Featured

14-12-2021 : ಇಂದಿನ ದಿನ ಭವಿಷ್ಯ -Vishwanews24

14-12-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ : ಈ ದಿನವು ನಿಮಗೆ ಉತ್ತಮವಾಗಿರಲಿದೆ. ವಿದ್ಯಾರ್ಥಿಗಳು ಗುರು ಅನುಗ್ರಹದಿಂದ ಅಂದುಕೊಂಡಿದ್ದನ್ನು ಸಾಧಿಸಲಿದ್ದಾರೆ. ಉದ್ಯಮದಲ್ಲಿ ಎಲ್ಲಾ ರೀತಿಯ ಸವಾಲುಗಳನ್ನು ಎದುರಿಸಿ ಮುನ್ನುಗ್ಗಲಿದ್ದೀರಿ.

ವೃಷಭ : ನಿಮ್ಮ ಗುರಿಯಿಂದ ನಿಮ್ಮ ವಿಚಲಿತರನ್ನಾಗಿಸಲು ಕೆಲ ಅಡೆತಡೆಗಳು ಎದುರಾಗಬಹುದು. ಯಾವುದೇ ಕಾರಣಕ್ಕೂ ಮನಸ್ಸನ್ನು ಚಂಚಲ ಮಾಡಿಕೊಳ್ಳಬೇಡಿ.

ಮಿಥುನ : ಕೆಲವೊಂದು ವಿಚಾರಗಳಲ್ಲಿ ನೀವು ದೃಢ ಸಂಕಲ್ಪದಿಂದ ಇರಲೇಬೇಕು. ಸ್ಥಿಮಿತ ಕಳೆದುಕೊಳ್ಳಬೇಡಿ. ಸಂಗಾತಿಯು ಚಿಕ್ಕ ಚಿಕ್ಕ ವಿಷಯಕ್ಕೂ ನಿಮ್ಮ ಮೇಲೆ ರೇಗಲಿದ್ದಾರೆ.

ಕಟಕ : ಉದ್ಯೋಗದ ನಿಮಿತ್ತ ನಿಮಗೆ ವಿದೇಶಿ ಪ್ರಯಾಣದ ಭಾಗ್ಯ ಕೂಡಿ ಬರಲಿದೆ. ಪ್ರಯಾಣ ಕೂಡ ಉತ್ತಮವಾಗಿಯೇ ಇರಲಿದೆ. ಸಂಗಾತಿಯು ನಿಮ್ಮನ್ನು ಎಲ್ಲಾ ಪರಿಸ್ಥಿತಿಯಲ್ಲಿಯೂ ಅರ್ಥ ಮಾಡಿಕೊಳ್ಳುತ್ತಾರೆ.

ಸಿಂಹ : ಯಾವುದೇ ವಿಚಾರದಲ್ಲಿ ಆಗಲಿ ಅತಿಯಾದ ಆತುರ ಸಲ್ಲದು. ತಾಳ್ಮೆಯನ್ನು ಕಾಯ್ದುಕೊಳ್ಳುವುದನ್ನು ಕಲಿತುಕೊಳ್ಳಿ. ಸೌಂದರ್ಯವರ್ಧಕ ಮಾರಾಟಗಾರರಿಗೆ ಇದು ಸುದಿನವಾಗಿದೆ. ನವವಿವಾಹಿತರಿಗೆ ಸಂತಾನ ಭಾಗ್ಯವಿದೆ.

ಕನ್ಯಾ : ಅನೇಕ ದಿನಗಳ ಬಳಿಕ ಕುಟುಂಬಸ್ಥರ ಜೊತೆಯಲ್ಲಿ ಕಾಲ ಕಳೆಯಲಿದ್ದೀರಿ. ಈ ದಿನ ನಿಮಗೆ ಸಂತಸಮಯವಾಗಿ ಇರಲಿದೆ. ಬಹಳ ದಿನಗಳ ಬಳಿಕ ಸ್ನೇಹಿತರನ್ನು ಭೇಟಿಯಾಗಲಿದ್ದೀರಿ. ಹಳೆಯ ಸಾಲಗಳು ತೀರಲಿವೆ.

ತುಲಾ : ಸಂಗಾತಿಯ ಆರೋಗ್ಯದಲ್ಲಿ ಏರುಪೇರು ಉಂಟಾಗಲಿದೆ. ಇದರಿಂದ ಆಸ್ಪತ್ರೆಗೆ ಅಲೆದಾಟ ತಪ್ಪಿದ್ದಲ್ಲ. ಉದ್ಯಮದಲ್ಲಿ ಸಫಲರಾಗಲು ಇನ್ನಷ್ಟು ಪ್ರಯತ್ನ ಮುಂದುವರಿಸಿ.

ವೃಶ್ಚಿಕ : ಸಂಗಾತಿ ಹಾಗೂ ನಿಮ್ಮ ನಡುವಿನ ಸಂಬಂಧ ಗಟ್ಟಿಗೊಳ್ಳಲಿದೆ. ನಿಮ್ಮ ಯೋಜನೆಗಳು ಫಲಪ್ರದವಾಗಲು ಹೆಚ್ಚಿನ ಪ್ರಯತ್ನ ಮಾಡಿ. ಪೋಷಕರು ವ್ಯವಹಾರದಲ್ಲಿ ಮಹತ್ವದ ಪಾತ್ರ ವಹಿಸಲಿದ್ದಾರೆ. ಸ್ನೇಹಿತರ ನಿಜಬಣ್ಣ ಬಯಲಾಗಲಿದೆ.

ಧನು : ಭೂಮಿ ಖರೀದಿ ಮಾಡುವವರಿಗೆ ಇದು ಸುದಿನವಾಗಿದೆ. ಈ ದಿನ ನಿಮಗೆ ಹೆಚ್ಚಿನ ಅದೃಷ್ಟ ತರಲಿದೆ. ಸಂಬಂಧದ ವಿಚಾರದಲ್ಲಿ ನೀವು ಅನೇಕ ಅಪವಾದ ಎದುರಿಸಬೇಕಾದೀತು.

ಮಕರ : ವೈವಾಹಿಕ ಸಂಬಂಧಗಳಿಗೆ ಅನೇಕ ವರ್ಷಗಳಿಂದ ಹುಡುಕಾಟ ನಡೆಸುತ್ತಿರುವವರಿಗೆ ಇಂದು ಯೋಗ್ಯ ಕಂಕಣಬಲ ಕೂಡಿ ಬರಲಿದೆ.

ಕುಂಭ : ಉದ್ಯಮದಲ್ಲಿ ನೀವು ಆದಷ್ಟು ಜಾಗ್ರತೆಯಿಂದ ಇರಬೇಕು. ಇಲ್ಲವಾದಲ್ಲಿ ಬಹುದೊಡ್ಡ ನಷ್ಟ ಅನುಭವಿಸಲಿದ್ದೀರಿ.

ಮೀನ : ದಾಂಪತ್ಯ ಜೀವನ ಅತ್ಯಂತ ಚೆನ್ನಾಗಿ ಇರಲಿದೆ. ವೃತ್ತಿ ರಂಗದಲ್ಲಿ ಯಶಸ್ಸನ್ನು ಪಡೆಯಲಿದ್ದೀರಿ. ವ್ಯಾಪಾರದಲ್ಲಿ ಲಾಭವಿದೆ. ಶ್ರೀಕೃಷ್ಣನನ್ನು ಆರಾಧಿಸಿ. ಆರೋಗ್ಯದ ಕಡೆ ಗಮನ ನೀಡಿ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

14 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

14 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

14 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

14 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

14 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

16 hours ago