ಮೈಸೂರು: ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ಮುಖ್ಯ ಕಾರ್ಯದರ್ಶಿ ಮನೆ ಮುಂದೆ ಶೀಘ್ರದಲ್ಲೇ ಅಮರಣಾಂತ ಧರಣಿ ನಡೆಸಲಾಗುವುದು ಎಂದು ಶಾಸಕ ಸಾ.ರಾ.ಮಹೇಶ್ ಎಚ್ಚರಿಕೆ ನೀಡಿದರು.
ಮಾರುಕಟ್ಟೆಯಲ್ಲಿ ₹9ಕ್ಕೆ ಸಿಗುವ ಬಟ್ಟೆ ಬ್ಯಾಗನ್ನು ₹52ಕ್ಕೆ ಖರೀದಿಸಲಾಗಿದೆ. ಈ ರೀತಿ ಒಟ್ಟು ₹14.71 ಲಕ್ಷ ಬ್ಯಾಗನ್ನು ಖರೀದಿಸಿದ್ದು, ಮಾರುಕಟ್ಟೆ ದರ ಇದಕ್ಕೆ ₹1.47 ಕೋಟಿ. ಆದರೆ, ನಿಗದಿ ಖರೀದಿಸಿದ ದರ ₹7.65 ಕೋಟಿ. ಇದರಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ ಎಂದು ಅವರು ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು
ಈ ಬ್ಯಾಗ್ ಪೂರೈಕೆ ಮಾಡುವ ಗುತ್ತಿಗೆದಾರ ಮಹಿಳಾ ಅಧಿಕಾರಿಯೊಬ್ಬರ ಪತಿ. ಅವರು ಕರೆ ಮಾಡಿ ಕೊಡುವುದನ್ನೆಲ್ಲ ಕೊಟ್ಟಾಗಿದೆ. ಬಹಳಷ್ಟು ನಷ್ಟವಾಗಿದೆ. ಈಗ ಬಿಲ್ ಮಂಜೂರಾತಿ ದೊರೆಯದೆ ಹೋದರೆ ನಾನು ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿಯಲ್ಲಿದ್ದೇನೆ ಎಂದು ಅಳಲು ತೋಡಿಕೊಂಡರು. ಸದ್ಯ ಬಿಲ್ ಮಂಜೂರಾಗಿಲ್ಲ. ಜಿಲ್ಲೆಯ ಎಲ್ಲ ಪುರಸಭೆ, ಪಾಲಿಕೆ, ಗ್ರಾಮ ಪಂಚಾಯತಿಗಳಿಗೆ ಬ್ಯಾಗ್ಗಳು ಬಂದಿವೆ ಎಂದರು.
ರೋಹಿಣಿ ಸಿಂಧೂರಿಯನ್ನು ವಜಾಗೊಳಿಸಬೇಕು. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸುವೆ. ಮುಖ್ಯ ಕಾರ್ಯದರ್ಶಿ ಅವರ ಕಚೇರಿ ಮುಂದೆ ಸದ್ಯದಲ್ಲಿಯೇ ಧರಣಿ ನಡೆಸುತ್ತೇನೆ ಎಂದು ಅವರು ಹೇಳಿದರು
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…