15 ಲಕ್ಷ ಪಡೆದು ವಂಚಿಸಿದ ಪ್ರಿಯಕರನಿಗೆ ಯುವತಿಯಿಂದ ಚಪ್ಪಲಿ ಏಟು -Vishwanews24

ಚಿತ್ರದುರ್ಗ: ಮದುವೆಯಾಗುವುದಾಗಿ ನಂಬಿಸಿ 15 ಲಕ್ಷ ರೂಪಾಯಿ ಪಡೆದು ಕೈಕೊಟ್ಟ ಪ್ರಿಯಕರನಿಗೆ ಯುವತಿ ಚಪ್ಪಲಿಯಿಂದ ಬಾರಿಸಿರುವ ಘಟನೆ ಚಿತ್ರದುರ್ಗದ ಬಡಾವಣೆ ಠಾಣೆ ಬಳಿ ನಡೆದಿದೆ.

ಉಮೇಶ್ ಮದುವೆಯಾಗುವುದಾಗಿ ಹೇಳಿ ಮೋಸ ಮಾಡಿದ್ದನು. ಈ ಕುರಿತು ಯುವತಿ ಚಿತ್ರದುರ್ಗದ ಮಹಿಳಾ ಠಾಣೆ ಪೊಲೀಸರಿಗೆ ದೂರು ನೀಡಿದ್ದಳು. ಹೀಗಾಗಿ ವಂಚನೆ ಪ್ರಕರಣ ಸಂಬಂಧ ಮಹಿಳಾ ಠಾಣೆಗೆ ವಿಚಾರಣೆಗಾಗಿ ಉಮೇಶ್ ಬಂದಿದ್ದನು.

 

ವಿಚಾರಣೆ ಮುಗಿಸಿ ಯುವಕ ತೆರಳುತ್ತಿದ್ದ ಇನ್ನೋವಾ ಕಾರನ್ನ ಅಡ್ಡಗಟ್ಟಿ ಯುವತಿ ಆಕ್ರೋಶ ವ್ಯಕ್ತಪಡಿಸಿದ್ದಾಳೆ. ನಂತರ ಆರೋಪಿ ಉಮೇಶನಿಗೆ ಯುವತಿ ಮತ್ತು ಆಕೆಯ ಪೋಷಕರು ಸಖತ್ ಗೂಸಾ ಕೊಟ್ಟಿದ್ದಾರೆ. ಈ ವೇಳೆ ಪೊಲೀಸರು ಅವರನ್ನು ತಡೆಯುವ ಪ್ರಯತ್ನ ಮಾಡಿದ್ದಾರೆ. ಆದರೂ ಯುವತಿ ಮೋಸ ಮಾಡಿದ್ದಕ್ಕೆ ಪ್ರಿಯಕರನಿಗೆ ಚಪ್ಪಲಿಯಿಂದ ಬಾರಿಸಿದ್ದಾಳೆ.

ಏನಿದು ಪ್ರಕರಣ?
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚೌಳಕೆರೆ ಗ್ರಾಮದ ಉಮೇಶ್ ಪ್ರೀತಿ ಹೆಸರಲ್ಲಿ ವಂಚಿಸಿದ್ದನು. ಕಳೆದ ಮೂರು ವರ್ಷಗಳ ಹಿಂದೆ ಡಿಪ್ಲೋಮಾ ಮಾಡುತ್ತಿದ್ದ ಕೆಳಗೋಟೆಯ ಯುವತಿ ಜೊತೆ ಸ್ನೇಹ ಬೆಳೆಸಿದ್ದನು. ಬಳಿಕ ಮೊಬೈಲ್‍ನಲ್ಲಿ ಮಾತಿನಿಂದಲೇ ಯುವತಿಯ ಮನಸೆಳೆದು ಪ್ರೀತಿ ಎಂಬ ಹಳ್ಳಕ್ಕೆ ಬೀಳಿಸಿದ್ದನು. ನಂತರ ಯುವತಿಯ ಮನೆಯಲ್ಲಿ ನಾಟಕ ಮಾಡಿ ಎರಡು ಕುಟುಂಬದ ನಡುವೆ ಮಾತುಕಥೆ ನಡೆಸಿ ಮದುವೆಗೂ ಒಪ್ಪಿಸಿದ್ದನು. ಹೀಗಾಗಿ ಯುವತಿ ಉಮೇಶ್‍ನನ್ನು ತುಂಬಾ ನಂಬಿದ್ದಳು. ಆದರೆ ಉಮೇಶ್ ಆಕೆಗೆ ಮೋಸ ಮಾಡಿ ಅವಳಿಂದ 15 ಲಕ್ಷ ರೂಪಾಯಿ ಹಣವನ್ನು ಪೀಕಿದ್ದನು. ತನ್ನ ಉನ್ನತ ವ್ಯಾಸಂಗಕ್ಕಾಗಿ ಸಂಗ್ರಹಿಸಿಟ್ಟಿದ್ದ ಹಣವನ್ನು ವಂಚಕನಿಗೆ ಕೊಟ್ಟು ಖಾಲಿ ಕೈ ಆದ ಬಳಿಕ ಯುವತಿಗೆ ವಂಚಿಸಿರೋ ಆಸಾಮಿಯ ಅಸಲಿ ಬಣ್ಣ ಬಯಲಾಗಿದೆ.

 

ಈಕೆಗಷ್ಟೇ ಅಲ್ಲದೇ ಅನೇಕ ಯುವತಿಯರು ಹಾಗೂ ಮಹಿಳೆಯರೊಂದಿಗೆ ಈತ ಪ್ರೀತಿಯ ನಾಟಕವಾಡಿ ಕೆಲವರೊಂದಿಗೆ ಅಕ್ರಮ ಸಂಬಂಧವನ್ನು ಸಹ ಹೊಂದಿದ್ದನು. ಈ ಸತ್ಯ ಉಮೇಶ್‍ನ ಮೊಬೈಲ್‍ನಿಂದಲೇ ಬಯಲಾಗಿದೆ. ಇದರಿಂದಾಗಿ ಈತನ ಅಸಲಿ ಬಂಡವಾಳ ಅರಿತ ಯುವತಿ ತಾನು ಕೊಟ್ಟ ಲಕ್ಷಾಂತರ ರೂಪಾಯಿ ಹಣವನ್ನು ವಾಪಸ್ ಕೇಳಿದ್ದಾಳೆ. ಆಗ ಇನ್ನುಳಿದ ಪ್ರೇಮಿಗಳಂತೆ ನಿನ್ನ ಜೊತೆಯೂ ಚೆನ್ನಾಗಿರ್ತೆನೆಂದು ದೌರ್ಜನ್ಯವೆಸೆಗಿದ್ದಾನೆ. ಹೀಗಾಗಿ ಮನನೊಂದ ಯುವತಿ ಚಿತ್ರದುರ್ಗದ ಮಹಿಳಾ ಠಾಣೆ ಪೊಲೀಸರ ಮೊರೆ ಹೋಗಿದ್ದಳು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ – vishwanews24

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…

7 minutes ago

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

38 minutes ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

51 minutes ago

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…

1 hour ago

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

1 hour ago

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ – vishwanews24

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…

2 hours ago