಿನ ಚೀಟಿಯನ್ನು ನಕಲು ಮಾಡಿ ಬೇರೆಯವರಿಗೆ ಮಾರಾಟ ಅಥವಾ ಬೇರೆ ಕೆಲಸಕ್ಕೆ ಬಳಸಿಕೊಳ್ಳುತ್ತಿರುವುದು ಕಂಡು ಬಂದಿದ್ದು, ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದರು.
ಪಡಿತರ ಸರಬರಾಜಿನಲ್ಲೂ ಅವ್ಯವಹಾರ ಕಂಡು ಬಂದಿದ್ದು, ಅವರ ವಿರುದ್ಧವು ಕಠಿಣ ಕ್ರಮಕೈಗೊಳ್ಳಲಾಗಿದೆ. ಕಂಟ್ರಿ ಪಿಸ್ತೂಲ್ ಮತ್ತು ಗುಂಡುಗಳನ್ನು ವಶಪಡಿಸಿಕೊಂಡು ಕ್ರಮಕೈಗೊಳ್ಳಲಾಗಿದೆ. ವಿಜಯಪುರದಲ್ಲಿ ಎನ್.ಐ.ಎ ಘಟಕ ಸ್ಥಾಪಿಸುವಂತೆ ಪ್ರಸ್ತಾಪಿಸಿದ್ದು, ಕೇಂದ್ರದವರು ಮಾಡಬಹುದು ಎಂದು ಸದನಕ್ಕೆ ಮಾಹಿತಿ ನೀಡಿದರು
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…