ಮೈಸೂರು: ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ಮುಖ್ಯ ಕಾರ್ಯದರ್ಶಿ ಮನೆ ಮುಂದೆ ಶೀಘ್ರದಲ್ಲೇ ಅಮರಣಾಂತ ಧರಣಿ ನಡೆಸಲಾಗುವುದು ಎಂದು ಶಾಸಕ ಸಾ.ರಾ.ಮಹೇಶ್ ಎಚ್ಚರಿಕೆ ನೀಡಿದರು.
ಮಾರುಕಟ್ಟೆಯಲ್ಲಿ ₹9ಕ್ಕೆ ಸಿಗುವ ಬಟ್ಟೆ ಬ್ಯಾಗನ್ನು ₹52ಕ್ಕೆ ಖರೀದಿಸಲಾಗಿದೆ. ಈ ರೀತಿ ಒಟ್ಟು ₹14.71 ಲಕ್ಷ ಬ್ಯಾಗನ್ನು ಖರೀದಿಸಿದ್ದು, ಮಾರುಕಟ್ಟೆ ದರ ಇದಕ್ಕೆ ₹1.47 ಕೋಟಿ. ಆದರೆ, ನಿಗದಿ ಖರೀದಿಸಿದ ದರ ₹7.65 ಕೋಟಿ. ಇದರಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ ಎಂದು ಅವರು ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು
ಈ ಬ್ಯಾಗ್ ಪೂರೈಕೆ ಮಾಡುವ ಗುತ್ತಿಗೆದಾರ ಮಹಿಳಾ ಅಧಿಕಾರಿಯೊಬ್ಬರ ಪತಿ. ಅವರು ಕರೆ ಮಾಡಿ ಕೊಡುವುದನ್ನೆಲ್ಲ ಕೊಟ್ಟಾಗಿದೆ. ಬಹಳಷ್ಟು ನಷ್ಟವಾಗಿದೆ. ಈಗ ಬಿಲ್ ಮಂಜೂರಾತಿ ದೊರೆಯದೆ ಹೋದರೆ ನಾನು ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿಯಲ್ಲಿದ್ದೇನೆ ಎಂದು ಅಳಲು ತೋಡಿಕೊಂಡರು. ಸದ್ಯ ಬಿಲ್ ಮಂಜೂರಾಗಿಲ್ಲ. ಜಿಲ್ಲೆಯ ಎಲ್ಲ ಪುರಸಭೆ, ಪಾಲಿಕೆ, ಗ್ರಾಮ ಪಂಚಾಯತಿಗಳಿಗೆ ಬ್ಯಾಗ್ಗಳು ಬಂದಿವೆ ಎಂದರು.
ರೋಹಿಣಿ ಸಿಂಧೂರಿಯನ್ನು ವಜಾಗೊಳಿಸಬೇಕು. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸುವೆ. ಮುಖ್ಯ ಕಾರ್ಯದರ್ಶಿ ಅವರ ಕಚೇರಿ ಮುಂದೆ ಸದ್ಯದಲ್ಲಿಯೇ ಧರಣಿ ನಡೆಸುತ್ತೇನೆ ಎಂದು ಅವರು ಹೇಳಿದರು
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…
ಪಿಕಲ್ಬಾಲ್ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್ನಲ್ಲಿ ಪತನ : ಐವರು ಮೃತ್ಯು ಆಸ್ಟಿನ್: ವಿಂಬರ್ಲಿ ಬಳಿ ಪಿಕಲ್ಬಾಲ್ ಆಟಗಾರರನ್ನು ಹೊತ್ತೊಯ್ಯುತ್ತಿದ್ದ…
ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ದಂಪತಿಗೆ…