ಸುರತ್ಕಲ್ : 15 ದಿನಗಳ ಒಳಗಾಗಿ ಸುರತ್ಕಲ್ ನ ಟೋಲ್ ಗೇಟನ್ನು ತೆರವುಗೊಳಿಸುವುದಾಗಿ ಕೇಂದ್ರ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಭರವಸೆಯನ್ನು ನೀಡಿದ್ದಾರೆ ಎಂದು ದಕ್ಷಿಣ ಕನ್ನಡ ಟ್ರಕ್ ಮಾಲಕರ ಸಂಘದ ಅಧ್ಯಕ್ಷ ಸುನೀಲ್ ಡಿ’ಸೋಜಾ ಅವರು ತಿಳಿಸಿದ್ದಾರೆ.
ಕೂಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು, ನಮ್ಮ ಸಂಘದ ರಾಜ್ಯಾಧ್ಯಕ್ಷ ಡಾ| ಜಿ.ಆರ್.ಷಣ್ಮುಗಪ್ಪ ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಸೆ. 9ರಂದು ಟ್ರಾನ್ಸ್ ಪೋರ್ಟ್ ಮೀಟ್ ಸಭೆಯ ಬಳಿಕ ಭೇಟಿ ಮಾಡಿ ಟೋಲ್ ಗೇಟ್ ತೆರವು ಬಗ್ಗೆ ಮನವಿ ನೀಡಿದ್ದರು. ಇದಕ್ಕೆ ಸಚಿವರಿಂದ ಭರವಸೆ ದೊರಕಿದೆ. ಟೋಲ್ ಗೇಟ್ ವಿರೋಧಿ ಸಮಿತಿ ನಡೆಸಲು ಉದ್ದೇಶಿಸಿರುವ ಧರಣಿಯಲ್ಲಿ ನಾವೂ ಭಾಗಿಯಾಗುತ್ತೇವೆ. ಸರಕಾರ ಮಾತು ತಪ್ಪಿದಲ್ಲಿ ಟ್ರಕ್ಗಳ ಮೂಲಕ ಟೋಲ್ ಗೇಟ್ಗೆ ಮುತ್ತಿಗೆ ಹಾಕುತ್ತೇವೆ ಎಂದರು.
ಮಂಗಳೂರಿನಿಂದ ಲಾರಿಗಳಿಗೆ ಬಾಡಿಗೆ ನಿಗದಿ ಪಡಿಸುವ ಬಗ್ಗೆ ರಾಜ್ಯಾಧ್ಯಕ್ಷ ಷಣ್ಮುಗಪ್ಪ ಹಾಗೂ ಇತರರೊಂದಿಗೆ ನಮ್ಮ ಸಂಘದ ಮಹತ್ವದ ಸಭೆ ಸೆ. 13ರಂದು ಮಂಗಳೂರಿನಲ್ಲಿ ನಡೆಯಲಿದೆ. ಜಂಟಿ ಸಭೆಯಲ್ಲಿ ದರ ನಿಗದಿ ಪಡಿಸಿ ಜಾರಿಗೆ ತರುತ್ತೇವೆ. ಇದಕ್ಕೆ ವಿರೋಧ ಕಂಡುಬಂದಲ್ಲಿ ಲಾರಿ ಮುಷ್ಕರ ಸಹಿತ ನಮ್ಮ ಪ್ರತಿಭಟನೆ ಮುಂದಿನ ದಿನಗಳಲ್ಲಿ ಉಗ್ರವಾಗಿ ನಡೆಯಲಿದೆ ಎಂದು ತಿಳಿಸಿದರು.
ಇನ್ನು ಸುರತ್ಕಲ್ ಟೋಲ್ ಗೇಟ್ ಮುಂಭಾಗ ಇಂದು ಹಮ್ಮಿಕೊಂಡಿರುವ ಸಾಮೂಹಿಕ ಧರಣಿಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಈ ಧರಣಿಗೆ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಶನ್, ಉಭಯ ಜಿಲ್ಲೆಗಳ ಬಸ್ ಮಾಲಕರ ಸಂಘಟನೆಗಳು, ಕಾರ್ಮಿಕರ ಸಂಘಟನೆಗಳು, ವಿವಿಧ ಪಕ್ಷಗಳು ಸೇರಿದಂತೆ ಹಲವು ಸಂಘ- ಸಂಸ್ಥೆಗಳು ಭಾಗವಹಿಸುವುದಾಗಿ ಘೋಷಿಸಿವೆ.” ಎಂದು ತಿಳಿದು ಬಂದಿದೆ.
ಕಾರ್ಕಳ : ಖಾಸಗಿ ಬಸ್ ಹಾಗೂ ಪಿಕಪ್ ಢಿಕ್ಕಿ : ಪಿಕಪ್ ಚಾಲಕ ಸಾವು – Vishwanews24
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…