ಮೇಷ : ಈ ದಿನವು ನಿಮಗೆ ಉತ್ತಮವಾಗಿರಲಿದೆ. ವಿದ್ಯಾರ್ಥಿಗಳು ಗುರು ಅನುಗ್ರಹದಿಂದ ಅಂದುಕೊಂಡಿದ್ದನ್ನು ಸಾಧಿಸಲಿದ್ದಾರೆ. ಉದ್ಯಮದಲ್ಲಿ ಎಲ್ಲಾ ರೀತಿಯ ಸವಾಲುಗಳನ್ನು ಎದುರಿಸಿ ಮುನ್ನುಗ್ಗಲಿದ್ದೀರಿ.
ವೃಷಭ : ನಿಮ್ಮ ಗುರಿಯಿಂದ ನಿಮ್ಮ ವಿಚಲಿತರನ್ನಾಗಿಸಲು ಕೆಲ ಅಡೆತಡೆಗಳು ಎದುರಾಗಬಹುದು. ಯಾವುದೇ ಕಾರಣಕ್ಕೂ ಮನಸ್ಸನ್ನು ಚಂಚಲ ಮಾಡಿಕೊಳ್ಳಬೇಡಿ.
ಮಿಥುನ : ಕೆಲವೊಂದು ವಿಚಾರಗಳಲ್ಲಿ ನೀವು ದೃಢ ಸಂಕಲ್ಪದಿಂದ ಇರಲೇಬೇಕು. ಸ್ಥಿಮಿತ ಕಳೆದುಕೊಳ್ಳಬೇಡಿ. ಸಂಗಾತಿಯು ಚಿಕ್ಕ ಚಿಕ್ಕ ವಿಷಯಕ್ಕೂ ನಿಮ್ಮ ಮೇಲೆ ರೇಗಲಿದ್ದಾರೆ.
ಕಟಕ : ಉದ್ಯೋಗದ ನಿಮಿತ್ತ ನಿಮಗೆ ವಿದೇಶಿ ಪ್ರಯಾಣದ ಭಾಗ್ಯ ಕೂಡಿ ಬರಲಿದೆ. ಪ್ರಯಾಣ ಕೂಡ ಉತ್ತಮವಾಗಿಯೇ ಇರಲಿದೆ. ಸಂಗಾತಿಯು ನಿಮ್ಮನ್ನು ಎಲ್ಲಾ ಪರಿಸ್ಥಿತಿಯಲ್ಲಿಯೂ ಅರ್ಥ ಮಾಡಿಕೊಳ್ಳುತ್ತಾರೆ.
ಸಿಂಹ : ಯಾವುದೇ ವಿಚಾರದಲ್ಲಿ ಆಗಲಿ ಅತಿಯಾದ ಆತುರ ಸಲ್ಲದು. ತಾಳ್ಮೆಯನ್ನು ಕಾಯ್ದುಕೊಳ್ಳುವುದನ್ನು ಕಲಿತುಕೊಳ್ಳಿ. ಸೌಂದರ್ಯವರ್ಧಕ ಮಾರಾಟಗಾರರಿಗೆ ಇದು ಸುದಿನವಾಗಿದೆ. ನವವಿವಾಹಿತರಿಗೆ ಸಂತಾನ ಭಾಗ್ಯವಿದೆ.
ಕನ್ಯಾ : ಅನೇಕ ದಿನಗಳ ಬಳಿಕ ಕುಟುಂಬಸ್ಥರ ಜೊತೆಯಲ್ಲಿ ಕಾಲ ಕಳೆಯಲಿದ್ದೀರಿ. ಈ ದಿನ ನಿಮಗೆ ಸಂತಸಮಯವಾಗಿ ಇರಲಿದೆ. ಬಹಳ ದಿನಗಳ ಬಳಿಕ ಸ್ನೇಹಿತರನ್ನು ಭೇಟಿಯಾಗಲಿದ್ದೀರಿ. ಹಳೆಯ ಸಾಲಗಳು ತೀರಲಿವೆ.
ತುಲಾ : ಸಂಗಾತಿಯ ಆರೋಗ್ಯದಲ್ಲಿ ಏರುಪೇರು ಉಂಟಾಗಲಿದೆ. ಇದರಿಂದ ಆಸ್ಪತ್ರೆಗೆ ಅಲೆದಾಟ ತಪ್ಪಿದ್ದಲ್ಲ. ಉದ್ಯಮದಲ್ಲಿ ಸಫಲರಾಗಲು ಇನ್ನಷ್ಟು ಪ್ರಯತ್ನ ಮುಂದುವರಿಸಿ.
ವೃಶ್ಚಿಕ : ಸಂಗಾತಿ ಹಾಗೂ ನಿಮ್ಮ ನಡುವಿನ ಸಂಬಂಧ ಗಟ್ಟಿಗೊಳ್ಳಲಿದೆ. ನಿಮ್ಮ ಯೋಜನೆಗಳು ಫಲಪ್ರದವಾಗಲು ಹೆಚ್ಚಿನ ಪ್ರಯತ್ನ ಮಾಡಿ. ಪೋಷಕರು ವ್ಯವಹಾರದಲ್ಲಿ ಮಹತ್ವದ ಪಾತ್ರ ವಹಿಸಲಿದ್ದಾರೆ. ಸ್ನೇಹಿತರ ನಿಜಬಣ್ಣ ಬಯಲಾಗಲಿದೆ.
ಧನು : ಭೂಮಿ ಖರೀದಿ ಮಾಡುವವರಿಗೆ ಇದು ಸುದಿನವಾಗಿದೆ. ಈ ದಿನ ನಿಮಗೆ ಹೆಚ್ಚಿನ ಅದೃಷ್ಟ ತರಲಿದೆ. ಸಂಬಂಧದ ವಿಚಾರದಲ್ಲಿ ನೀವು ಅನೇಕ ಅಪವಾದ ಎದುರಿಸಬೇಕಾದೀತು.
ಮಕರ : ವೈವಾಹಿಕ ಸಂಬಂಧಗಳಿಗೆ ಅನೇಕ ವರ್ಷಗಳಿಂದ ಹುಡುಕಾಟ ನಡೆಸುತ್ತಿರುವವರಿಗೆ ಇಂದು ಯೋಗ್ಯ ಕಂಕಣಬಲ ಕೂಡಿ ಬರಲಿದೆ.
ಕುಂಭ : ಉದ್ಯಮದಲ್ಲಿ ನೀವು ಆದಷ್ಟು ಜಾಗ್ರತೆಯಿಂದ ಇರಬೇಕು. ಇಲ್ಲವಾದಲ್ಲಿ ಬಹುದೊಡ್ಡ ನಷ್ಟ ಅನುಭವಿಸಲಿದ್ದೀರಿ.
ಮೀನ : ದಾಂಪತ್ಯ ಜೀವನ ಅತ್ಯಂತ ಚೆನ್ನಾಗಿ ಇರಲಿದೆ. ವೃತ್ತಿ ರಂಗದಲ್ಲಿ ಯಶಸ್ಸನ್ನು ಪಡೆಯಲಿದ್ದೀರಿ. ವ್ಯಾಪಾರದಲ್ಲಿ ಲಾಭವಿದೆ. ಶ್ರೀಕೃಷ್ಣನನ್ನು ಆರಾಧಿಸಿ. ಆರೋಗ್ಯದ ಕಡೆ ಗಮನ ನೀಡಿ.
ಗ್ಯಾಸ್ ಏಜೆನ್ಸಿಗಳಿಂದ ಎಲ್ಪಿಜಿ ಪೂರೈಕೆ: ನೆಟ್ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ ಮಣಿಪಾಲ: ನೆಟ್ವರ್ಕ್…
ಕಟಪಾಡಿ: ಮಟ್ಟು ಬೀಚ್ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು ಸುರಕ್ಷ ಕಾಮಗಾರಿ ಆರಂಭ ಕಟಪಾಡಿ: ಕಾಪು ತಾಲೂಕು ಕೋಟೆ ಗ್ರಾ.…
ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್…
ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ ಮೈಸೂರು: ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ ಎಂದು ಸಚಿವ ಡಾ.…
ಮಂಗಳೂರು: ತಂಗಿಯನ್ನು ಕೊಲೆಗೈದ ಪ್ರಕರಣ :ಆರೋಪಿ ಅಣ್ಣನಿಗೆ 4 ವರ್ಷ ಜೈಲುಶಿಕ್ಷೆ ಮಂಗಳೂರು : ಕ್ಷುಲ್ಲಕ ಕಾರಣಕ್ಕಾಗಿ ತನ್ನ ಸ್ವಂತ…
ಉಡುಪಿ: ಸೆ. 8 ರಂದು ಕ್ರೈಸ್ತರ ಮೊಂತಿ ಫೆಸ್ತ್ ಗೆ ಸರ್ಕಾರಿ ರಜೆ ನೀಡುವಂತೆ ಸಿಎಂ ಗೆ ಕಥೊಲಿಕ್ ಸಭಾ…