ಸುಬ್ರಹ್ಮಣ್ಯ : ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ 15 ದಿನದೊಳಗೆ 15 ಸಾವಿರ ಶಿಕ್ಷಕರ ನೇಮಕಾತಿ ಅಂತಿಮ ಪ್ರಕ್ರಿಯೆ ನಡೆಯಲಿದೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ 15 ದಿನದೊಳಗೆ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, 15 ಸಾವಿರ ಶಿಕ್ಷಕರ ಸಿಇಟಿ ಈಗಾಗಲೇ ಆಗಿದ್ದು, ಕಾನೂನು ಕಾರಣಕ್ಕೆ ಸ್ವಲ್ಪ ವಿಳಂಬವಾಗಿದ್ದು, ಶೀಘ್ರದಲ್ಲೇ ನೇಮಕಾತಿ ಪಟ್ಟಿ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಈ ವರ್ಷ 400- 500 ಶಾಲೆಗಳಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೊಳಿಸಲಾಗುತ್ತಿದ್ದು, ಮುಂದಿನ ವರ್ಷ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನವಾಗಲಿದೆ. ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ಈಗಾಗಲೇ ದಿನಾಂಕ ಘೋಷಿಸಿದ್ದು, ಪರೀಕ್ಷಾ ಪೂರ್ವಸಿದ್ಧತೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಅತಿಥಿ ಶಿಕ್ಷಕರಿಗೆ ವೇತನ ಪಾವತಿ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಅತಿಥಿ ಶಿಕ್ಷಕರಿಗೆ ಒಂದೆರಡು ತಿಂಗಳು ತಡ ಆಗಬಹುದು ಅಥವಾ ಆರಂಭದಲ್ಲಿ ತಡ ಆಗಬಹುದು ಹೊರತು ವೇತನ ಪಾವತಿ ಆಗದೇ ಇರುವುದಿಲ್ಲ ಹೇಳಿದ್ದಾರೆ.
Join our Whatsapp group by clicking the below link 👇👇
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…