ಮೈಸೂರು: ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ಮುಖ್ಯ ಕಾರ್ಯದರ್ಶಿ ಮನೆ ಮುಂದೆ ಶೀಘ್ರದಲ್ಲೇ ಅಮರಣಾಂತ ಧರಣಿ ನಡೆಸಲಾಗುವುದು ಎಂದು ಶಾಸಕ ಸಾ.ರಾ.ಮಹೇಶ್ ಎಚ್ಚರಿಕೆ ನೀಡಿದರು.
ಮಾರುಕಟ್ಟೆಯಲ್ಲಿ ₹9ಕ್ಕೆ ಸಿಗುವ ಬಟ್ಟೆ ಬ್ಯಾಗನ್ನು ₹52ಕ್ಕೆ ಖರೀದಿಸಲಾಗಿದೆ. ಈ ರೀತಿ ಒಟ್ಟು ₹14.71 ಲಕ್ಷ ಬ್ಯಾಗನ್ನು ಖರೀದಿಸಿದ್ದು, ಮಾರುಕಟ್ಟೆ ದರ ಇದಕ್ಕೆ ₹1.47 ಕೋಟಿ. ಆದರೆ, ನಿಗದಿ ಖರೀದಿಸಿದ ದರ ₹7.65 ಕೋಟಿ. ಇದರಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ ಎಂದು ಅವರು ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು
ಈ ಬ್ಯಾಗ್ ಪೂರೈಕೆ ಮಾಡುವ ಗುತ್ತಿಗೆದಾರ ಮಹಿಳಾ ಅಧಿಕಾರಿಯೊಬ್ಬರ ಪತಿ. ಅವರು ಕರೆ ಮಾಡಿ ಕೊಡುವುದನ್ನೆಲ್ಲ ಕೊಟ್ಟಾಗಿದೆ. ಬಹಳಷ್ಟು ನಷ್ಟವಾಗಿದೆ. ಈಗ ಬಿಲ್ ಮಂಜೂರಾತಿ ದೊರೆಯದೆ ಹೋದರೆ ನಾನು ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿಯಲ್ಲಿದ್ದೇನೆ ಎಂದು ಅಳಲು ತೋಡಿಕೊಂಡರು. ಸದ್ಯ ಬಿಲ್ ಮಂಜೂರಾಗಿಲ್ಲ. ಜಿಲ್ಲೆಯ ಎಲ್ಲ ಪುರಸಭೆ, ಪಾಲಿಕೆ, ಗ್ರಾಮ ಪಂಚಾಯತಿಗಳಿಗೆ ಬ್ಯಾಗ್ಗಳು ಬಂದಿವೆ ಎಂದರು.
ರೋಹಿಣಿ ಸಿಂಧೂರಿಯನ್ನು ವಜಾಗೊಳಿಸಬೇಕು. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸುವೆ. ಮುಖ್ಯ ಕಾರ್ಯದರ್ಶಿ ಅವರ ಕಚೇರಿ ಮುಂದೆ ಸದ್ಯದಲ್ಲಿಯೇ ಧರಣಿ ನಡೆಸುತ್ತೇನೆ ಎಂದು ಅವರು ಹೇಳಿದರು
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…