ಬೆಂಗಳೂರು: ಇಂದು ರಾತ್ರಿಯಿಂದ ಆರಂಭವಾಗಲಿರುವ 14 ದಿನಗಳ ಕರ್ಫ್ಯೂ ಸಂದರ್ಭದಲ್ಲಿ ಜನ ತಮ್ಮಷ್ಟಕ್ಕೆ ತಾವೇ ಸ್ವಯಂ ನಿಯಂತ್ರಣ ಮಾಡಿಕೊಂಡರೆ ಸೋಂಕು ಎದುರಿಸಲು ಸಾಧ್ಯ. ಈ ನಿಟ್ಟಿನಲ್ಲಿ ಜನರ ಸಂಪೂರ್ಣ ಸಹಕಾರವನ್ನು ಬಯಸುತ್ತೇನೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಮಂಗಳವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಕೈಗೊಂಡಿರುವ ಈ ಬಿಗಿ ಕ್ರಮಗಳನ್ನು ಯಶಸ್ವಿಗೊಳಿಸಬೇಕಾದ ಜವಾಬ್ದಾರಿ ರಾಜ್ಯದ ಜನರ ಮೇಲಿದೆ ಎಂದರು.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸೋಂಕು ನಿಯಂತ್ರಿಸಲು ಬಿಗಿ ಕ್ರಮ ಕೈಗೊಳ್ಳುವ ನಿರ್ಧಾರ ಜಾರಿಗೊಳಿಸಲಾಗಿದೆ. ಈ ಬಿಗಿ ಕ್ರಮಕ್ಕೆ ಜನ ಸ್ವಯಂ ಪ್ರೇರಣೆಯಿಂದ ಸ್ಪಂದಿಸಬೇಕಾದ ಅವಶ್ಯಕತೆಯಿದೆ. ಸ್ವಯಂ ನಿಯಂತ್ರಣದಲ್ಲಿಯೇ ಸೋಂಕಿನ ವಿರುದ್ಧದ ಹೋರಾಟದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದರು.
ಈ 14 ದಿನಗಳ ಕಾಲ ಪ್ರತಿಯೊಬ್ಬರು ಜಾಗೃತರಾಗಿರಬೇಕು. ನಮ್ಮ ಆರೋಗ್ಯದ ಜೊತೆ ಇತರರ ಆರೋಗ್ಯವೂ ಮುಖ್ಯ ಎಂಬುದನ್ನು ಮನಗಾಣಬೇಕು. ಸರ್ಕಾರ ಹೇರಿರುವ ನಿರ್ಬಂಧಕ್ಕೆ ಅನುಗುಣವಾಗಿ ನಡೆದುಕೊಳ್ಳುವುದು ಬಹಳ ಅವಶ್ಯವಿದೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕರ್ಫ್ಯೂ ಯಶಸ್ವಿಗೊಳಿಸಬೇಕಾದ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
ಮಹಾರಾಷ್ಟ್ರ ಸರ್ಕಾರ ಬಿಗಿ ಕ್ರಮ ಕೈಗೊಂಡಿದೆ. ಹೀಗಾಗಿ ಆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಹೀಗಾಗಿ ನಮ್ಮ ಮುಖ್ಯಮಂತ್ರಿಗಳು ಬಿಗಿ ಕ್ರಮದ ತೀರ್ಮಾನ ಮಾಡಿದ್ದಾರೆ. ಸರ್ಕಾರದ ನಿಯಮಗಳನ್ನು ಪಾಲನೆ ಮಾಡುವುದು ನಮ್ಮ ಕರ್ತವ್ಯ. ಕರ್ಫ್ಯೂ ಸಂದರ್ಭದಲ್ಲಿ ವಿನಾಕಾರಣ ಹೊರಗೆ ಓಡಾಡುವ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಉದ್ದೇಶ ಪೂರ್ವಕವಾಗಿ ಕರ್ಫ್ಯೂ ನಿಯಮ ಉಲ್ಲಂಘನೆ ಮಾಡುವ ವಿರುದ್ಧ ಕಠಿಣ ಕ್ರಮಕ್ಕೆ ಸೂಚಿಸಲಾಗಿದೆ ಎಂದು ಬೊಮ್ಮಾಯಿ ತಿಳಿಸಿದರು.
ಮೋದಿ ಜಾಗದಲ್ಲಿ ಬೇರೊಬ್ಬರನ್ನು ಕಲ್ಪಿಸಲೂ ಕೂಡಾ ಆಗದು : ಸಿ.ಟಿ.ರವಿ – Vishwanews24
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…