15 ಲಕ್ಷ ಪಡೆದು ವಂಚಿಸಿದ ಪ್ರಿಯಕರನಿಗೆ ಯುವತಿಯಿಂದ ಚಪ್ಪಲಿ ಏಟು -Vishwanews24

ಚಿತ್ರದುರ್ಗ: ಮದುವೆಯಾಗುವುದಾಗಿ ನಂಬಿಸಿ 15 ಲಕ್ಷ ರೂಪಾಯಿ ಪಡೆದು ಕೈಕೊಟ್ಟ ಪ್ರಿಯಕರನಿಗೆ ಯುವತಿ ಚಪ್ಪಲಿಯಿಂದ ಬಾರಿಸಿರುವ ಘಟನೆ ಚಿತ್ರದುರ್ಗದ ಬಡಾವಣೆ ಠಾಣೆ ಬಳಿ ನಡೆದಿದೆ.

ಉಮೇಶ್ ಮದುವೆಯಾಗುವುದಾಗಿ ಹೇಳಿ ಮೋಸ ಮಾಡಿದ್ದನು. ಈ ಕುರಿತು ಯುವತಿ ಚಿತ್ರದುರ್ಗದ ಮಹಿಳಾ ಠಾಣೆ ಪೊಲೀಸರಿಗೆ ದೂರು ನೀಡಿದ್ದಳು. ಹೀಗಾಗಿ ವಂಚನೆ ಪ್ರಕರಣ ಸಂಬಂಧ ಮಹಿಳಾ ಠಾಣೆಗೆ ವಿಚಾರಣೆಗಾಗಿ ಉಮೇಶ್ ಬಂದಿದ್ದನು.

 

ವಿಚಾರಣೆ ಮುಗಿಸಿ ಯುವಕ ತೆರಳುತ್ತಿದ್ದ ಇನ್ನೋವಾ ಕಾರನ್ನ ಅಡ್ಡಗಟ್ಟಿ ಯುವತಿ ಆಕ್ರೋಶ ವ್ಯಕ್ತಪಡಿಸಿದ್ದಾಳೆ. ನಂತರ ಆರೋಪಿ ಉಮೇಶನಿಗೆ ಯುವತಿ ಮತ್ತು ಆಕೆಯ ಪೋಷಕರು ಸಖತ್ ಗೂಸಾ ಕೊಟ್ಟಿದ್ದಾರೆ. ಈ ವೇಳೆ ಪೊಲೀಸರು ಅವರನ್ನು ತಡೆಯುವ ಪ್ರಯತ್ನ ಮಾಡಿದ್ದಾರೆ. ಆದರೂ ಯುವತಿ ಮೋಸ ಮಾಡಿದ್ದಕ್ಕೆ ಪ್ರಿಯಕರನಿಗೆ ಚಪ್ಪಲಿಯಿಂದ ಬಾರಿಸಿದ್ದಾಳೆ.

ಏನಿದು ಪ್ರಕರಣ?
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚೌಳಕೆರೆ ಗ್ರಾಮದ ಉಮೇಶ್ ಪ್ರೀತಿ ಹೆಸರಲ್ಲಿ ವಂಚಿಸಿದ್ದನು. ಕಳೆದ ಮೂರು ವರ್ಷಗಳ ಹಿಂದೆ ಡಿಪ್ಲೋಮಾ ಮಾಡುತ್ತಿದ್ದ ಕೆಳಗೋಟೆಯ ಯುವತಿ ಜೊತೆ ಸ್ನೇಹ ಬೆಳೆಸಿದ್ದನು. ಬಳಿಕ ಮೊಬೈಲ್‍ನಲ್ಲಿ ಮಾತಿನಿಂದಲೇ ಯುವತಿಯ ಮನಸೆಳೆದು ಪ್ರೀತಿ ಎಂಬ ಹಳ್ಳಕ್ಕೆ ಬೀಳಿಸಿದ್ದನು. ನಂತರ ಯುವತಿಯ ಮನೆಯಲ್ಲಿ ನಾಟಕ ಮಾಡಿ ಎರಡು ಕುಟುಂಬದ ನಡುವೆ ಮಾತುಕಥೆ ನಡೆಸಿ ಮದುವೆಗೂ ಒಪ್ಪಿಸಿದ್ದನು. ಹೀಗಾಗಿ ಯುವತಿ ಉಮೇಶ್‍ನನ್ನು ತುಂಬಾ ನಂಬಿದ್ದಳು. ಆದರೆ ಉಮೇಶ್ ಆಕೆಗೆ ಮೋಸ ಮಾಡಿ ಅವಳಿಂದ 15 ಲಕ್ಷ ರೂಪಾಯಿ ಹಣವನ್ನು ಪೀಕಿದ್ದನು. ತನ್ನ ಉನ್ನತ ವ್ಯಾಸಂಗಕ್ಕಾಗಿ ಸಂಗ್ರಹಿಸಿಟ್ಟಿದ್ದ ಹಣವನ್ನು ವಂಚಕನಿಗೆ ಕೊಟ್ಟು ಖಾಲಿ ಕೈ ಆದ ಬಳಿಕ ಯುವತಿಗೆ ವಂಚಿಸಿರೋ ಆಸಾಮಿಯ ಅಸಲಿ ಬಣ್ಣ ಬಯಲಾಗಿದೆ.

 

ಈಕೆಗಷ್ಟೇ ಅಲ್ಲದೇ ಅನೇಕ ಯುವತಿಯರು ಹಾಗೂ ಮಹಿಳೆಯರೊಂದಿಗೆ ಈತ ಪ್ರೀತಿಯ ನಾಟಕವಾಡಿ ಕೆಲವರೊಂದಿಗೆ ಅಕ್ರಮ ಸಂಬಂಧವನ್ನು ಸಹ ಹೊಂದಿದ್ದನು. ಈ ಸತ್ಯ ಉಮೇಶ್‍ನ ಮೊಬೈಲ್‍ನಿಂದಲೇ ಬಯಲಾಗಿದೆ. ಇದರಿಂದಾಗಿ ಈತನ ಅಸಲಿ ಬಂಡವಾಳ ಅರಿತ ಯುವತಿ ತಾನು ಕೊಟ್ಟ ಲಕ್ಷಾಂತರ ರೂಪಾಯಿ ಹಣವನ್ನು ವಾಪಸ್ ಕೇಳಿದ್ದಾಳೆ. ಆಗ ಇನ್ನುಳಿದ ಪ್ರೇಮಿಗಳಂತೆ ನಿನ್ನ ಜೊತೆಯೂ ಚೆನ್ನಾಗಿರ್ತೆನೆಂದು ದೌರ್ಜನ್ಯವೆಸೆಗಿದ್ದಾನೆ. ಹೀಗಾಗಿ ಮನನೊಂದ ಯುವತಿ ಚಿತ್ರದುರ್ಗದ ಮಹಿಳಾ ಠಾಣೆ ಪೊಲೀಸರ ಮೊರೆ ಹೋಗಿದ್ದಳು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

2 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

3 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

23 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago