ಬೆಂಗಳೂರು: ರಾಜ್ಯದಲ್ಲಿ ಪಾಕಿಸ್ತಾನ ಹಾಗೂ ಬಾಂಗ್ಲಾ ದೇಶದ 137 ಅಕ್ರಮ ವಲಸೆಗಾರರನ್ನು ಪತ್ತೆ ಹಚ್ಚಿ, ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ವಿಧಾನಸಭೆಯ ಅಧಿವೇಶನದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಕಳೆದ 10 ವರ್ಷಗಳಿಂದ ಅಕ್ರಮವಾಗಿ ನೆಲೆಸಿದ್ದಾರೆ. ವಿಜಯಪುರದಲ್ಲಿ ಸುಮಾರು 27 ಭೂಮಾಫಿಯಾ ಪ್ರಕರಣಗಳು ದಾಖಲಾಗಿದ್ದು, 8 ಪ್ರಕರಣಗಳಲ್ಲಿ ದೋಷಾರೋಪಣೆ ಪ್ರಕರಣ ದಾಖಲಿಸಿದೆ. 9 ಪ್ರಕರಣಗಳ ತನಿಖೆ ಮುಂದುವರಿಸಲಾಗಿದೆ. ಇವರುಗಳು ವಯೋವೃದ್ಧರನ್ನು ಗುರಿಯಾಗಿಟ್ಟುಕೊಂಡು ರೇಷನ್ ಕಾರ್ಡ್, ಚುನಾವಣಾ ಗುರುತಿನ ಚೀಟಿಯನ್ನು ನಕಲು ಮಾಡಿ ಬೇರೆಯವರಿಗೆ ಮಾರಾಟ ಅಥವಾ ಬೇರೆ ಕೆಲಸಕ್ಕೆ ಬಳಸಿಕೊಳ್ಳುತ್ತಿರುವುದು ಕಂಡು ಬಂದಿದ್ದು, ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದರು.
ಪಡಿತರ ಸರಬರಾಜಿನಲ್ಲೂ ಅವ್ಯವಹಾರ ಕಂಡು ಬಂದಿದ್ದು, ಅವರ ವಿರುದ್ಧವು ಕಠಿಣ ಕ್ರಮಕೈಗೊಳ್ಳಲಾಗಿದೆ. ಕಂಟ್ರಿ ಪಿಸ್ತೂಲ್ ಮತ್ತು ಗುಂಡುಗಳನ್ನು ವಶಪಡಿಸಿಕೊಂಡು ಕ್ರಮಕೈಗೊಳ್ಳಲಾಗಿದೆ. ವಿಜಯಪುರದಲ್ಲಿ ಎನ್.ಐ.ಎ ಘಟಕ ಸ್ಥಾಪಿಸುವಂತೆ ಪ್ರಸ್ತಾಪಿಸಿದ್ದು, ಕೇಂದ್ರದವರು ಮಾಡಬಹುದು ಎಂದು ಸದನಕ್ಕೆ ಮಾಹಿತಿ ನೀಡಿದರು
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…